HomeUncategorizedಅರ್ಕಾವತಿ ಬಡಾವಣೆ | ಸಿದ್ದರಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಅರ್ಕಾವತಿ ಬಡಾವಣೆ | ಸಿದ್ದರಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

- Advertisement -
- Advertisement -

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್‌ಎಸ್‌ ಕೆಂಪಣ್ಣ ಆಯೋಗದ ವರದಿಯನ್ನು ಕೇಳಿರುವುದರಿಂದ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ನಡುವಿನ ಘರ್ಷಣೆ ಮತ್ತಷ್ಟು ಉಲ್ಬಣಗೊಳ್ಳುವ ವೇದಿಕೆ ಸಿದ್ದವಾಗಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಈಗಾಗಲೇ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಇದು ಇನ್ನಷ್ಟು ಸಂಕಷ್ಟ ಎದುರಾಗುವಂತೆ ಮಾಡಲಿದೆ ಎಂದು ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯಪಾಲರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದ ನಂತರ, ನಗರಾಭಿವೃದ್ಧಿ ಇಲಾಖೆಯು 1,861 ಪುಟಗಳ ಮೂಲ ವರದಿಯ ನಾಲ್ಕು ಸಂಪುಟಗಳನ್ನು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಸೆಪ್ಟೆಂಬರ್ 11 ರಂದು ಸಲ್ಲಿಸಿತು. ಡಿಸಿಎಂ ಕಚೇರಿ ಇದನ್ನು ದೃಢಪಡಿಸಿದ್ದು, ನಗರಾಭಿವೃದ್ಧಿ ಇಲಾಖೆಯು ದಾಖಲೆ ಹಸ್ತಾಂತರವನ್ನು ದೃಢೀಕರಿಸಿ ಸೆಪ್ಟೆಂಬರ್ 20 ರಂದು ಟಿಪ್ಪಣಿಯನ್ನು ಸಲ್ಲಿಸಿದೆ.

ಪ್ರತಿಪಕ್ಷ ಬಿಜೆಪಿಯ ಬಹುದಿನಗಳ ಬೇಡಿಕೆಯಂತೆ ಸರಕಾರ ಈ ವರದಿಯನ್ನು ಸಂಪುಟದ ಮುಂದೆ ಮಂಡಿಸಲಿದೆಯೇ ಅಥವಾ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. 2014 ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಸಿಎಂ ಆಗಿದ್ದಾಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡ ದೊಡ್ಡ ಜಮೀನು (541 ಎಕರೆ) ಡಿನೋಟಿಫೈ ಮಾಡಲಾಗಿತ್ತು.

ಇದನ್ನೂ ಓದಿ: ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

ಕಾನೂನು ಉಲ್ಲಂಘಿಸಿದ ಕಾರಣ ಡಿನೋಟಿಫಿಕೇಷನ್ ಕಡತಕ್ಕೆ ಸಹಿ ಹಾಕಿಲ್ಲ: ಶೆಟ್ಟರ್

ಕೆಲವು ರಿಯಲ್‌ಎಸ್ಟೇಟ್‌ ಏಜೆಂಟ್‌ಗಳಿಗೆ ಲಾಭ ಮಾಡಿಕೊಡಲು ಮುಖ್ಯಮಂತ್ರಿ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆಗ ಆಪಾದಿಸಿತ್ತು. ತಮ್ಮ ರಾಜೀನಾಮೆಯ ಕೂಗಿನ ನಡುವೆ, ಸಿದ್ದರಾಮಯ್ಯ ಅವರು ಆಗಸ್ಟ್ 2017 ರಲ್ಲಿ ವರದಿ ಸಲ್ಲಿಸಿದ ನ್ಯಾಯಮೂರ್ತಿ ಕೆಂಪಣ್ಣ ಆಯೋಗವನ್ನು ರಚಿಸಿದ್ದರು.ಅರ್ಕಾವತಿ ಬಡಾವಣೆ

ಆದರೆ ಸಿದ್ದರಾಮಯ್ಯ ಸರಕಾರವಾಗಲಿ ಅಥವಾ ನಂತರ ಬಂದ ಸರಕಾರಗಳಾಗಲಿ ವರದಿಯನ್ನು ಸಂಪುಟದಲ್ಲಾಗಲಿ ಅಥವಾ ವಿಧಾನಮಂಡಲದ ಅಧಿವೇಶನದಲ್ಲಾಗಲಿ ಚರ್ಚೆಗೆ ಮಂಡಿಸಲಿಲ್ಲ.

