Homeಮುಖಪುಟಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

- Advertisement -
- Advertisement -

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ

ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ ಸಹಚರರಾದ ಕೃಷ್ಣಕುಮಾರ್ ಮತ್ತು ಅಪ್ಪು ಕೂಡ ಪೊಲೀಸರಿಗೆ ಬೇಕಾಗಿದ್ದಾರೆ. ಆರ್ಮ್‌ಸ್ಟ್ರಾಂಗ್ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವ್ಯಾಪಾರಿ ಕುಟುಂಬದ ಕಾನೂನು ಪದವೀಧರನಾಗಿರುವ ಆರೋಪಿ ಸೆಂಥಿಲ್ ತಮಿಳುನಾಡಿನಲ್ಲಿ ಆರು ಕೊಲೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎಂದು ತಮಿಳುನಾಡು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸುಲಿಗೆ, ಹಿಂಸಾಚಾರ ಮತ್ತು ‘ಕಟ್ಟೆ’ ಪಂಚಾಯತ್‌ಗಳನ್ನು ನಿರ್ವಹಿಸುವುದು ಸೇರಿದಂತೆ ಹಲವು ಅಪರಾಧಗಳಲ್ಲಿ ಅವನು ಭಾಗಿಯಾಗಿದ್ದರೂ, ಈ ವರೆಗೆ ಆತ ಪೊಲೀಸ್ ಬಲೆಗೆ ಬಿದ್ದಿಲ್ಲ ಎಂದು ವರದಿಯಾಗಿದೆ.

ವಾಷರ್‌ಮೆನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೆಂಥಿಲ್ ಅವರನ್ನು A+ ಹಿಸ್ಟರಿ ಶೀಟರ್ ಎಂದು ವರ್ಗೀಕರಿಸಲಾಗಿದೆ. ಸೆಂಥಿಲ್ ಅಪಾಯಕಾರಿ ಆರೋಪಿಯಾಗಿದ್ದು, ಆತನ ಚಲನವಲನವನ್ನು ನಿರ್ಬಂಧಿಸಲು ಪೊಲೀಸರು ಬ್ಯೂರೋ ಆಫ್ ಇಮಿಗ್ರೇಷನ್‌ಗೆ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಅನ್ನು ಸಹ ಸಲ್ಲಿಸಿದ್ದಾರೆ. ರೆಡ್ ಕಾರ್ನರ್ ನೋಟಿಸ್ ಅಂತರಾಷ್ಟ್ರೀಯ ಕಾನೂನು ಜಾರಿ ಸಂಸ್ಥೆಗಳು ಸೆಂಥಿಲ್ ಅನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸಲು ಅನುವು ಮಾಡಿಕೊಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈ ಪೊಲೀಸ್ ಕಮಿಷನರ್ ಎಂ. ಅರುಣ್ ವಿಶೇಷ ತಂಡವನ್ನು ರಚಿಸಿದ್ದು, ಸೆಂಥಿಲ್ ಪತ್ತೆಗೆ ನಿರಂತರ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ. ಹದಿನೇಳು ಪೊಲೀಸ್ ತಂಡಗಳು ಪ್ರಸ್ತುತ ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ತನಿಖೆ ನಡೆಸುತ್ತಿವೆ, ಇದು ಇಲ್ಲಿಯವರೆಗೆ 27 ವ್ಯಕ್ತಿಗಳ ಬಂಧನ ನಡೆಸಲಾಗಿದೆ. ಇವರಲ್ಲಿ ಭಾರಿ ಕ್ರಿಮಿನಲ್‌ಗಳು, ರೌಡಿ ಶೀಟರ್‌ಗಳು ಮತ್ತು ಎಐಎಡಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿವೆ.

ಕೊಲೆಯಾಗಿ ಸಮಯ ಕಳೆದರೂ, ಆರೋಪಿ ಸೆಂಥಿಲ್‌ನನ್ನು ಹುಡುಕಲು ಪೊಲೀಸರು ಆತನ ಸುಮಾರು 20 ವರ್ಷಗಳಷ್ಟು ಹಳೆಯ ಪೋಟೋವನ್ನು ಅವಲಂಬಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವಿವರವಾದ 5,000 ಪುಟಗಳ ಚಾರ್ಜ್ ಶೀಟ್‌ನಲ್ಲಿ ಆರ್ಮ್‌ಸ್ಟ್ರಾಂಗ್ ಹತ್ಯೆ ಮಾಡಲು ಮೂರು ಗ್ಯಾಂಗ್‌ಗಳು ಸಹಕರಿಸಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...