Homeಮುಖಪುಟಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

- Advertisement -
- Advertisement -

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ

ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ ಸಹಚರರಾದ ಕೃಷ್ಣಕುಮಾರ್ ಮತ್ತು ಅಪ್ಪು ಕೂಡ ಪೊಲೀಸರಿಗೆ ಬೇಕಾಗಿದ್ದಾರೆ. ಆರ್ಮ್‌ಸ್ಟ್ರಾಂಗ್ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವ್ಯಾಪಾರಿ ಕುಟುಂಬದ ಕಾನೂನು ಪದವೀಧರನಾಗಿರುವ ಆರೋಪಿ ಸೆಂಥಿಲ್ ತಮಿಳುನಾಡಿನಲ್ಲಿ ಆರು ಕೊಲೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎಂದು ತಮಿಳುನಾಡು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸುಲಿಗೆ, ಹಿಂಸಾಚಾರ ಮತ್ತು ‘ಕಟ್ಟೆ’ ಪಂಚಾಯತ್‌ಗಳನ್ನು ನಿರ್ವಹಿಸುವುದು ಸೇರಿದಂತೆ ಹಲವು ಅಪರಾಧಗಳಲ್ಲಿ ಅವನು ಭಾಗಿಯಾಗಿದ್ದರೂ, ಈ ವರೆಗೆ ಆತ ಪೊಲೀಸ್ ಬಲೆಗೆ ಬಿದ್ದಿಲ್ಲ ಎಂದು ವರದಿಯಾಗಿದೆ.

ವಾಷರ್‌ಮೆನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೆಂಥಿಲ್ ಅವರನ್ನು A+ ಹಿಸ್ಟರಿ ಶೀಟರ್ ಎಂದು ವರ್ಗೀಕರಿಸಲಾಗಿದೆ. ಸೆಂಥಿಲ್ ಅಪಾಯಕಾರಿ ಆರೋಪಿಯಾಗಿದ್ದು, ಆತನ ಚಲನವಲನವನ್ನು ನಿರ್ಬಂಧಿಸಲು ಪೊಲೀಸರು ಬ್ಯೂರೋ ಆಫ್ ಇಮಿಗ್ರೇಷನ್‌ಗೆ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಅನ್ನು ಸಹ ಸಲ್ಲಿಸಿದ್ದಾರೆ. ರೆಡ್ ಕಾರ್ನರ್ ನೋಟಿಸ್ ಅಂತರಾಷ್ಟ್ರೀಯ ಕಾನೂನು ಜಾರಿ ಸಂಸ್ಥೆಗಳು ಸೆಂಥಿಲ್ ಅನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸಲು ಅನುವು ಮಾಡಿಕೊಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈ ಪೊಲೀಸ್ ಕಮಿಷನರ್ ಎಂ. ಅರುಣ್ ವಿಶೇಷ ತಂಡವನ್ನು ರಚಿಸಿದ್ದು, ಸೆಂಥಿಲ್ ಪತ್ತೆಗೆ ನಿರಂತರ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ. ಹದಿನೇಳು ಪೊಲೀಸ್ ತಂಡಗಳು ಪ್ರಸ್ತುತ ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ತನಿಖೆ ನಡೆಸುತ್ತಿವೆ, ಇದು ಇಲ್ಲಿಯವರೆಗೆ 27 ವ್ಯಕ್ತಿಗಳ ಬಂಧನ ನಡೆಸಲಾಗಿದೆ. ಇವರಲ್ಲಿ ಭಾರಿ ಕ್ರಿಮಿನಲ್‌ಗಳು, ರೌಡಿ ಶೀಟರ್‌ಗಳು ಮತ್ತು ಎಐಎಡಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿವೆ.

ಕೊಲೆಯಾಗಿ ಸಮಯ ಕಳೆದರೂ, ಆರೋಪಿ ಸೆಂಥಿಲ್‌ನನ್ನು ಹುಡುಕಲು ಪೊಲೀಸರು ಆತನ ಸುಮಾರು 20 ವರ್ಷಗಳಷ್ಟು ಹಳೆಯ ಪೋಟೋವನ್ನು ಅವಲಂಬಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವಿವರವಾದ 5,000 ಪುಟಗಳ ಚಾರ್ಜ್ ಶೀಟ್‌ನಲ್ಲಿ ಆರ್ಮ್‌ಸ್ಟ್ರಾಂಗ್ ಹತ್ಯೆ ಮಾಡಲು ಮೂರು ಗ್ಯಾಂಗ್‌ಗಳು ಸಹಕರಿಸಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...