Homeಮುಖಪುಟಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

ಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯ ಪೀಠೋಪಕರಣಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಕಳೆದ ವಾರ ಬಂಧಕ್ಕೊಳಗಾಗಿ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೇನಾಧಿಕಾರಿಯ ಸ್ನೇಹಿತೆ, ಇದೀಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಗೆಳೆಯನನ್ನು ಅಕ್ರಮವಾಗಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಪೊಲೀಸರನ್ನು ಶಿಸ್ತಿನ ಪ್ರಕ್ರಿಯೆಯ ಭಾಗವಾಗಿ ಅಮಾನತುಗೊಳಿಸಲಾಗಿದೆ ಎಂದು ಒಡಿಶಾ ಪೊಲೀಸರ ಉನ್ನತ ಮೂಲಗಳು ತಿಳಿಸಿದೆ.

“ಕಳೆದ ಭಾನುವಾರ ರಾತ್ರಿ 1 ಗಂಟೆಗೆ ನನ್ನ ರೆಸ್ಟೋರೆಂಟ್ ಮುಚ್ಚಿ ನಾನು ನನ್ನ ಗೆಳೆಯನ ಜೊತೆ ಮನೆ ಕಡೆಗೆ ಹೋಗುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಪುರುಷರ ತಂಡವೊಂದು ನಮ್ಮ ಮೇಲೆ ದಾಳಿ ಮಾಡಿತ್ತು. ಅವರಿಂದ ತಪ್ಪಿಸಿಕೊಂಡು, ಈ ಕುರಿತು ದೂರು ದಾಖಲಿಸಲು ಭರತ್‌ಪುರ ಪೊಲೀಸ್ ಠಾಣೆಗೆ ನಾವು ತೆರಳಿದ್ದೆವು. ನಾವು ಠಾಣೆಗೆ ತಲುಪಿದಾಗ, ಅಲ್ಲಿ ಸಿವಿಲ್ ಡ್ರೆಸ್‌ನಲ್ಲಿ ಒಬ್ಬರು ಮಹಿಳಾ ಪೇದೆ ಮಾತ್ರ ಇದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿದರು” ಎಂದು ಸೇನಾಧಿಕಾರಿಯ ಸ್ನೇಹಿತೆ ಹೇಳಿದ್ದಾರೆ.

“ಮಹಿಳಾ ಪೇದೆ ದೂರು ಸ್ವೀಕರಿಸುವ ಬದಲು ನಮಗೆ ಅಸಭ್ಯವಾಗಿ ನಿಂದಿಸಲು ಶುರು ಮಾಡಿದರು. ಈ ವೇಳೆ ಅಲ್ಲಿಗೆ ಬಂದ ಕೆಲ ಪುರುಷ ಸಿಬ್ಬಂದಿ ನನ್ನ ಗೆಳೆಯನ ಬಳಿ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದರು. ಬಳಿಕ ಅವರು, ನನ್ನ ಗೆಳೆಯನನ್ನು ಸೆಲ್‌ಗೆ ಹಾಕಿದರು. ಆಗ ನಾನು ಸೇನಾಧಿಕಾರಿಯನ್ನು ಈ ರೀತಿ ಸೆಲ್‌ಗೆ ಹಾಕುವಂತಿಲ್ಲ ಎಂದು ಜೋರಾದ ಧ್ವನಿಯಲ್ಲಿ ಹೇಳಿದೆ. ಆಗ ಇಬ್ಬರು ಮಹಿಳಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಅವರಿಂದ ಬಿಡಿಸಿಕೊಳ್ಳಲು ಒಬ್ಬರ ಕೈಗೆ ಕಚ್ಚಿದೆ. ಆಗ ಅವರು ಜಾಕೆಟ್‌ನಿಂದ ನನ್ನನ್ನು ಕಟ್ಟಿದಂತೆ ಮಾಡಿ ಕೋಣೆಯೊಂದರಲ್ಲಿ ಹಾಕಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಸ್ವಲ್ಪ ಸಮಯದ ನಂತರ, ಪುರುಷ ಅಧಿಕಾರಿಯೊಬ್ಬರು ಕೋಣೆಯ ಬಾಗಿಲು ತೆರೆದರು. ನನ್ನ ಸ್ತನಗಳ ಮೇಲೆ ಹಲವಾರು ಬಾರಿ ಒದ್ದರು. ಅವರು ತನ್ನ ಪ್ಯಾಂಟ್ ಬಿಚ್ಚಿದರು. ನನ್ನ ಪ್ಯಾಂಟ್ ಅನ್ನೂ ಬಲವಂತವಾಗಿ ಬಿಚ್ಚಿಸಿದರು” ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶ್ಲೀಲ ಸನ್ನೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮಹಿಳೆಯ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, “ಕೋಲ್ಕತ್ತಾದ 22ನೇ ಸಿಖ್ ರೆಜಿಮೆಂಟ್‌ಗೆ ನಿಯೋಜಿಸಲಾಗಿರುವ ಸೇನಾಧಿಕಾರಿ ಮತ್ತು ಅವರ ಸ್ನೇಹಿತೆ ಕುಡಿದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯೊಳಗಿನ ಕಂಪ್ಯೂಟರ್ ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೇನಾ ಅಧಿಕಾರಿಯ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ” ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆರೋಪ-ಪ್ರತ್ಯಾರೋಪಗಳ ನಡುವೆ, ಪೊಲೀಸ್ ಮಹಾನಿರ್ದೇಶಕ ವೈ.ಬಿ. ಖುರಾನಿಯಾ ಅವರ ನಿರ್ದೇಶನದ ಮೇರೆಗೆ ಚಂಡಕಾ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದು, ಸೆಪ್ಟೆಂಬರ್ 15ರಂದು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಪುರುಷರ ಗುಂಪು ದಾಳಿ ನಡೆಸಿದೆ ಎಂಬ ಮಹಿಳೆಯ ಆರೋಪದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಭುವನೇಶ್ವರ ನಗರದ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಯ ಬಳಿಕ ಅಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಬ್ರೇಸ್ ಮತ್ತು ಕೈಯಲ್ಲಿ ಪ್ಲಾಸ್ಟರ್ ಹಾಕಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆ ಸಂಬಂಧ ಸ್ವಯಂಪ್ರೇರಿತ ತನಿಖೆ ಕೈಗೊಂಡಿದ್ದು ಪೊಲೀಸರಿಂದ ವರದಿ ಕೇಳಿದೆ. ಈ ಪ್ರಕರಣದ ತನಿಖೆಯನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಮಹಿಳೆ ಸೇನಾಧಿಕಾರಿಯ ಭಾವಿ ಪತ್ನಿ ಹಾಗೂ ನಿವೃತ್ತ ಸೇನಾಧಿಕಾರಿಯ ಮಗಳು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...