Homeಕರ್ನಾಟಕಭಯ ಹುಟ್ಟಿಸುವ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?: ಅಮಿತ್‌ ಶಾ ದಂಗೆ ಹೇಳಿಕೆಗೆ ಜೈರಾಮ್ ರಮೇಶ್ ತಿರುಗೇಟು

ಭಯ ಹುಟ್ಟಿಸುವ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?: ಅಮಿತ್‌ ಶಾ ದಂಗೆ ಹೇಳಿಕೆಗೆ ಜೈರಾಮ್ ರಮೇಶ್ ತಿರುಗೇಟು

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ನೀಡಿದ್ದ ಹೇಳಿಕೆಗೆ ಇದು ಭಯಪಡಿಸುವ ಹೇಳಿಕೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

”ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸರ್ಕಾರ ರಚಿಸಿದರೆ ರಾಜ್ಯವು ಗಲಭೆಗಳಿಂದ ತುಂಬಿಹೋಗುತ್ತದೆ. ವಂಶಾಡಳಿತ ಮುನ್ನೆಲೆಗೆ ಬರುತ್ತದೆ” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಜೈರಾಮ್ ರಮೇಶ್ ಅವರು, ”ಭಯ ಹುಟ್ಟುಹಾಕುವ ಸಲುವಾಗಿಯೇ ಇಂತಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಮಿತ್ ಶಾ ಹೇಳಿಕೆಯು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ವಿಧಾನಸಭೆ ಚುನಾವಣೆ ಎಂದರೆ ಕೇವಲ ಶಾಸಕರನ್ನು ಆರಿಸುವುದಲ್ಲ, ಬದಲಾಗಿ ರಾಜ್ಯದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಿಡುವುದು” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯು 6.5 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಬುಧವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಶಾ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ”ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆಗಳು ಆಗುತ್ತವೆ’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಕರ್ನಾಟಕ ರಾಜ್ಯದ ಜನತೆ ಕೆಟ್ಟವರಿದ್ದಾರೆಯೇ? ಕಾಂಗ್ರೆಸ್ ಸರಕಾರ ಆಡಳಿತ ಮಾಡಿಲ್ಲವೇ?’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

”ಕಾಂಗ್ರೆಸ್ ಚುನಾವಣೆಯನ್ನೇ ಮಾಡಿಲ್ಲವೇ? ಶಾಂತಿ ಪ್ರಿಯ ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡುತ್ತಿರುವ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು” ಎಂದು ಇದೇ ವೇಳೆ ತಾಕೀತು ಮಾಡಿದರು.

”ಪ್ರಧಾನಿ ಮೋದಿ, ಅಮಿತ್ ಶಾ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಪ್ರಚಾರ ಮಾಡುವುದನ್ನು ಗಮನಿಸಿದರೆ ಅವರು ಹತಾಶರಾಗಿದ್ದು, ಮೋದಿ ಹಾಗೂ  ಶಾ ನೋಡಿ ಮತ ನೀಡಿ ಎಂದು ಬಸವರಾಜ ಬೊಮ್ಮಾಯಿ ಕೇಳುತ್ತಿದ್ದಾರೆ. ರಾಜ್ಯದ ಜನರಿಗೆ ಬಿಜೆಪಿ ಮತ್ತು ಬೊಮ್ಮಾಯಿ ನೀವೇನು ಮಾಡಿದ್ದೀರಿ? ಎಂಬುದನ್ನು ಜನ ಕೇಳುತ್ತಿದ್ದಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

”ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದ್ದು, ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ಒಂದು ಕಡೆ ಭ್ರಷ್ಟಾಚಾರ, ಇನ್ನೊಂದು ಕಡೆ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಅನೇಕ ನ್ಯೂನತೆಗಳಿವೆ. ಬಿಜೆಪಿ ಸರಕಾರ ತೆಗೆದು ಹಾಕಲು ಜನರು ತೀರ್ಮಾನ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...