Homeಮುಖಪುಟಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

- Advertisement -
- Advertisement -

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ

ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ ಸಹಚರರಾದ ಕೃಷ್ಣಕುಮಾರ್ ಮತ್ತು ಅಪ್ಪು ಕೂಡ ಪೊಲೀಸರಿಗೆ ಬೇಕಾಗಿದ್ದಾರೆ. ಆರ್ಮ್‌ಸ್ಟ್ರಾಂಗ್ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವ್ಯಾಪಾರಿ ಕುಟುಂಬದ ಕಾನೂನು ಪದವೀಧರನಾಗಿರುವ ಆರೋಪಿ ಸೆಂಥಿಲ್ ತಮಿಳುನಾಡಿನಲ್ಲಿ ಆರು ಕೊಲೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎಂದು ತಮಿಳುನಾಡು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸುಲಿಗೆ, ಹಿಂಸಾಚಾರ ಮತ್ತು ‘ಕಟ್ಟೆ’ ಪಂಚಾಯತ್‌ಗಳನ್ನು ನಿರ್ವಹಿಸುವುದು ಸೇರಿದಂತೆ ಹಲವು ಅಪರಾಧಗಳಲ್ಲಿ ಅವನು ಭಾಗಿಯಾಗಿದ್ದರೂ, ಈ ವರೆಗೆ ಆತ ಪೊಲೀಸ್ ಬಲೆಗೆ ಬಿದ್ದಿಲ್ಲ ಎಂದು ವರದಿಯಾಗಿದೆ.

ವಾಷರ್‌ಮೆನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೆಂಥಿಲ್ ಅವರನ್ನು A+ ಹಿಸ್ಟರಿ ಶೀಟರ್ ಎಂದು ವರ್ಗೀಕರಿಸಲಾಗಿದೆ. ಸೆಂಥಿಲ್ ಅಪಾಯಕಾರಿ ಆರೋಪಿಯಾಗಿದ್ದು, ಆತನ ಚಲನವಲನವನ್ನು ನಿರ್ಬಂಧಿಸಲು ಪೊಲೀಸರು ಬ್ಯೂರೋ ಆಫ್ ಇಮಿಗ್ರೇಷನ್‌ಗೆ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಅನ್ನು ಸಹ ಸಲ್ಲಿಸಿದ್ದಾರೆ. ರೆಡ್ ಕಾರ್ನರ್ ನೋಟಿಸ್ ಅಂತರಾಷ್ಟ್ರೀಯ ಕಾನೂನು ಜಾರಿ ಸಂಸ್ಥೆಗಳು ಸೆಂಥಿಲ್ ಅನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸಲು ಅನುವು ಮಾಡಿಕೊಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈ ಪೊಲೀಸ್ ಕಮಿಷನರ್ ಎಂ. ಅರುಣ್ ವಿಶೇಷ ತಂಡವನ್ನು ರಚಿಸಿದ್ದು, ಸೆಂಥಿಲ್ ಪತ್ತೆಗೆ ನಿರಂತರ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ. ಹದಿನೇಳು ಪೊಲೀಸ್ ತಂಡಗಳು ಪ್ರಸ್ತುತ ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ತನಿಖೆ ನಡೆಸುತ್ತಿವೆ, ಇದು ಇಲ್ಲಿಯವರೆಗೆ 27 ವ್ಯಕ್ತಿಗಳ ಬಂಧನ ನಡೆಸಲಾಗಿದೆ. ಇವರಲ್ಲಿ ಭಾರಿ ಕ್ರಿಮಿನಲ್‌ಗಳು, ರೌಡಿ ಶೀಟರ್‌ಗಳು ಮತ್ತು ಎಐಎಡಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿವೆ.

ಕೊಲೆಯಾಗಿ ಸಮಯ ಕಳೆದರೂ, ಆರೋಪಿ ಸೆಂಥಿಲ್‌ನನ್ನು ಹುಡುಕಲು ಪೊಲೀಸರು ಆತನ ಸುಮಾರು 20 ವರ್ಷಗಳಷ್ಟು ಹಳೆಯ ಪೋಟೋವನ್ನು ಅವಲಂಬಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವಿವರವಾದ 5,000 ಪುಟಗಳ ಚಾರ್ಜ್ ಶೀಟ್‌ನಲ್ಲಿ ಆರ್ಮ್‌ಸ್ಟ್ರಾಂಗ್ ಹತ್ಯೆ ಮಾಡಲು ಮೂರು ಗ್ಯಾಂಗ್‌ಗಳು ಸಹಕರಿಸಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...