Homeಮುಖಪುಟಚಮೇಲಿ ದೇವಿ ಜೈನ್ ಪ್ರಶಸ್ತಿ: ಪತ್ರಕರ್ತೆ ಅರ್ಫಾ ಖಾನೂಮ್ ಶೆರ್ವಾನಿ, ರೋಹಿಣಿ ಮೋಹನ್ ಮುಡಿಗೆ

ಚಮೇಲಿ ದೇವಿ ಜೈನ್ ಪ್ರಶಸ್ತಿ: ಪತ್ರಕರ್ತೆ ಅರ್ಫಾ ಖಾನೂಮ್ ಶೆರ್ವಾನಿ, ರೋಹಿಣಿ ಮೋಹನ್ ಮುಡಿಗೆ

ಅರ್ಫಾ ಖಾನೂಮ್ ಶೆರ್ವಾನಿ ಹಲವು ಬಾರಿ ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಾವು ಮತ್ತು ಅತ್ಯಾಚಾರದ ಬೆದರಿಕೆಗಳಿಗೆ ಒಳಗಾಗಿದ್ದಾರೆ

- Advertisement -
- Advertisement -

ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಮತ್ತು ಹವ್ಯಾಸಿ ಪತ್ರಕರ್ತೆ ರೋಹಿಣಿ ಮೋಹನ್ ಅವರು ಜಂಟಿಯಾಗಿ ಅತ್ಯುತ್ತಮ ಮಹಿಳಾ ಪತ್ರಕರ್ತೆಯರಾಗಿ 2019 ರ ಚಮೇಲಿ ದೇವಿ ಜೈನ್ ಪ್ರಶಸ್ತಿಯನ್ನು ಪಡೆದಿದ್ದಾರೆ.

1982 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ತಮ್ಮ ಕೆಲಸದ ಮೂಲಕ ಬದಲಾವಣೆ ಉಂಟುಮಾಡಿದ ಮಹಿಳಾ ಪತ್ರಕರ್ತೆಯರಿಗೆ ಚಮೇಲಿ ದೇವಿ ಜೈನ್ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಭಾಷಾ ಮಾಧ್ಯಮಗಳ ಪ್ರತಿನಿಧಿಗಳಾಗಿದ್ದಾರೆ.

ಇದನ್ನೂ ಓದಿ: 4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಇಲ್ಲಿಯವರೆಗೆ ಪ್ರಶಸ್ತಿ ಪಡೆದ 54 ಜನರಲ್ಲಿ ನೀರ್ಜಾ ಚೌಧರಿ, ತವ್ಲೀನ್ ಸಿಂಗ್, ಪ್ರಿಯಾಂಕಾ ದುಬೆ, ಬರ್ಖಾ ದತ್, ಸುಪ್ರಿಯಾ ಶರ್ಮಾ ಮತ್ತು ದಿ ವೈರ್‌ನ ಸಂಪಾದಕರಾದ ಪಮೇಲಾ ಫಿಲಿಪೋಸ್ ಸೇರಿದ್ದಾರೆ.

ಶ್ರೇಷ್ಠತೆ, ವಿಶ್ಲೇಷಣಾತ್ಮಕ ಕೌಶಲ್ಯ, ಸಾಮಾಜಿಕ ಕಾಳಜಿ, ಒಳನೋಟಗಳು, ಶೈಲಿ, ಪ್ರಾವೀಣ್ಯತೆ, ಧೈರ್ಯ ಮತ್ತು ಸಹಾನುಭೂತಿ ಆಯ್ಕೆಯ ಮಾನದಂಡಗಳಾಗಿವೆ.

ಅರ್ಫಾ ಖಾನೂಮ್ ಶೆರ್ವಾನಿ ದಿ ವೈರ್‌ನಲ್ಲಿ ‘ಅರ್ಫಾ ಕಾ ಇಂಡಿಯಾ’ ಮತ್ತು ‘ಹಮ್ ಭೀ ಭಾರತ್’ ಎಂಬ ಎರಡು ವಿಡಿಯೋ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಇವರು ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಗೆ ಹಲವು ಬಾರಿ ಒಳಗಾಗಿದ್ದಾರೆ. ಟಿವಿ ಪತ್ರಿಕೋದ್ಯಮಕ್ಕಾಗಿ ರೆಡ್‌ಇಂಕ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇನ್ನೊಬ್ಬ ಪ್ರಶಸ್ತಿ ವಿಜೇತೆ ರೋಹಿಣಿ ಮೋಹನ್ ಕೂಡ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶ್ರೀಲಂಕಾದ ಅಂತರ್ಯುದ್ಧದ ಕುರಿತಾದ ಪತ್ರಿಕೋದ್ಯಮ ಕೆಲಸದ ಆಧಾರದ ಮೇಲೆ ಎರಡು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರು ಶಕ್ತಿ ಭಟ್ ಮೊದಲ ಪುಸ್ತಕ ಪ್ರಶಸ್ತಿ ಮತ್ತು ಟಾಟಾ ಲಿಟರೇಚರ್ ಲೈವ್ ಪ್ರಶಸ್ತಿ ಪಡೆದಿದ್ದಾರೆ.


ಇದನ್ನೂ ಓದಿ: ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....