Homeಚಳವಳಿಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ

- Advertisement -
- Advertisement -

ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸಶಸ್ತ್ರ ಪಡೆಗಳ ಅಲ್ಪಾವದಿ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಒಕ್ಕೂಟ ಸರ್ಕಾರದ ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್‍ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಸಿಡಿಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ, ಅದನ್ನು ನಂದಿಸಲು ರೈಲ್ವೆ ಸಿಬ್ಬಂದಿಗಳು ಹರಸಾಹಸಪಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.

ಇದನ್ನೂ ಓದಿ: ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಓಡಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊ ಹರಿದಾಡುತ್ತಿವೆ. ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ಸಹ ತೋರಿಸಿದ್ದಾರೆ.

ನಾವಡಾದಲ್ಲಿ, ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಸುಟ್ಟು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡ ನಿಲ್ದಾಣದಲ್ಲಿ ರೈಲು ಹಳಿಗಳಲ್ಲಿ ನಿಂತು ರೈಲು ತಡೆದು ಹಳಿ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಅಲ್ಲಿ ಸೇರಿದ್ದ ಭಾರೀ ಜನಸಮೂಹವು ರೈಲ್ವೇ ಆಸ್ತಿಗೆ ಹಾನಿಗೊಳಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಪೊಲೀಸರು ಶಾಂತಿ ಕಾಪಾಡುವಂತೆ ಜನರಿಗೆ ಕೇಳಿಕೊಂಡಿದ್ದಾರೆ.

ಸಹರ್ಸಾದಲ್ಲಿ, ರೈಲು ಸಂಚಾರ ಅಡ್ಡಿಪಡಿಸುತ್ತಿರುವುದನ್ನು ತಡೆಯಲು ಬಂದ ಪೊಲೀಸರಿಗೆ ವಿದ್ಯಾರ್ಥಿಗಳು ರೈಲು ನಿಲ್ದಾಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಚಪ್ರಾದಲ್ಲಿ ಪ್ರತಿಭಟನೆಗಳು ಹಿಂಸೆಗೆ ತಿರುಗಿದ್ದು, ಹೆದ್ದಾರಿಯಲ್ಲಿನ ಬಸ್ಸುಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲೂ ಪ್ರತಿಭಟನೆಗಳು ನಡೆದಿದ್ದು ವರದಿಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ, ಬಿಹಾರದ ಮುಜಾಫರ್‌ಪುರ ಮತ್ತು ಬಕ್ಸಾರ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ಅಗ್ನಿಪಥ್, ಟೂರ್ ಆಫ್ ಡ್ಯೂಟಿ ಸ್ಕೀಮ್, ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೈನಿಕರ ನೇಮಕಾತಿ ಮಾಡುತ್ತದೆ. ಇದು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದ ಹುದ್ದೆಯಾಗಿದ್ದು, ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ.

ಸರ್ಕಾರದ ಹೊಸ ನೇಮಕಾತಿ ಯೋಜನೆಯು, ಸೈನ್ಯದ ಸಂಬಳ ಮತ್ತು ಪಿಂಚಣಿ ಮೊತ್ತಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಅಗ್ನಿಪಥ್ ಯೋಜನೆಯಡಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45 ಸಾವಿರ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯ ಸೇವೆಗಳಿಗೆ ಸೇರಿಸಲಾಗುತ್ತದೆ. ಈ ಅವಧಿಯಲ್ಲಿ, ಅವರಿಗೆ ಮಾಸಿಕ ವೇತನವನ್ನು ರೂ 30,000-40,000 ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಈ ವೇಳೆ ಅವರಿಗೆ ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳು ಸಿಗಲಿದೆ.

ಇದನ್ನೂ ಓದಿ: ‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ 25% ಜನರನ್ನು ಮಾತ್ರ ಉಳಿಸಿಕೊಳ್ಳಲಾಗುತ್ತದೆ. ನಂತರ ಅವರನ್ನು ಪೂರ್ಣ 15 ವರ್ಷಗಳ ಕಾಲ ಅಧಿಕಾರೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಾರೆ. ಉಳಿದವರನ್ನು ಕಡ್ಡಾಯ ನಿವೃತ್ತಿಗೆ ಮಾಡಿ 11-12 ಲಕ್ಷದ ಪ್ಯಾಕೇಜ್‌‌ ನೀಡಲಾಗುತ್ತದೆ. ಆದರೆ ಅವರಿಗೆ ಪಿಂಚಣಿಯನ್ನು ನೀಡಲಾಗುವುದಿಲ್ಲ. ಸರ್ಕಾರದ ಈ ಹೊಸ ನೀತಿಗೆ ಮಾಜಿ ಸೈನಾಧಿಕಾರಿಗಳು ಸೇರಿದಂತೆ ಹಲವಾರು ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...