Homeಕರ್ನಾಟಕ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಈ ಯೋಜನೆಯಿಂದಾಗಿ ಸೇನೆಯ ಸ್ಪಿರಿಟ್‌ಗೆ ಧಕ್ಕೆಯಾಗಬಹುದು’ ಎನ್ನುತ್ತಾರೆ ಕರ್ನಲ್‌ ಕೆ.ಸಿ.ಸುಬ್ಬಯ್ಯ... ‘ಚೆನ್ನಾಗಿದ್ದ ವ್ಯವಸ್ಥೆ ಹಾಳಾಗದಿರಲಿ” ಎನ್ನುತ್ತಾರೆ ಕರ್ನಲ್‌ ಸಿ.ಪಿ.ಮುತ್ತಣ್ಣ... (ಮುಂದೆ ಓದಿರಿ)

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಅಗ್ನಿಪಥ ಯೋಜನೆಯು ಸೇನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ” ಎನ್ನುವುದು ಕೊಡಗಿನ ವೀರ ಯೋಧರ ಆತಂಕ.

ಸೈನಿಕ ನೇಮಕಾತಿಗೆ ಸಂಬಂಧಿಸಿದಂತೆ ‘ಅಗ್ನಿಪಥ’ ಎಂಬ ಹೊಸ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಅಲ್ಪಾವಧಿಯ ರಕ್ಷಣಾ ನೇಮಕಾತಿ ಕುರಿತು ಮಾಹಿತಿ ನೀಡಿದ್ದಾರೆ. ಇದು ಸರ್ಕಾರದ ವತಿಯಿಂದ ಕೈಗೊಂಡ ಐತಿಹಾಸಿಕ ಕ್ರಮ ಎಂದು ಮಾಧ್ಯಮಗಳು ಬಣ್ಣಿಸುವ ವೇಳೆಗಾಗಲೇ ಈ ಯೋಜನೆಯನ್ನು ವಿರೋಧಿಸಿ ಲಕ್ಷಾಂತರ ಯುವಜನರು ಬೀದಿಗಿಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕೊಡಗಿನ ಕರ್ನಲ್‌ ಕೆ.ಸಿ.ಸುಬ್ಬಯ್ಯ ಸೇನೆಯಲ್ಲಿ ಸುಮಾರು 28 ವರ್ಷ ಸೇವೆ ಸಲ್ಲಿಸಿದವರು. ಮೇಜರ್‌ ಆಗಿ ಯುನಿಟ್‌ ಮುನ್ನಡೆಸಿದವರು. ಮಾರಾಟವಾಗಿದ್ದ ಜನರಲ್‌ ತಿಮ್ಮಯ್ಯನವರ ಮನೆಯನ್ನು ಮರಳಿ ಪಡೆಯುವುದಕ್ಕಾಗಿ ಹೋರಾಡಿ ಬಳಿಕ ತಿಮ್ಮಯ್ಯ ಮ್ಯೂಸಿಯಂ ಮಾಡಿದವರು ಕೆ.ಸಿ.ಸುಬ್ಬಯ್ಯ. ಜೊತೆಗೆ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ರೂಪಿಸಿದ್ದಾರೆ. ಗೋಣಿಕೊಪ್ಪದಲ್ಲಿ ತಿಮ್ಮಯ್ಯ-ಕಾರ್ಯಪ್ಪ ಮೆಮೊರಿಯಲ್‌ ಸ್ಥಾಪನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸೇನೆಯ ಕುರಿತು ಅಪಾರ ಪ್ರೀತಿಯನ್ನು ಹೊಂದಿರುವ ಇವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿರಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

