Homeಚಳವಳಿಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ

- Advertisement -
- Advertisement -

ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸಶಸ್ತ್ರ ಪಡೆಗಳ ಅಲ್ಪಾವದಿ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಒಕ್ಕೂಟ ಸರ್ಕಾರದ ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್‍ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಸಿಡಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ, ಅದನ್ನು ನಂದಿಸಲು ರೈಲ್ವೆ ಸಿಬ್ಬಂದಿಗಳು ಹರಸಾಹಸಪಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಓಡಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊ ಹರಿದಾಡುತ್ತಿವೆ. ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ.

ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳಲ್ಲಿ ನಿಂತು ರೈಲು ತಡೆದು ಹಳಿ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಅಲ್ಲಿ ಸೇರಿದ್ದ ಭಾರೀ ಜನಸಮೂಹವು ರೈಲ್ವೇ ಆಸ್ತಿಗೆ ಹಾನಿಗೊಳಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಪೊಲೀಸರು ಶಾಂತಿ ಕಾಪಾಡುವಂತೆ ಜನರಿಗೆ ಕೇಳಿಕೊಂಡಿದ್ದಾರೆ.

ಸಹರ್ಸಾದಲ್ಲಿ, ರೈಲು ಸಂಚಾರ ಅಡ್ಡಿಪಡಿಸುತ್ತಿರುವುದನ್ನು ತಡೆಯಲು ಬಂದ ಪೊಲೀಸರಿಗೆ ವಿದ್ಯಾರ್ಥಿಗಳು ರೈಲು ನಿಲ್ದಾಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಚಪ್ರಾದಲ್ಲಿ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಹೆದ್ದಾರಿಯಲ್ಲಿನ ಬಸ್ಸುಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲೂ ಪ್ರತಿಭಟನೆಗಳು ನಡೆದಿದ್ದು ವರದಿಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ, ಬಿಹಾರದ ಮುಜಾಫರ್‌ಪುರ ಮತ್ತು ಬಕ್ಸಾರ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ಅಗ್ನಿಪಥ್, ಟೂರ್ ಆಫ್ ಡ್ಯೂಟಿ ಸ್ಕೀಮ್, ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೈನಿಕರ ನೇಮಕಾತಿ ಮಾಡುತ್ತದೆ. ಇದು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದ ಹುದ್ದೆಯಾಗಿದ್ದು, ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ.

ಸರ್ಕಾರದ ಹೊಸ ನೇಮಕಾತಿ ಯೋಜನೆಯು, ಸೈನ್ಯದ ಸಂಬಳ ಮತ್ತು ಪಿಂಚಣಿ ಮೊತ್ತಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಅಗ್ನಿಪಥ್ ಯೋಜನೆಯಡಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45 ಸಾವಿರ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯ ಸೇವೆಗಳಿಗೆ ಸೇರಿಸಲಾಗುತ್ತದೆ. ಈ ಅವಧಿಯಲ್ಲಿ, ಅವರಿಗೆ ಮಾಸಿಕ ವೇತನವನ್ನು ರೂ 30,000-40,000 ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಈ ವೇಳೆ ಅವರಿಗೆ ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳು ಸಿಗಲಿದೆ.

ಇದನ್ನೂ ಓದಿ: ‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ 25% ಜನರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ನಂತರ ಅವರನ್ನು ಪೂರ್ಣ 15 ವರ್ಷಗಳ ಕಾಲ ಅಧಿಕಾರೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಉಳಿದವರನ್ನು ಕಡ್ಡಾಯ ನಿವೃತ್ತಿಗೆ ಮಾಡಿ 11-12 ಲಕ್ಷದ ಪ್ಯಾಕೇಜ್‌‌ ನೀಡಲಾಗುತ್ತದೆ. ಆದರೆ ಅವರಿಗೆ ಪಿಂಚಣಿಯನ್ನು ನೀಡಲಾಗುವುದಿಲ್ಲ. ಸರ್ಕಾರದ ಈ ಹೊಸ ನೀತಿಗೆ ಮಾಜಿ ಸೈನಾಧಿಕಾರಿಗಳು ಸೇರಿದಂತೆ ಹಲವಾರು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....