Homeಚಳವಳಿಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ

- Advertisement -
- Advertisement -

ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸಶಸ್ತ್ರ ಪಡೆಗಳ ಅಲ್ಪಾವದಿ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಒಕ್ಕೂಟ ಸರ್ಕಾರದ ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್‍ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಸಿಡಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ, ಅದನ್ನು ನಂದಿಸಲು ರೈಲ್ವೆ ಸಿಬ್ಬಂದಿಗಳು ಹರಸಾಹಸಪಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಓಡಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊ ಹರಿದಾಡುತ್ತಿವೆ. ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ.

ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳಲ್ಲಿ ನಿಂತು ರೈಲು ತಡೆದು ಹಳಿ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಅಲ್ಲಿ ಸೇರಿದ್ದ ಭಾರೀ ಜನಸಮೂಹವು ರೈಲ್ವೇ ಆಸ್ತಿಗೆ ಹಾನಿಗೊಳಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಪೊಲೀಸರು ಶಾಂತಿ ಕಾಪಾಡುವಂತೆ ಜನರಿಗೆ ಕೇಳಿಕೊಂಡಿದ್ದಾರೆ.

ಸಹರ್ಸಾದಲ್ಲಿ, ರೈಲು ಸಂಚಾರ ಅಡ್ಡಿಪಡಿಸುತ್ತಿರುವುದನ್ನು ತಡೆಯಲು ಬಂದ ಪೊಲೀಸರಿಗೆ ವಿದ್ಯಾರ್ಥಿಗಳು ರೈಲು ನಿಲ್ದಾಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಚಪ್ರಾದಲ್ಲಿ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಹೆದ್ದಾರಿಯಲ್ಲಿನ ಬಸ್ಸುಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲೂ ಪ್ರತಿಭಟನೆಗಳು ನಡೆದಿದ್ದು ವರದಿಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ, ಬಿಹಾರದ ಮುಜಾಫರ್‌ಪುರ ಮತ್ತು ಬಕ್ಸಾರ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ಅಗ್ನಿಪಥ್, ಟೂರ್ ಆಫ್ ಡ್ಯೂಟಿ ಸ್ಕೀಮ್, ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೈನಿಕರ ನೇಮಕಾತಿ ಮಾಡುತ್ತದೆ. ಇದು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದ ಹುದ್ದೆಯಾಗಿದ್ದು, ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ.

ಸರ್ಕಾರದ ಹೊಸ ನೇಮಕಾತಿ ಯೋಜನೆಯು, ಸೈನ್ಯದ ಸಂಬಳ ಮತ್ತು ಪಿಂಚಣಿ ಮೊತ್ತಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಅಗ್ನಿಪಥ್ ಯೋಜನೆಯಡಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45 ಸಾವಿರ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯ ಸೇವೆಗಳಿಗೆ ಸೇರಿಸಲಾಗುತ್ತದೆ. ಈ ಅವಧಿಯಲ್ಲಿ, ಅವರಿಗೆ ಮಾಸಿಕ ವೇತನವನ್ನು ರೂ 30,000-40,000 ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಈ ವೇಳೆ ಅವರಿಗೆ ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳು ಸಿಗಲಿದೆ.

ಇದನ್ನೂ ಓದಿ: ‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ 25% ಜನರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ನಂತರ ಅವರನ್ನು ಪೂರ್ಣ 15 ವರ್ಷಗಳ ಕಾಲ ಅಧಿಕಾರೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಉಳಿದವರನ್ನು ಕಡ್ಡಾಯ ನಿವೃತ್ತಿಗೆ ಮಾಡಿ 11-12 ಲಕ್ಷದ ಪ್ಯಾಕೇಜ್‌‌ ನೀಡಲಾಗುತ್ತದೆ. ಆದರೆ ಅವರಿಗೆ ಪಿಂಚಣಿಯನ್ನು ನೀಡಲಾಗುವುದಿಲ್ಲ. ಸರ್ಕಾರದ ಈ ಹೊಸ ನೀತಿಗೆ ಮಾಜಿ ಸೈನಾಧಿಕಾರಿಗಳು ಸೇರಿದಂತೆ ಹಲವಾರು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...