Homeಮುಖಪುಟಚಮೇಲಿ ದೇವಿ ಜೈನ್ ಪ್ರಶಸ್ತಿ: ಪತ್ರಕರ್ತೆ ಅರ್ಫಾ ಖಾನೂಮ್ ಶೆರ್ವಾನಿ, ರೋಹಿಣಿ ಮೋಹನ್ ಮುಡಿಗೆ

ಚಮೇಲಿ ದೇವಿ ಜೈನ್ ಪ್ರಶಸ್ತಿ: ಪತ್ರಕರ್ತೆ ಅರ್ಫಾ ಖಾನೂಮ್ ಶೆರ್ವಾನಿ, ರೋಹಿಣಿ ಮೋಹನ್ ಮುಡಿಗೆ

ಅರ್ಫಾ ಖಾನೂಮ್ ಶೆರ್ವಾನಿ ಹಲವು ಬಾರಿ ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಾವು ಮತ್ತು ಅತ್ಯಾಚಾರದ ಬೆದರಿಕೆಗಳಿಗೆ ಒಳಗಾಗಿದ್ದಾರೆ

- Advertisement -
- Advertisement -

ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಮತ್ತು ಹವ್ಯಾಸಿ ಪತ್ರಕರ್ತೆ ರೋಹಿಣಿ ಮೋಹನ್ ಅವರು ಜಂಟಿಯಾಗಿ ಅತ್ಯುತ್ತಮ ಮಹಿಳಾ ಪತ್ರಕರ್ತೆಯರಾಗಿ 2019 ರ ಚಮೇಲಿ ದೇವಿ ಜೈನ್ ಪ್ರಶಸ್ತಿಯನ್ನು ಪಡೆದಿದ್ದಾರೆ.

1982 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ತಮ್ಮ ಕೆಲಸದ ಮೂಲಕ ಬದಲಾವಣೆ ಉಂಟುಮಾಡಿದ ಮಹಿಳಾ ಪತ್ರಕರ್ತೆಯರಿಗೆ ಚಮೇಲಿ ದೇವಿ ಜೈನ್ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಭಾಷಾ ಮಾಧ್ಯಮಗಳ ಪ್ರತಿನಿಧಿಗಳಾಗಿದ್ದಾರೆ.

ಇದನ್ನೂ ಓದಿ: 4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಇಲ್ಲಿಯವರೆಗೆ ಪ್ರಶಸ್ತಿ ಪಡೆದ 54 ಜನರಲ್ಲಿ ನೀರ್ಜಾ ಚೌಧರಿ, ತವ್ಲೀನ್ ಸಿಂಗ್, ಪ್ರಿಯಾಂಕಾ ದುಬೆ, ಬರ್ಖಾ ದತ್, ಸುಪ್ರಿಯಾ ಶರ್ಮಾ ಮತ್ತು ದಿ ವೈರ್‌ನ ಸಂಪಾದಕರಾದ ಪಮೇಲಾ ಫಿಲಿಪೋಸ್ ಸೇರಿದ್ದಾರೆ.

ಶ್ರೇಷ್ಠತೆ, ವಿಶ್ಲೇಷಣಾತ್ಮಕ ಕೌಶಲ್ಯ, ಸಾಮಾಜಿಕ ಕಾಳಜಿ, ಒಳನೋಟಗಳು, ಶೈಲಿ, ಪ್ರಾವೀಣ್ಯತೆ, ಧೈರ್ಯ ಮತ್ತು ಸಹಾನುಭೂತಿ ಆಯ್ಕೆಯ ಮಾನದಂಡಗಳಾಗಿವೆ.

ಅರ್ಫಾ ಖಾನೂಮ್ ಶೆರ್ವಾನಿ ದಿ ವೈರ್‌ನಲ್ಲಿ ‘ಅರ್ಫಾ ಕಾ ಇಂಡಿಯಾ’ ಮತ್ತು ‘ಹಮ್ ಭೀ ಭಾರತ್’ ಎಂಬ ಎರಡು ವಿಡಿಯೋ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಇವರು ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಗೆ ಹಲವು ಬಾರಿ ಒಳಗಾಗಿದ್ದಾರೆ. ಟಿವಿ ಪತ್ರಿಕೋದ್ಯಮಕ್ಕಾಗಿ ರೆಡ್‌ಇಂಕ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇನ್ನೊಬ್ಬ ಪ್ರಶಸ್ತಿ ವಿಜೇತೆ ರೋಹಿಣಿ ಮೋಹನ್ ಕೂಡ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶ್ರೀಲಂಕಾದ ಅಂತರ್ಯುದ್ಧದ ಕುರಿತಾದ ಪತ್ರಿಕೋದ್ಯಮ ಕೆಲಸದ ಆಧಾರದ ಮೇಲೆ ಎರಡು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರು ಶಕ್ತಿ ಭಟ್ ಮೊದಲ ಪುಸ್ತಕ ಪ್ರಶಸ್ತಿ ಮತ್ತು ಟಾಟಾ ಲಿಟರೇಚರ್ ಲೈವ್ ಪ್ರಶಸ್ತಿ ಪಡೆದಿದ್ದಾರೆ.


ಇದನ್ನೂ ಓದಿ: ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...