“ಅಗ್ನಿಪಥ್‌‌ನಲ್ಲಿ ಒಳ್ಳೆಯದು ಉಂಟು, ಕೆಟ್ಟದ್ದು ಉಂಟು. ರಕ್ಷಣಾ ಪಡೆ ಅತ್ಯಂತ ತಾರುಣ್ಯದಿಂದ ಕೂಡಿರುತ್ತದೆ ಎಂಬುದು ಒಳ್ಳೆಯ ವಿಚಾರ. ಆದರೆ ಈ ನಾಲ್ಕು ವರ್ಷಗಳಲ್ಲಿ ಆರು ತಿಂಗಳು ತರಬೇತಿಗೆ ಹೋಗುತ್ತದೆ. ಇನ್ನು ಮೂರುವರೆ ವರ್ಷವನ್ನು ಯೂನಿಟ್‌ನಲ್ಲಿ ಕಳೆಯುತ್ತಾನೆ. ಆದರೆ ಈ ಅಲ್ಪಾವಧಿಯಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತದೆಯೇ ಎಂಬ ಸಂಶಯವಿದೆ. ಶೇ. 25ರಷ್ಟು ಜನರನ್ನು ಉಳಿಸಿಕೊಂಡು ಉಳಿದವರನ್ನು ವಾಪಸ್‌ ಕಳುಹಿಸುತ್ತಾರೆ. ಈ 25% ಜನರನ್ನು ಶಿಫಾರಸ್ಸು ಮಾಡುವವರು ಯಾರು? ಯುನಿಟ್‌‌ನ ಉಸ್ತುವಾರಿಗಳು ಮಾಡುತ್ತಾರೆ. ಕೆಲಸವನ್ನು ಉಳಿಸಿಕೊಳ್ಳಬೇಕೆಂದು ಈ ಯುವಕರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಯುನಿಟ್‌ನೊಳಗಿನ ಸ್ಪಿರಿಟ್‌ ಇಲ್ಲವಾಗಿಬಿಡುತ್ತದೆ ಎಂಬ ಆತಂಕ ಕಾಡುತ್ತಿದೆ” ಎಂದರು.

“ಆರ್ಮಿಯಿಂದ ಹೊರಬಂದ ಮೇಲೆ ಬಿಎಸ್‌ಎಫ್‌, ಸಿಆರ್‌ಫಿಎಫ್‌‌, ಪೊಲೀಸ್ ಅಥವಾ ಇನ್ಯಾವುದೇ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದರೆ ಈ ಹುಡುಗರು ಉತ್ಸಾಹದಿಂದ ಸೇವೆ ಸಲ್ಲಿಸುತ್ತಾರೆ. ಈಗ ಒಂದೇ ಸಲಕ್ಕೆ 40 ಸಾವಿರ ಜನ ಸೇನೆಗೆ ಹೋಗಬಹುದು. ಆದರೆ ಎರಡನೇ ಅವಧಿಗೆ ಇಷ್ಟು ಯುವಕರು ಸಿಗುತ್ತಾರೆಯೇ ಎಂಬುದೇ ಅನುಮಾನ” ಎಂದು ತಿಳಿಸಿದರು.

“ಈ ನಾಲ್ಕು ವರ್ಷಗಳ ನಂತರ ತಾನು ಉಳಿಯಬೇಕೆಂದು ಇಲ್ಲದ ಸಲ್ಲದ ದೂರುಗಳನ್ನು ಹೇಳುತ್ತಾ, ಇಡೀ ಯೂನಿಟ್‌ ಹಾಳು ಮಾಡುವ ಸಾಧ್ಯತೆ ಇದೆ. ಈ ಅಗ್ನಿಪಥ್ ಯೋಜನೆ ಒಳ್ಳೆಯದೆಂದು ಕಾಣುತ್ತಿಲ್ಲ. ತರಾತುರಿಯಲ್ಲಿ ಮಾಡಿರುವ ಯೋಜನೆ ಇದು” ಎಂದು ಅಭಿಪ್ರಾಯಪಟ್ಟರು.

