Homeಕರ್ನಾಟಕನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಮದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ?
ಇದಾವುದು ಹೊಸ ಧರ್ಮ ? ಸನಾತನ??” ಎಂದು ಪ್ರಶ್ನೆ ಮಾಡಿದ್ದಾರೆ.

”ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..” ಎಂದಿದ್ದಾರೆ.

”ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ.. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..” ಎಂದು ಪ್ರಶ್ನೆ ಮಾಡಿದ್ದಾರೆ.

”ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ.
ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ ವಿಶ್ವಮಾನವರಾಗುವ…” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...