Homeಚಳವಳಿಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ

- Advertisement -
- Advertisement -

ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸಶಸ್ತ್ರ ಪಡೆಗಳ ಅಲ್ಪಾವದಿ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಒಕ್ಕೂಟ ಸರ್ಕಾರದ ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್‍ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಸಿಡಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ, ಅದನ್ನು ನಂದಿಸಲು ರೈಲ್ವೆ ಸಿಬ್ಬಂದಿಗಳು ಹರಸಾಹಸಪಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಓಡಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊ ಹರಿದಾಡುತ್ತಿವೆ. ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ.

ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳಲ್ಲಿ ನಿಂತು ರೈಲು ತಡೆದು ಹಳಿ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಅಲ್ಲಿ ಸೇರಿದ್ದ ಭಾರೀ ಜನಸಮೂಹವು ರೈಲ್ವೇ ಆಸ್ತಿಗೆ ಹಾನಿಗೊಳಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಪೊಲೀಸರು ಶಾಂತಿ ಕಾಪಾಡುವಂತೆ ಜನರಿಗೆ ಕೇಳಿಕೊಂಡಿದ್ದಾರೆ.

ಸಹರ್ಸಾದಲ್ಲಿ, ರೈಲು ಸಂಚಾರ ಅಡ್ಡಿಪಡಿಸುತ್ತಿರುವುದನ್ನು ತಡೆಯಲು ಬಂದ ಪೊಲೀಸರಿಗೆ ವಿದ್ಯಾರ್ಥಿಗಳು ರೈಲು ನಿಲ್ದಾಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಚಪ್ರಾದಲ್ಲಿ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಹೆದ್ದಾರಿಯಲ್ಲಿನ ಬಸ್ಸುಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲೂ ಪ್ರತಿಭಟನೆಗಳು ನಡೆದಿದ್ದು ವರದಿಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ, ಬಿಹಾರದ ಮುಜಾಫರ್‌ಪುರ ಮತ್ತು ಬಕ್ಸಾರ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ಅಗ್ನಿಪಥ್, ಟೂರ್ ಆಫ್ ಡ್ಯೂಟಿ ಸ್ಕೀಮ್, ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೈನಿಕರ ನೇಮಕಾತಿ ಮಾಡುತ್ತದೆ. ಇದು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದ ಹುದ್ದೆಯಾಗಿದ್ದು, ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ.

ಸರ್ಕಾರದ ಹೊಸ ನೇಮಕಾತಿ ಯೋಜನೆಯು, ಸೈನ್ಯದ ಸಂಬಳ ಮತ್ತು ಪಿಂಚಣಿ ಮೊತ್ತಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಅಗ್ನಿಪಥ್ ಯೋಜನೆಯಡಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45 ಸಾವಿರ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯ ಸೇವೆಗಳಿಗೆ ಸೇರಿಸಲಾಗುತ್ತದೆ. ಈ ಅವಧಿಯಲ್ಲಿ, ಅವರಿಗೆ ಮಾಸಿಕ ವೇತನವನ್ನು ರೂ 30,000-40,000 ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಈ ವೇಳೆ ಅವರಿಗೆ ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳು ಸಿಗಲಿದೆ.

ಇದನ್ನೂ ಓದಿ: ‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ 25% ಜನರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ನಂತರ ಅವರನ್ನು ಪೂರ್ಣ 15 ವರ್ಷಗಳ ಕಾಲ ಅಧಿಕಾರೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಉಳಿದವರನ್ನು ಕಡ್ಡಾಯ ನಿವೃತ್ತಿಗೆ ಮಾಡಿ 11-12 ಲಕ್ಷದ ಪ್ಯಾಕೇಜ್‌‌ ನೀಡಲಾಗುತ್ತದೆ. ಆದರೆ ಅವರಿಗೆ ಪಿಂಚಣಿಯನ್ನು ನೀಡಲಾಗುವುದಿಲ್ಲ. ಸರ್ಕಾರದ ಈ ಹೊಸ ನೀತಿಗೆ ಮಾಜಿ ಸೈನಾಧಿಕಾರಿಗಳು ಸೇರಿದಂತೆ ಹಲವಾರು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...