Homeಮುಖಪುಟಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

- Advertisement -
- Advertisement -

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ

ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ ಸಹಚರರಾದ ಕೃಷ್ಣಕುಮಾರ್ ಮತ್ತು ಅಪ್ಪು ಕೂಡ ಪೊಲೀಸರಿಗೆ ಬೇಕಾಗಿದ್ದಾರೆ. ಆರ್ಮ್‌ಸ್ಟ್ರಾಂಗ್ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವ್ಯಾಪಾರಿ ಕುಟುಂಬದ ಕಾನೂನು ಪದವೀಧರನಾಗಿರುವ ಆರೋಪಿ ಸೆಂಥಿಲ್ ತಮಿಳುನಾಡಿನಲ್ಲಿ ಆರು ಕೊಲೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎಂದು ತಮಿಳುನಾಡು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸುಲಿಗೆ, ಹಿಂಸಾಚಾರ ಮತ್ತು ‘ಕಟ್ಟೆ’ ಪಂಚಾಯತ್‌ಗಳನ್ನು ನಿರ್ವಹಿಸುವುದು ಸೇರಿದಂತೆ ಹಲವು ಅಪರಾಧಗಳಲ್ಲಿ ಅವನು ಭಾಗಿಯಾಗಿದ್ದರೂ, ಈ ವರೆಗೆ ಆತ ಪೊಲೀಸ್ ಬಲೆಗೆ ಬಿದ್ದಿಲ್ಲ ಎಂದು ವರದಿಯಾಗಿದೆ.

ವಾಷರ್‌ಮೆನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೆಂಥಿಲ್ ಅವರನ್ನು A+ ಹಿಸ್ಟರಿ ಶೀಟರ್ ಎಂದು ವರ್ಗೀಕರಿಸಲಾಗಿದೆ. ಸೆಂಥಿಲ್ ಅಪಾಯಕಾರಿ ಆರೋಪಿಯಾಗಿದ್ದು, ಆತನ ಚಲನವಲನವನ್ನು ನಿರ್ಬಂಧಿಸಲು ಪೊಲೀಸರು ಬ್ಯೂರೋ ಆಫ್ ಇಮಿಗ್ರೇಷನ್‌ಗೆ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಅನ್ನು ಸಹ ಸಲ್ಲಿಸಿದ್ದಾರೆ. ರೆಡ್ ಕಾರ್ನರ್ ನೋಟಿಸ್ ಅಂತರಾಷ್ಟ್ರೀಯ ಕಾನೂನು ಜಾರಿ ಸಂಸ್ಥೆಗಳು ಸೆಂಥಿಲ್ ಅನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸಲು ಅನುವು ಮಾಡಿಕೊಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈ ಪೊಲೀಸ್ ಕಮಿಷನರ್ ಎಂ. ಅರುಣ್ ವಿಶೇಷ ತಂಡವನ್ನು ರಚಿಸಿದ್ದು, ಸೆಂಥಿಲ್ ಪತ್ತೆಗೆ ನಿರಂತರ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ. ಹದಿನೇಳು ಪೊಲೀಸ್ ತಂಡಗಳು ಪ್ರಸ್ತುತ ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ತನಿಖೆ ನಡೆಸುತ್ತಿವೆ, ಇದು ಇಲ್ಲಿಯವರೆಗೆ 27 ವ್ಯಕ್ತಿಗಳ ಬಂಧನ ನಡೆಸಲಾಗಿದೆ. ಇವರಲ್ಲಿ ಭಾರಿ ಕ್ರಿಮಿನಲ್‌ಗಳು, ರೌಡಿ ಶೀಟರ್‌ಗಳು ಮತ್ತು ಎಐಎಡಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿವೆ.

ಕೊಲೆಯಾಗಿ ಸಮಯ ಕಳೆದರೂ, ಆರೋಪಿ ಸೆಂಥಿಲ್‌ನನ್ನು ಹುಡುಕಲು ಪೊಲೀಸರು ಆತನ ಸುಮಾರು 20 ವರ್ಷಗಳಷ್ಟು ಹಳೆಯ ಪೋಟೋವನ್ನು ಅವಲಂಬಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವಿವರವಾದ 5,000 ಪುಟಗಳ ಚಾರ್ಜ್ ಶೀಟ್‌ನಲ್ಲಿ ಆರ್ಮ್‌ಸ್ಟ್ರಾಂಗ್ ಹತ್ಯೆ ಮಾಡಲು ಮೂರು ಗ್ಯಾಂಗ್‌ಗಳು ಸಹಕರಿಸಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...