Homeಮುಖಪುಟಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

ಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯ ಪೀಠೋಪಕರಣಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಕಳೆದ ವಾರ ಬಂಧಕ್ಕೊಳಗಾಗಿ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೇನಾಧಿಕಾರಿಯ ಸ್ನೇಹಿತೆ, ಇದೀಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಗೆಳೆಯನನ್ನು ಅಕ್ರಮವಾಗಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಪೊಲೀಸರನ್ನು ಶಿಸ್ತಿನ ಪ್ರಕ್ರಿಯೆಯ ಭಾಗವಾಗಿ ಅಮಾನತುಗೊಳಿಸಲಾಗಿದೆ ಎಂದು ಒಡಿಶಾ ಪೊಲೀಸರ ಉನ್ನತ ಮೂಲಗಳು ತಿಳಿಸಿದೆ.

“ಕಳೆದ ಭಾನುವಾರ ರಾತ್ರಿ 1 ಗಂಟೆಗೆ ನನ್ನ ರೆಸ್ಟೋರೆಂಟ್ ಮುಚ್ಚಿ ನಾನು ನನ್ನ ಗೆಳೆಯನ ಜೊತೆ ಮನೆ ಕಡೆಗೆ ಹೋಗುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಪುರುಷರ ತಂಡವೊಂದು ನಮ್ಮ ಮೇಲೆ ದಾಳಿ ಮಾಡಿತ್ತು. ಅವರಿಂದ ತಪ್ಪಿಸಿಕೊಂಡು, ಈ ಕುರಿತು ದೂರು ದಾಖಲಿಸಲು ಭರತ್‌ಪುರ ಪೊಲೀಸ್ ಠಾಣೆಗೆ ನಾವು ತೆರಳಿದ್ದೆವು. ನಾವು ಠಾಣೆಗೆ ತಲುಪಿದಾಗ, ಅಲ್ಲಿ ಸಿವಿಲ್ ಡ್ರೆಸ್‌ನಲ್ಲಿ ಒಬ್ಬರು ಮಹಿಳಾ ಪೇದೆ ಮಾತ್ರ ಇದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿದರು” ಎಂದು ಸೇನಾಧಿಕಾರಿಯ ಸ್ನೇಹಿತೆ ಹೇಳಿದ್ದಾರೆ.

“ಮಹಿಳಾ ಪೇದೆ ದೂರು ಸ್ವೀಕರಿಸುವ ಬದಲು ನಮಗೆ ಅಸಭ್ಯವಾಗಿ ನಿಂದಿಸಲು ಶುರು ಮಾಡಿದರು. ಈ ವೇಳೆ ಅಲ್ಲಿಗೆ ಬಂದ ಕೆಲ ಪುರುಷ ಸಿಬ್ಬಂದಿ ನನ್ನ ಗೆಳೆಯನ ಬಳಿ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದರು. ಬಳಿಕ ಅವರು, ನನ್ನ ಗೆಳೆಯನನ್ನು ಸೆಲ್‌ಗೆ ಹಾಕಿದರು. ಆಗ ನಾನು ಸೇನಾಧಿಕಾರಿಯನ್ನು ಈ ರೀತಿ ಸೆಲ್‌ಗೆ ಹಾಕುವಂತಿಲ್ಲ ಎಂದು ಜೋರಾದ ಧ್ವನಿಯಲ್ಲಿ ಹೇಳಿದೆ. ಆಗ ಇಬ್ಬರು ಮಹಿಳಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಅವರಿಂದ ಬಿಡಿಸಿಕೊಳ್ಳಲು ಒಬ್ಬರ ಕೈಗೆ ಕಚ್ಚಿದೆ. ಆಗ ಅವರು ಜಾಕೆಟ್‌ನಿಂದ ನನ್ನನ್ನು ಕಟ್ಟಿದಂತೆ ಮಾಡಿ ಕೋಣೆಯೊಂದರಲ್ಲಿ ಹಾಕಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಸ್ವಲ್ಪ ಸಮಯದ ನಂತರ, ಪುರುಷ ಅಧಿಕಾರಿಯೊಬ್ಬರು ಕೋಣೆಯ ಬಾಗಿಲು ತೆರೆದರು. ನನ್ನ ಸ್ತನಗಳ ಮೇಲೆ ಹಲವಾರು ಬಾರಿ ಒದ್ದರು. ಅವರು ತನ್ನ ಪ್ಯಾಂಟ್ ಬಿಚ್ಚಿದರು. ನನ್ನ ಪ್ಯಾಂಟ್ ಅನ್ನೂ ಬಲವಂತವಾಗಿ ಬಿಚ್ಚಿಸಿದರು” ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶ್ಲೀಲ ಸನ್ನೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮಹಿಳೆಯ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, “ಕೋಲ್ಕತ್ತಾದ 22ನೇ ಸಿಖ್ ರೆಜಿಮೆಂಟ್‌ಗೆ ನಿಯೋಜಿಸಲಾಗಿರುವ ಸೇನಾಧಿಕಾರಿ ಮತ್ತು ಅವರ ಸ್ನೇಹಿತೆ ಕುಡಿದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯೊಳಗಿನ ಕಂಪ್ಯೂಟರ್ ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೇನಾ ಅಧಿಕಾರಿಯ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ” ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆರೋಪ-ಪ್ರತ್ಯಾರೋಪಗಳ ನಡುವೆ, ಪೊಲೀಸ್ ಮಹಾನಿರ್ದೇಶಕ ವೈ.ಬಿ. ಖುರಾನಿಯಾ ಅವರ ನಿರ್ದೇಶನದ ಮೇರೆಗೆ ಚಂಡಕಾ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದು, ಸೆಪ್ಟೆಂಬರ್ 15ರಂದು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಪುರುಷರ ಗುಂಪು ದಾಳಿ ನಡೆಸಿದೆ ಎಂಬ ಮಹಿಳೆಯ ಆರೋಪದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಭುವನೇಶ್ವರ ನಗರದ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಯ ಬಳಿಕ ಅಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಬ್ರೇಸ್ ಮತ್ತು ಕೈಯಲ್ಲಿ ಪ್ಲಾಸ್ಟರ್ ಹಾಕಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆ ಸಂಬಂಧ ಸ್ವಯಂಪ್ರೇರಿತ ತನಿಖೆ ಕೈಗೊಂಡಿದ್ದು ಪೊಲೀಸರಿಂದ ವರದಿ ಕೇಳಿದೆ. ಈ ಪ್ರಕರಣದ ತನಿಖೆಯನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಮಹಿಳೆ ಸೇನಾಧಿಕಾರಿಯ ಭಾವಿ ಪತ್ನಿ ಹಾಗೂ ನಿವೃತ್ತ ಸೇನಾಧಿಕಾರಿಯ ಮಗಳು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...