Homeಕರ್ನಾಟಕಭಯ ಹುಟ್ಟಿಸುವ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?: ಅಮಿತ್‌ ಶಾ ದಂಗೆ ಹೇಳಿಕೆಗೆ ಜೈರಾಮ್ ರಮೇಶ್ ತಿರುಗೇಟು

ಭಯ ಹುಟ್ಟಿಸುವ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ?: ಅಮಿತ್‌ ಶಾ ದಂಗೆ ಹೇಳಿಕೆಗೆ ಜೈರಾಮ್ ರಮೇಶ್ ತಿರುಗೇಟು

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ನೀಡಿದ್ದ ಹೇಳಿಕೆಗೆ ಇದು ಭಯಪಡಿಸುವ ಹೇಳಿಕೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

”ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸರ್ಕಾರ ರಚಿಸಿದರೆ ರಾಜ್ಯವು ಗಲಭೆಗಳಿಂದ ತುಂಬಿಹೋಗುತ್ತದೆ. ವಂಶಾಡಳಿತ ಮುನ್ನೆಲೆಗೆ ಬರುತ್ತದೆ” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಜೈರಾಮ್ ರಮೇಶ್ ಅವರು, ”ಭಯ ಹುಟ್ಟುಹಾಕುವ ಸಲುವಾಗಿಯೇ ಇಂತಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಮಿತ್ ಶಾ ಹೇಳಿಕೆಯು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ವಿಧಾನಸಭೆ ಚುನಾವಣೆ ಎಂದರೆ ಕೇವಲ ಶಾಸಕರನ್ನು ಆರಿಸುವುದಲ್ಲ, ಬದಲಾಗಿ ರಾಜ್ಯದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಿಡುವುದು” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯು 6.5 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಬುಧವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಶಾ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ”ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆಗಳು ಆಗುತ್ತವೆ’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಕರ್ನಾಟಕ ರಾಜ್ಯದ ಜನತೆ ಕೆಟ್ಟವರಿದ್ದಾರೆಯೇ? ಕಾಂಗ್ರೆಸ್ ಸರಕಾರ ಆಡಳಿತ ಮಾಡಿಲ್ಲವೇ?’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

”ಕಾಂಗ್ರೆಸ್ ಚುನಾವಣೆಯನ್ನೇ ಮಾಡಿಲ್ಲವೇ? ಶಾಂತಿ ಪ್ರಿಯ ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡುತ್ತಿರುವ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು” ಎಂದು ಇದೇ ವೇಳೆ ತಾಕೀತು ಮಾಡಿದರು.

”ಪ್ರಧಾನಿ ಮೋದಿ, ಅಮಿತ್ ಶಾ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಪ್ರಚಾರ ಮಾಡುವುದನ್ನು ಗಮನಿಸಿದರೆ ಅವರು ಹತಾಶರಾಗಿದ್ದು, ಮೋದಿ ಹಾಗೂ  ಶಾ ನೋಡಿ ಮತ ನೀಡಿ ಎಂದು ಬಸವರಾಜ ಬೊಮ್ಮಾಯಿ ಕೇಳುತ್ತಿದ್ದಾರೆ. ರಾಜ್ಯದ ಜನರಿಗೆ ಬಿಜೆಪಿ ಮತ್ತು ಬೊಮ್ಮಾಯಿ ನೀವೇನು ಮಾಡಿದ್ದೀರಿ? ಎಂಬುದನ್ನು ಜನ ಕೇಳುತ್ತಿದ್ದಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

”ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದ್ದು, ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ಒಂದು ಕಡೆ ಭ್ರಷ್ಟಾಚಾರ, ಇನ್ನೊಂದು ಕಡೆ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಅನೇಕ ನ್ಯೂನತೆಗಳಿವೆ. ಬಿಜೆಪಿ ಸರಕಾರ ತೆಗೆದು ಹಾಕಲು ಜನರು ತೀರ್ಮಾನ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...