Homeಮುಖಪುಟಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

ಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯ ಪೀಠೋಪಕರಣಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಕಳೆದ ವಾರ ಬಂಧಕ್ಕೊಳಗಾಗಿ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೇನಾಧಿಕಾರಿಯ ಸ್ನೇಹಿತೆ, ಇದೀಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಗೆಳೆಯನನ್ನು ಅಕ್ರಮವಾಗಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಪೊಲೀಸರನ್ನು ಶಿಸ್ತಿನ ಪ್ರಕ್ರಿಯೆಯ ಭಾಗವಾಗಿ ಅಮಾನತುಗೊಳಿಸಲಾಗಿದೆ ಎಂದು ಒಡಿಶಾ ಪೊಲೀಸರ ಉನ್ನತ ಮೂಲಗಳು ತಿಳಿಸಿದೆ.

“ಕಳೆದ ಭಾನುವಾರ ರಾತ್ರಿ 1 ಗಂಟೆಗೆ ನನ್ನ ರೆಸ್ಟೋರೆಂಟ್ ಮುಚ್ಚಿ ನಾನು ನನ್ನ ಗೆಳೆಯನ ಜೊತೆ ಮನೆ ಕಡೆಗೆ ಹೋಗುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಪುರುಷರ ತಂಡವೊಂದು ನಮ್ಮ ಮೇಲೆ ದಾಳಿ ಮಾಡಿತ್ತು. ಅವರಿಂದ ತಪ್ಪಿಸಿಕೊಂಡು, ಈ ಕುರಿತು ದೂರು ದಾಖಲಿಸಲು ಭರತ್‌ಪುರ ಪೊಲೀಸ್ ಠಾಣೆಗೆ ನಾವು ತೆರಳಿದ್ದೆವು. ನಾವು ಠಾಣೆಗೆ ತಲುಪಿದಾಗ, ಅಲ್ಲಿ ಸಿವಿಲ್ ಡ್ರೆಸ್‌ನಲ್ಲಿ ಒಬ್ಬರು ಮಹಿಳಾ ಪೇದೆ ಮಾತ್ರ ಇದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿದರು” ಎಂದು ಸೇನಾಧಿಕಾರಿಯ ಸ್ನೇಹಿತೆ ಹೇಳಿದ್ದಾರೆ.

“ಮಹಿಳಾ ಪೇದೆ ದೂರು ಸ್ವೀಕರಿಸುವ ಬದಲು ನಮಗೆ ಅಸಭ್ಯವಾಗಿ ನಿಂದಿಸಲು ಶುರು ಮಾಡಿದರು. ಈ ವೇಳೆ ಅಲ್ಲಿಗೆ ಬಂದ ಕೆಲ ಪುರುಷ ಸಿಬ್ಬಂದಿ ನನ್ನ ಗೆಳೆಯನ ಬಳಿ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದರು. ಬಳಿಕ ಅವರು, ನನ್ನ ಗೆಳೆಯನನ್ನು ಸೆಲ್‌ಗೆ ಹಾಕಿದರು. ಆಗ ನಾನು ಸೇನಾಧಿಕಾರಿಯನ್ನು ಈ ರೀತಿ ಸೆಲ್‌ಗೆ ಹಾಕುವಂತಿಲ್ಲ ಎಂದು ಜೋರಾದ ಧ್ವನಿಯಲ್ಲಿ ಹೇಳಿದೆ. ಆಗ ಇಬ್ಬರು ಮಹಿಳಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಅವರಿಂದ ಬಿಡಿಸಿಕೊಳ್ಳಲು ಒಬ್ಬರ ಕೈಗೆ ಕಚ್ಚಿದೆ. ಆಗ ಅವರು ಜಾಕೆಟ್‌ನಿಂದ ನನ್ನನ್ನು ಕಟ್ಟಿದಂತೆ ಮಾಡಿ ಕೋಣೆಯೊಂದರಲ್ಲಿ ಹಾಕಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಸ್ವಲ್ಪ ಸಮಯದ ನಂತರ, ಪುರುಷ ಅಧಿಕಾರಿಯೊಬ್ಬರು ಕೋಣೆಯ ಬಾಗಿಲು ತೆರೆದರು. ನನ್ನ ಸ್ತನಗಳ ಮೇಲೆ ಹಲವಾರು ಬಾರಿ ಒದ್ದರು. ಅವರು ತನ್ನ ಪ್ಯಾಂಟ್ ಬಿಚ್ಚಿದರು. ನನ್ನ ಪ್ಯಾಂಟ್ ಅನ್ನೂ ಬಲವಂತವಾಗಿ ಬಿಚ್ಚಿಸಿದರು” ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶ್ಲೀಲ ಸನ್ನೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮಹಿಳೆಯ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, “ಕೋಲ್ಕತ್ತಾದ 22ನೇ ಸಿಖ್ ರೆಜಿಮೆಂಟ್‌ಗೆ ನಿಯೋಜಿಸಲಾಗಿರುವ ಸೇನಾಧಿಕಾರಿ ಮತ್ತು ಅವರ ಸ್ನೇಹಿತೆ ಕುಡಿದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯೊಳಗಿನ ಕಂಪ್ಯೂಟರ್ ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೇನಾ ಅಧಿಕಾರಿಯ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ” ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆರೋಪ-ಪ್ರತ್ಯಾರೋಪಗಳ ನಡುವೆ, ಪೊಲೀಸ್ ಮಹಾನಿರ್ದೇಶಕ ವೈ.ಬಿ. ಖುರಾನಿಯಾ ಅವರ ನಿರ್ದೇಶನದ ಮೇರೆಗೆ ಚಂಡಕಾ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದು, ಸೆಪ್ಟೆಂಬರ್ 15ರಂದು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಪುರುಷರ ಗುಂಪು ದಾಳಿ ನಡೆಸಿದೆ ಎಂಬ ಮಹಿಳೆಯ ಆರೋಪದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಭುವನೇಶ್ವರ ನಗರದ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಯ ಬಳಿಕ ಅಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಬ್ರೇಸ್ ಮತ್ತು ಕೈಯಲ್ಲಿ ಪ್ಲಾಸ್ಟರ್ ಹಾಕಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆ ಸಂಬಂಧ ಸ್ವಯಂಪ್ರೇರಿತ ತನಿಖೆ ಕೈಗೊಂಡಿದ್ದು ಪೊಲೀಸರಿಂದ ವರದಿ ಕೇಳಿದೆ. ಈ ಪ್ರಕರಣದ ತನಿಖೆಯನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಮಹಿಳೆ ಸೇನಾಧಿಕಾರಿಯ ಭಾವಿ ಪತ್ನಿ ಹಾಗೂ ನಿವೃತ್ತ ಸೇನಾಧಿಕಾರಿಯ ಮಗಳು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...