ಸಿದ್ದರಾಮಯ್ಯ 2.0 ಸರ್ಕಾರದ ಅವರ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 2023 ರಲ್ಲಿ ವಿಧಾನಸಭೆಯಲ್ಲಿ ವರದಿಯ ತೀರ್ಮಾನವನ್ನು ಮಾತ್ರ ಓದಿ, ಇದು ಜಮೀನುಗಳ ಡಿನೋಟಿಫಿಕೇಶನ್‌ನಲ್ಲಿನ ಕಾನೂನು ಉಲ್ಲಂಘನೆಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದರು.

2013ರಲ್ಲಿ ಸಿದ್ದರಾಮಯ್ಯನವರ ಹಿಂದಿನ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರು, ಜಮೀನು ಡಿನೋಟಿಫಿಕೇಶನ್ ಕಾನೂನು ಉಲ್ಲಂಘನೆ ಎಂದು ತಿಳಿದಿದ್ದರಿಂದ ತಾನು ಕಡತಗಳಿಗೆ ಸಹಿ ಮಾಡಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

”ನಾನು ಸಿಎಂ ಆಗಿದ್ದಾಗ ಕಡತಗಳನ್ನು ಅಧ್ಯಯನ ಮಾಡಿದ್ದೆ. ಕಾನೂನು ಉಲ್ಲಂಘನೆ ಆಗಿದ್ದರಿಂದ ನಾನು ಸಹಿ ಮಾಡಿಲ್ಲ, ಆದರೆ ಸಿಎಂ ಆಗಿ ಸಿದ್ದರಾಮಯ್ಯ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ನಾನು ಆಗಿನ ರಾಜ್ಯಪಾಲ ವಜುಭಾಯಿ ರೂಡಾಭಾಯಿ ವಾಲಾ ಅವರನ್ನು ಸಂಪರ್ಕಿಸಿದ್ದೆ, ಆದರೆ ಅವರು ಒಪ್ಪಲಿಲ್ಲ” ಎಂದು ಶೆಟ್ಟರ್ ಅವರು ಹೇಳಿದ್ದಾಗಿ TNIE ವರದಿ ಮಾಡಿದೆ.

”ಸಿದ್ದರಾಮಯ್ಯ ಅವರಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗಬೇಕಾದರೆ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕಿತ್ತು. ಕಾನೂನು ಉಲ್ಲಂಘನೆ ಕುರಿತು ವರದಿಯಲ್ಲಿ ಕೆಲವು ಟೀಕೆಗಳನ್ನು ಮಾಡಿರುವ ಬಗ್ಗೆ ನಮಗೆ ಮಾಹಿತಿ ಇದೆ,” ಎಂದು ಅವರು ಹೇಳಿದ್ದಾರೆ.

ವರದಿಯಲ್ಲಿ ಉಲ್ಲೇಖಿಸಿರುವಂತೆ ಇದು 8,000 ಕೋಟಿ ರೂ.ಗೂ ಹೆಚ್ಚು ಹಗರಣವಾಗಿದೆ. ವಸತಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರ ಹಕ್ಕನ್ನು ನಿರಾಕರಿಸಲಾಗಿದೆ. ವರದಿಯನ್ನು ಶಾಸಕಾಂಗದಲ್ಲಿ ಮಂಡಿಸಬೇಕು ಮತ್ತು ತಪ್ಪಿತಸ್ಥ ಸಿದ್ದರಾಮಯ್ಯ ಆಗಿದ್ದರೂ ಶಿಕ್ಷೆಯಾಗಲಿ,” ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಎಂಎಲ್ಸಿ ಸಿ.ಟಿ.ರವಿ ಹೇಳಿದ್ದಾಗ ವರದಿಯಾಗಿದೆ.

ವಿಡಿಯೊ ನೋಡಿ:ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...