“ಆರ್ಮಿಯಿಂದ ಹೊರಗೆ ಬಂದ ಮೇಲೆ ಬೇರೆ ಕೆಲಸ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ಆದರೆ ನನ್ನ ಅನುಭವದಲ್ಲಿ ಹೇಳುವುದಾದರೆ ಯಾವುದೇ ಕೆಲಸವನ್ನೂ ಇವರು ಕೊಡುವುದಿಲ್ಲ. ಈ ಸಿಪಾಯಿಗಳು ಬಿಟ್ಟು ಬರುವಾಗ ಕನಿಷ್ಟ 32 ವರ್ಷಕ್ಕೆ ಕಾಲಿಟ್ಟಿರುತ್ತಾರೆ. ಇವರನ್ನು ಗನ್‌ ಮ್ಯಾನ್‌ ಅಲ್ಲದೆ ಬೇರೆ ಯಾವ ಕೆಲಸಕ್ಕೂ ತೆಗೆದುಕೊಂಡಿದ್ದು ನೋಡಿಲ್ಲ. 18 ವರ್ಷ ಸೇವೆ ಮಾಡಿ ಬಂದವರನ್ನೇ ತೆಗೆದುಕೊಳ್ಳಲಿಲ್ಲ ಅಂದ ಮೇಲೆ ನಾಲ್ಕು ವರ್ಷ ಕೆಲಸ ಮಾಡಿದವರನ್ನು ತೆಗೆದುಕೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದರು.

“ಟ್ರೈನ್‌ ಆಗಿರುವ ಮಾನವ ಸಂಪನ್ಮೂಲ ಕೆಲಸವಿಲ್ಲದೆ ಕೂರುವುದೆಂದರೆ ಅದು ಈ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿವೆ. ಹಣ ಉಳಿಸಿಕೊಳ್ಳಬೇಕೆಂಬ ಧಾವಂತದಲ್ಲಿ ಇಡೀ ಸೈನ್ಯವನ್ನು ಕೆಡಿಸಿಬಿಡುತ್ತಾರೋ ಎಂಬ ಭಯ ಕಾಡುತ್ತಿದೆ. ಒಂದು ಯೂನಿಟ್‌ಗಾಗಿ ಸೈನಿಕ ಈವರೆಗೆ ಸಾಯಲು ಸಿದ್ಧನಿದ್ದ. ನಾನು ಯೂನಿಟ್‌ ಮುನ್ನೆಡೆಸುವಾಗ ನನ್ನೊಂದಿಗೆ ನಲವತ್ತು ಯೋಧರಿದ್ದರು. ಗುಂಡು ಹಾರಿಸಿದರೂ ಎದೆಕೊಡಲು ಎಲ್ಲರೂ ಮುಂದೆ ಬರುತ್ತಿದ್ದರು. ಕಾರಣ ಒಂದು ಯೂನಿಟ್‌ ಎಂದರೆ- ನಂಬಿಕೆ, ಪ್ರೀತಿಯ ಧ್ಯೋತಕವಾಗಿರುತ್ತದೆ. ಒಂದು ಕುಟುಂಬವೇ ಆಗಿರುತ್ತದೆ. ಆದರೆ ಈ ಹೊಸ ಯೋಜನೆಯಿಂದಾಗಿ ಅದೆಲ್ಲವೂ ಹಾಳಾಗುವ ಸಾಧ್ಯತೆ ಇದೆ” ಎಂದು ಎಚ್ಚರಿಸಿದರು.

