Homeಮುಖಪುಟಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

ಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯ ಪೀಠೋಪಕರಣಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಕಳೆದ ವಾರ ಬಂಧಕ್ಕೊಳಗಾಗಿ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೇನಾಧಿಕಾರಿಯ ಸ್ನೇಹಿತೆ, ಇದೀಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಗೆಳೆಯನನ್ನು ಅಕ್ರಮವಾಗಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಪೊಲೀಸರನ್ನು ಶಿಸ್ತಿನ ಪ್ರಕ್ರಿಯೆಯ ಭಾಗವಾಗಿ ಅಮಾನತುಗೊಳಿಸಲಾಗಿದೆ ಎಂದು ಒಡಿಶಾ ಪೊಲೀಸರ ಉನ್ನತ ಮೂಲಗಳು ತಿಳಿಸಿದೆ.

“ಕಳೆದ ಭಾನುವಾರ ರಾತ್ರಿ 1 ಗಂಟೆಗೆ ನನ್ನ ರೆಸ್ಟೋರೆಂಟ್ ಮುಚ್ಚಿ ನಾನು ನನ್ನ ಗೆಳೆಯನ ಜೊತೆ ಮನೆ ಕಡೆಗೆ ಹೋಗುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಪುರುಷರ ತಂಡವೊಂದು ನಮ್ಮ ಮೇಲೆ ದಾಳಿ ಮಾಡಿತ್ತು. ಅವರಿಂದ ತಪ್ಪಿಸಿಕೊಂಡು, ಈ ಕುರಿತು ದೂರು ದಾಖಲಿಸಲು ಭರತ್‌ಪುರ ಪೊಲೀಸ್ ಠಾಣೆಗೆ ನಾವು ತೆರಳಿದ್ದೆವು. ನಾವು ಠಾಣೆಗೆ ತಲುಪಿದಾಗ, ಅಲ್ಲಿ ಸಿವಿಲ್ ಡ್ರೆಸ್‌ನಲ್ಲಿ ಒಬ್ಬರು ಮಹಿಳಾ ಪೇದೆ ಮಾತ್ರ ಇದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿದರು” ಎಂದು ಸೇನಾಧಿಕಾರಿಯ ಸ್ನೇಹಿತೆ ಹೇಳಿದ್ದಾರೆ.

“ಮಹಿಳಾ ಪೇದೆ ದೂರು ಸ್ವೀಕರಿಸುವ ಬದಲು ನಮಗೆ ಅಸಭ್ಯವಾಗಿ ನಿಂದಿಸಲು ಶುರು ಮಾಡಿದರು. ಈ ವೇಳೆ ಅಲ್ಲಿಗೆ ಬಂದ ಕೆಲ ಪುರುಷ ಸಿಬ್ಬಂದಿ ನನ್ನ ಗೆಳೆಯನ ಬಳಿ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದರು. ಬಳಿಕ ಅವರು, ನನ್ನ ಗೆಳೆಯನನ್ನು ಸೆಲ್‌ಗೆ ಹಾಕಿದರು. ಆಗ ನಾನು ಸೇನಾಧಿಕಾರಿಯನ್ನು ಈ ರೀತಿ ಸೆಲ್‌ಗೆ ಹಾಕುವಂತಿಲ್ಲ ಎಂದು ಜೋರಾದ ಧ್ವನಿಯಲ್ಲಿ ಹೇಳಿದೆ. ಆಗ ಇಬ್ಬರು ಮಹಿಳಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಅವರಿಂದ ಬಿಡಿಸಿಕೊಳ್ಳಲು ಒಬ್ಬರ ಕೈಗೆ ಕಚ್ಚಿದೆ. ಆಗ ಅವರು ಜಾಕೆಟ್‌ನಿಂದ ನನ್ನನ್ನು ಕಟ್ಟಿದಂತೆ ಮಾಡಿ ಕೋಣೆಯೊಂದರಲ್ಲಿ ಹಾಕಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಸ್ವಲ್ಪ ಸಮಯದ ನಂತರ, ಪುರುಷ ಅಧಿಕಾರಿಯೊಬ್ಬರು ಕೋಣೆಯ ಬಾಗಿಲು ತೆರೆದರು. ನನ್ನ ಸ್ತನಗಳ ಮೇಲೆ ಹಲವಾರು ಬಾರಿ ಒದ್ದರು. ಅವರು ತನ್ನ ಪ್ಯಾಂಟ್ ಬಿಚ್ಚಿದರು. ನನ್ನ ಪ್ಯಾಂಟ್ ಅನ್ನೂ ಬಲವಂತವಾಗಿ ಬಿಚ್ಚಿಸಿದರು” ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶ್ಲೀಲ ಸನ್ನೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮಹಿಳೆಯ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, “ಕೋಲ್ಕತ್ತಾದ 22ನೇ ಸಿಖ್ ರೆಜಿಮೆಂಟ್‌ಗೆ ನಿಯೋಜಿಸಲಾಗಿರುವ ಸೇನಾಧಿಕಾರಿ ಮತ್ತು ಅವರ ಸ್ನೇಹಿತೆ ಕುಡಿದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯೊಳಗಿನ ಕಂಪ್ಯೂಟರ್ ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೇನಾ ಅಧಿಕಾರಿಯ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ” ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆರೋಪ-ಪ್ರತ್ಯಾರೋಪಗಳ ನಡುವೆ, ಪೊಲೀಸ್ ಮಹಾನಿರ್ದೇಶಕ ವೈ.ಬಿ. ಖುರಾನಿಯಾ ಅವರ ನಿರ್ದೇಶನದ ಮೇರೆಗೆ ಚಂಡಕಾ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದು, ಸೆಪ್ಟೆಂಬರ್ 15ರಂದು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಪುರುಷರ ಗುಂಪು ದಾಳಿ ನಡೆಸಿದೆ ಎಂಬ ಮಹಿಳೆಯ ಆರೋಪದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಭುವನೇಶ್ವರ ನಗರದ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಯ ಬಳಿಕ ಅಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಬ್ರೇಸ್ ಮತ್ತು ಕೈಯಲ್ಲಿ ಪ್ಲಾಸ್ಟರ್ ಹಾಕಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆ ಸಂಬಂಧ ಸ್ವಯಂಪ್ರೇರಿತ ತನಿಖೆ ಕೈಗೊಂಡಿದ್ದು ಪೊಲೀಸರಿಂದ ವರದಿ ಕೇಳಿದೆ. ಈ ಪ್ರಕರಣದ ತನಿಖೆಯನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಮಹಿಳೆ ಸೇನಾಧಿಕಾರಿಯ ಭಾವಿ ಪತ್ನಿ ಹಾಗೂ ನಿವೃತ್ತ ಸೇನಾಧಿಕಾರಿಯ ಮಗಳು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...