Homeಮುಖಪುಟಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ...

ಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ ಮಾಜಿ ಮುಖ್ಯಸ್ಥರು

- Advertisement -
- Advertisement -

ದೇಶದಲ್ಲಿ ಇತ್ತೀಚೆಗೆ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ, ಭಾರತೀಯ ಮುಸ್ಲಿಮರ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿರುವುದರ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಸಶಸ್ತ್ರ ಪಡೆಗಳ ಐದು ಮಾಜಿ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳು ಹಾಗೂ ದೇಶದ ಗಣ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಉತ್ತರಾಖಂಡದ ಹರಿದ್ವಾರ ಮತ್ತು ದೆಹಲಿಯಲ್ಲಿ ದ್ವೇಷ ಭಾಷಣವನ್ನು ಮಾಡಲಾಗಿತ್ತು. ಪತ್ರದಲ್ಲಿ ಕ್ರಿಶ್ಚಿಯನ್ನರು, ದಲಿತರು ಮತ್ತು ಸಿಖ್ಖರಂತಹ ಇತರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಕೂಡಾ ಉಲ್ಲೇಖಿಸಲಾಗಿದೆ.

ಹಿಂಸಾಚಾರದ ಇಂತಹ ಕರೆಗಳು ಆಂತರಿಕವಾಗಿ ಅಸಾಮರಸ್ಯವನ್ನು ಉಂಟುಮಾಡಬಹುದು ಮತ್ತು ಬಾಹ್ಯ ಶಕ್ತಿಗಳಿಗೆ ಧೈರ್ಯ ತುಂಬಬಹುದು ಎಂದು ಎಚ್ಚರಿಸಿ, ದೇಶದ ಗಡಿಗಳಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

“ರಾಷ್ಟ್ರದೊಳಗೆ ಶಾಂತಿ ಮತ್ತು ಸೌಹಾರ್ದತೆಯ ಯಾವುದೇ ಉಲ್ಲಂಘನೆಯು ದುಷ್ಟ ಬಾಹ್ಯ ಶಕ್ತಿಗಳನ್ನು ಉತ್ತೇಜಿಸುತ್ತದೆ. ನಮ್ಮ ವೈವಿಧ್ಯಮಯ ಮತ್ತು ಬಹುಸಂಖ್ಯೆಯ ಸಮಾಜದಲ್ಲಿ ಯಾವುದೆ ಸಮುದಾಯದ ವಿರುದ್ಧ ಹಿಂಸಾಚಾರಕ್ಕಾಗಿ ಇಂತಹ ಅಬ್ಬರದ ಕರೆಗಳಿಗೆ ಅನುಮತಿ ನೀಡಿದರೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಪೊಲೀಸ್ ಪಡೆಗಳು ಸೇರಿದಂತೆ ಸಮವಸ್ತ್ರದಲ್ಲಿರುವ ನಮ್ಮ ಸೈನಿಕರ ಏಕತೆ ಮತ್ತು ಒಗ್ಗಟ್ಟಿಗೆ ಗಂಭೀರವಾಗಿ ಪರಿಣಾಮ ಬೀರುತ್ತದೆ” ಎಂದು ಪತ್ರ ಹೇಳಿದೆ.

ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ನೇರ ಕರೆ ನೀಡಿದ “ಧರ್ಮ ಸಂಸದ್” ಅನ್ನು ನೇರವಾಗಿ ಉಲ್ಲೇಖಿಸಿರುವ ಪತ್ರವು, “ಹಿಂದೂಗಳ ಧರ್ಮ ಸಂಸದ್ ಎಂಬ 3 ದಿನಗಳ ಧಾರ್ಮಿಕ ಸಮಾವೇಶದಲ್ಲಿ ಮಾಡಿದ ಭಾಷಣಗಳ ವಿಷಯದಿಂದ ನಾವು ಗಂಭೀರವಾಗಿ ವಿಚಲಿತರಾಗಿದ್ದೇವೆ. 2021 ರ ಡಿಸೆಂಬರ್ 17-19 ರ ನಡುವೆ ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪದೇ ಪದೇ ಕರೆಗಳನ್ನು ನೀಡಲಾಯಿತು. ಜೊತೆಗೆ ಅಗತ್ಯವಿದ್ದರೆ, ಹಿಂದೂ ಧರ್ಮವನ್ನು ರಕ್ಷಿಸುವ ಹೆಸರಿನಲ್ಲಿ ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಭಾರತದ ಮುಸ್ಲಿಮರನ್ನು ಕೊಲ್ಲು ಕೂಡಾ ಕರೆ ನೀಡಲಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಿಂದೂ ರಾಷ್ಟ್ರಕ್ಕಾಗಿ ಹೋರಾಡುವ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ ಎಂದು ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ ಘಟನೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇಂತಹ ದೇಶದ್ರೋಹಿ ಸಭೆಗಳನ್ನು ಇತರ ಸ್ಥಳಗಳಲ್ಲಿ ಆಯೋಜಿಸಲಾಗುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

“ಹಿಂಸಾಚಾರಕ್ಕೆ ಕರೆ ನೀಡುವ ಇಂತಹ ಪ್ರಚೋದನೆಯನ್ನು ನಾವು ಸಹಿಸುವುದಿಲ್ಲ. ಇದು ಆಂತರಿಕ ಭದ್ರತೆಯ ಗಂಭೀರ ಉಲ್ಲಂಘನೆ ಮಾಡುವುದು ಮಾತ್ರವಲ್ಲದೆ, ನಮ್ಮ ರಾಷ್ಟ್ರದ ಸಾಮಾಜಿಕ ಸಂರಚನೆಯನ್ನು ನಾಶ ಮಾಡಬಹುದು. ಒಬ್ಬ ಭಾಷಣಗಾರ ಸೇನೆ ಮತ್ತು ಪೊಲೀಸರಿಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ (ಜನಾಂಗೀಯ ಹತ್ಯೆಗೆ) ಎಂದು ಕರೆ ನೀಡಿದ್ದಾರೆ. ಅವರು ನಮ್ಮದೇ ನಾಗರಿಕರ ನರಮೇಧದಲ್ಲಿ ಭಾಗವಹಿಸುವಂತೆ ಸೇನೆಯನ್ನು ಕೇಳಿದ್ದಾರೆ. ಇದು ಖಂಡನೀಯ ಮತ್ತು ಸ್ವೀಕಾರಾರ್ಹವಲ್ಲ” ಎಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್‌ನ ಎಪ್ಪತ್ತಾರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದು, ಹಿಂಸಾಚಾರಕ್ಕೆ ಕರೆ ನೀಡಿರುವುದ ಬಗ್ಗೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ.

ಪೂರ್ಣ ಪತ್ರವನ್ನು ಇಲ್ಲಿ ಓದಿ:

ಇದನ್ನೂ ಓದಿ:ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...