“ಹಣ ಉಳಿಸುವ ಮಾತುಗಳನ್ನಾಡುತ್ತಿದ್ದಾರೆ. ಭದ್ರತಾ ವಿಚಾರದಲ್ಲಿ ಚೌಕಾಸಿ ಬೇಡವಿತ್ತು. ನಾಲ್ಕೈದು ಯುದ್ಧಗಳು ನಡೆದಿವೆ. ಗೆದ್ದಿದ್ದೇವೆ. ಯುದ್ಧದಲ್ಲಿ ಸೋತಿದ್ದರೆ ಸೈನ್ಯದ ಬೆಲೆ ಏನು, ಸೇನೆ ಹೇಗೆ ಕೆಲಸ ಮಾಡುತ್ತದೆ ಎಂಬುದು ಈ ರಾಜಕಾರಣಿಗಳಿಗೆ ಗೊತ್ತಾಗುತ್ತಿತ್ತು. ಸಂಸತ್ತಿನ ಮೇಲೆ ಅಟ್ಯಾಕ್‌ ಆಯಿತು. ಕಣ್ಣಿಗೆ ಬಂದಿದ್ದನ್ನು ರೆಪ್ಪೆ ತಡೆಯಿತು ಎಂಬಂತೆ ಎಲ್ಲರೂ ಬಚಾವಾದರು. ಯಾರಾದರೂ ಸಚಿವರಿಗೂ ಸಂಸದರಿಗೋ ಜೀವ ಹಾನಿಯಾಗಿದ್ದರೆ ಈ ಡಿಫೆನ್ಸ್‌ ಫೋರ್ಸ್‌‌ನ ಬೆಲೆ ಏನೆಂಬುದು ಗೊತ್ತಾಗುತ್ತಿತ್ತು. ರಕ್ಷಣಾ ಪಡೆಯೊಂದಿಗೆ ಸರ್ಕಾರ ಚೆಲ್ಲಾಟವಾಡಬಾರದು” ಎಂದು ಮನವಿ ಮಾಡಿದರು.

“ಪಿಂಚಣಿಯನ್ನು ನಿಲ್ಲಿಸಲು ಯೋಚಿಸಿದ್ದಾರೆ. ಒಬ್ಬಾತ ಎಂಎಲ್‌ಎ ಆಗಿಯೋ ಎಂಪಿಯಾಗಿಯೋ ಐದು ಬಾರಿ ಆಯ್ಕೆಯಾದರೆ ಐದು ಪಟ್ಟು ಹೆಚ್ಚು ಪಿಂಚಣಿ ಪಡೆಯುತ್ತಾನೆ. ಏನಿದರ ಅರ್ಥ? ಯೋಧರಿಗೆ ನೀಡಬೇಕಾದ ಪಿಂಚಣಿಯನ್ನು ಜನರ ಬೊಕ್ಕಸದಿಂದಲೇ ಕೊಡಬೇಕಲ್ಲ. ಆರ್ಮಿಯೊಂದಿಗೆ ಚೆಲ್ಲಾಟವಾಡುತ್ತಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು ಕರ್ನಲ್‌ ಕೆ.ಸಿ.ಸುಬ್ಬಯ್ಯ.

ಚೆನ್ನಾಗಿದ್ದ ವ್ಯವಸ್ಥೆಯನ್ನು ಹಾಳು ಮಾಡುವುದು ಬೇಕಿಲ್ಲ: ಸಿ.ಪಿ.ಮುತ್ತಣ್ಣ

24 ವರ್ಷ ದೇಶಕ್ಕಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದವರು ಕರ್ನಲ್‌‌ ಸಿ.ಪಿ.ಮುತ್ತಣ್ಣ. ‘ನಾನುಗೌರಿ.ಕಾಂ’ನಲ್ಲಿ ಮಾತನಾಡಿದ ಅವರು, “ವಿಶ್ವದಲ್ಲೇ ಅತ್ಯುತ್ತಮ ಸೇನೆ ಎಂಬ ಹೆಗ್ಗಳಿಕೆ ನಮ್ಮ ಆರ್ಮಿಗಿದೆ. ಎಲ್ಲವೂ ಚೆನ್ನಾಗಿರುವಾಗ ಅದಕ್ಕೆ ತೊಂದರೆ ಮಾಡುವ ಅವಶ್ಯಕತೆ ಇರಲಿಲ್ಲ. ಸರ್ಕಾರದ ಯೋಚನೆ ಸರಿ ಇರಬಹುದು. ಆದರೆ ಸರಿಯಾಗಿ ಆಲೋಚನೆ ಮಾಡಿದಂತಿಲ್ಲ” ಎಂದು ಅಭಿಪ್ರಾಯಪಟ್ಟರು.

