Homeಮುಖಪುಟಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ...

ಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ ಮಾಜಿ ಮುಖ್ಯಸ್ಥರು

- Advertisement -
- Advertisement -

ದೇಶದಲ್ಲಿ ಇತ್ತೀಚೆಗೆ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ, ಭಾರತೀಯ ಮುಸ್ಲಿಮರ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿರುವುದರ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಸಶಸ್ತ್ರ ಪಡೆಗಳ ಐದು ಮಾಜಿ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳು ಹಾಗೂ ದೇಶದ ಗಣ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಉತ್ತರಾಖಂಡದ ಹರಿದ್ವಾರ ಮತ್ತು ದೆಹಲಿಯಲ್ಲಿ ದ್ವೇಷ ಭಾಷಣವನ್ನು ಮಾಡಲಾಗಿತ್ತು. ಪತ್ರದಲ್ಲಿ ಕ್ರಿಶ್ಚಿಯನ್ನರು, ದಲಿತರು ಮತ್ತು ಸಿಖ್ಖರಂತಹ ಇತರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಕೂಡಾ ಉಲ್ಲೇಖಿಸಲಾಗಿದೆ.

ಹಿಂಸಾಚಾರದ ಇಂತಹ ಕರೆಗಳು ಆಂತರಿಕವಾಗಿ ಅಸಾಮರಸ್ಯವನ್ನು ಉಂಟುಮಾಡಬಹುದು ಮತ್ತು ಬಾಹ್ಯ ಶಕ್ತಿಗಳಿಗೆ ಧೈರ್ಯ ತುಂಬಬಹುದು ಎಂದು ಎಚ್ಚರಿಸಿ, ದೇಶದ ಗಡಿಗಳಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

“ರಾಷ್ಟ್ರದೊಳಗೆ ಶಾಂತಿ ಮತ್ತು ಸೌಹಾರ್ದತೆಯ ಯಾವುದೇ ಉಲ್ಲಂಘನೆಯು ದುಷ್ಟ ಬಾಹ್ಯ ಶಕ್ತಿಗಳನ್ನು ಉತ್ತೇಜಿಸುತ್ತದೆ. ನಮ್ಮ ವೈವಿಧ್ಯಮಯ ಮತ್ತು ಬಹುಸಂಖ್ಯೆಯ ಸಮಾಜದಲ್ಲಿ ಯಾವುದೆ ಸಮುದಾಯದ ವಿರುದ್ಧ ಹಿಂಸಾಚಾರಕ್ಕಾಗಿ ಇಂತಹ ಅಬ್ಬರದ ಕರೆಗಳಿಗೆ ಅನುಮತಿ ನೀಡಿದರೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಪೊಲೀಸ್ ಪಡೆಗಳು ಸೇರಿದಂತೆ ಸಮವಸ್ತ್ರದಲ್ಲಿರುವ ನಮ್ಮ ಸೈನಿಕರ ಏಕತೆ ಮತ್ತು ಒಗ್ಗಟ್ಟಿಗೆ ಗಂಭೀರವಾಗಿ ಪರಿಣಾಮ ಬೀರುತ್ತದೆ” ಎಂದು ಪತ್ರ ಹೇಳಿದೆ.

ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ನೇರ ಕರೆ ನೀಡಿದ “ಧರ್ಮ ಸಂಸದ್” ಅನ್ನು ನೇರವಾಗಿ ಉಲ್ಲೇಖಿಸಿರುವ ಪತ್ರವು, “ಹಿಂದೂಗಳ ಧರ್ಮ ಸಂಸದ್ ಎಂಬ 3 ದಿನಗಳ ಧಾರ್ಮಿಕ ಸಮಾವೇಶದಲ್ಲಿ ಮಾಡಿದ ಭಾಷಣಗಳ ವಿಷಯದಿಂದ ನಾವು ಗಂಭೀರವಾಗಿ ವಿಚಲಿತರಾಗಿದ್ದೇವೆ. 2021 ರ ಡಿಸೆಂಬರ್ 17-19 ರ ನಡುವೆ ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪದೇ ಪದೇ ಕರೆಗಳನ್ನು ನೀಡಲಾಯಿತು. ಜೊತೆಗೆ ಅಗತ್ಯವಿದ್ದರೆ, ಹಿಂದೂ ಧರ್ಮವನ್ನು ರಕ್ಷಿಸುವ ಹೆಸರಿನಲ್ಲಿ ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಭಾರತದ ಮುಸ್ಲಿಮರನ್ನು ಕೊಲ್ಲು ಕೂಡಾ ಕರೆ ನೀಡಲಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಿಂದೂ ರಾಷ್ಟ್ರಕ್ಕಾಗಿ ಹೋರಾಡುವ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ ಎಂದು ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ ಘಟನೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇಂತಹ ದೇಶದ್ರೋಹಿ ಸಭೆಗಳನ್ನು ಇತರ ಸ್ಥಳಗಳಲ್ಲಿ ಆಯೋಜಿಸಲಾಗುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

“ಹಿಂಸಾಚಾರಕ್ಕೆ ಕರೆ ನೀಡುವ ಇಂತಹ ಪ್ರಚೋದನೆಯನ್ನು ನಾವು ಸಹಿಸುವುದಿಲ್ಲ. ಇದು ಆಂತರಿಕ ಭದ್ರತೆಯ ಗಂಭೀರ ಉಲ್ಲಂಘನೆ ಮಾಡುವುದು ಮಾತ್ರವಲ್ಲದೆ, ನಮ್ಮ ರಾಷ್ಟ್ರದ ಸಾಮಾಜಿಕ ಸಂರಚನೆಯನ್ನು ನಾಶ ಮಾಡಬಹುದು. ಒಬ್ಬ ಭಾಷಣಗಾರ ಸೇನೆ ಮತ್ತು ಪೊಲೀಸರಿಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ (ಜನಾಂಗೀಯ ಹತ್ಯೆಗೆ) ಎಂದು ಕರೆ ನೀಡಿದ್ದಾರೆ. ಅವರು ನಮ್ಮದೇ ನಾಗರಿಕರ ನರಮೇಧದಲ್ಲಿ ಭಾಗವಹಿಸುವಂತೆ ಸೇನೆಯನ್ನು ಕೇಳಿದ್ದಾರೆ. ಇದು ಖಂಡನೀಯ ಮತ್ತು ಸ್ವೀಕಾರಾರ್ಹವಲ್ಲ” ಎಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್‌ನ ಎಪ್ಪತ್ತಾರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದು, ಹಿಂಸಾಚಾರಕ್ಕೆ ಕರೆ ನೀಡಿರುವುದ ಬಗ್ಗೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ.

ಪೂರ್ಣ ಪತ್ರವನ್ನು ಇಲ್ಲಿ ಓದಿ:

ಇದನ್ನೂ ಓದಿ:ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...