Homeಕರ್ನಾಟಕನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಮದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ?
ಇದಾವುದು ಹೊಸ ಧರ್ಮ ? ಸನಾತನ??” ಎಂದು ಪ್ರಶ್ನೆ ಮಾಡಿದ್ದಾರೆ.

”ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..” ಎಂದಿದ್ದಾರೆ.

”ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ.. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..” ಎಂದು ಪ್ರಶ್ನೆ ಮಾಡಿದ್ದಾರೆ.

”ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ.
ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ ವಿಶ್ವಮಾನವರಾಗುವ…” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...