“25% ಜನರನ್ನು ಉಳಿಸಿಕೊಂಡು ಉಳಿದವರನ್ನು ಕೆಲಸದಿಂದ ತೆಗೆಯಲು ಯೋಚಿಸಿದ್ದಾರೆ. ಹೀಗೆ ಮಾಡದೆ, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಪೊಲೀಸ್‌, ಕೆಎಸ್‌ಆರ್‌ಪಿ- ಇವುಗಳಲ್ಲಿ ಸೈಡ್‌ ಸ್ಟೆಪ್‌ ಮಾಡಲು ಅವಕಾಶ ನೀಡಬಹುದು. ಇಲ್ಲವೆಂದರೆ ಪಾಪ, ಈ ಯುವಕರು ಎಲ್ಲಿಗೆ ಹೋಗಬೇಕು? ಕೊನೆಗೆ ಸೆಕ್ಯುರಿಟಿ ಆಗಬೇಕಷ್ಟೇ” ಎಂದು ತಿಳಿಸಿದರು.

“ಯುವಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಎರಡು ವರ್ಷದಿಂದ ಆರ್ಮಿ ನೇಮಕಾತಿ ನಡೆದಿಲ್ಲ. ಕೆಲವರಿಗೆ ಪರೀಕ್ಷೆಗಳು ನಡೆದವು. ಆದರೆ ನೇಮಕಾತಿ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಕೆಲವು ಯುವಕರು ವಯೋಮಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಯುವಕರು ಖಾಯಂ ಉದ್ಯೋಗದತ್ತ ನೋಡುತ್ತಿದ್ದಾರೆ. ಆದರೆ ಈ ರೀತಿಯ ಹೋರಾಟ ಅಗತ್ಯವಿಲ್ಲ. ಈ ಯುವಕರನ್ನು ರೌಡಿ ಶೀಟರ್‌ ಒಮ್ಮೆ ಗುರುತಿಸಿಬಿಟ್ಟರೆ ಮತ್ತೆಂದೂ ಯಾವುದೇ ಕೆಲಸ ಸಿಗುವುದಿಲ್ಲ. ಶಾಂತಿಯುತ ಹೋರಾಟಕ್ಕೆ ಮರಳಬೇಕು” ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿರಿ: Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

“ಇದು ದೇಶದ ರಕ್ಷಣೆಯ ವಿಚಾರ. ಆರ್ಮಿ ಹೇಗಿರುತ್ತದೆ ಎಂಬುದು ರಾಜಕಾರಣಿಗಳಿಗೆ ಗೊತ್ತಿಲ್ಲ. ಈ ರಾಜಕಾರಣಿಗಳಾಗಲೀ, ಇವರ ತಂದೆಯವರೂ ಸೇನೆಯಲ್ಲಿ ಕೆಲಸ ಮಾಡಿರುವುದಿಲ್ಲ. ಈ ಅಗ್ನಿಪಥ್‌ ಯೋಜನೆ ಬೇಡವೆಂದು ಸೇನಾ ತಜ್ಞರೂ ಹೇಳುತ್ತಿದ್ದಾರೆ. ಇದೆಲ್ಲ ಈ ರಾಜಕಾರಣಿಗಳಿಗೆ ಅರ್ಥವಾಗುವುದಿಲ್ಲ” ಎಂದು ವಿಷಾದಿಸಿದರು.

“ಬೇರೆ ದೇಶದಲ್ಲಿಯೂ ಇದೇ ರೀತಿಯ ಯೋಜನೆಗಳಿವೆ ಎಂದು ಸಮರ್ಥಿಸುತ್ತಿದ್ದಾರೆ. ಬೇರೆ ದೇಶದಲ್ಲಿ ಮಾಡಿದರೆಂದೂ ನಾವು ಅದನ್ನೇ ಮಾಡಬೇಕಾ? ಈಗ ಇರುವ ವ್ಯವಸ್ಥೆಯೇ ಸದೃಢವಾಗಿದೆಯಲ್ಲ. ರಷ್ಯಾ- ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ರಷ್ಯಾ ಸೇನೆಯಲ್ಲಿ ಹೀಗೆಯೇ ಯುವಕರನ್ನು ಸೇರಿಸಿಕೊಳ್ಳಲಾಗಿದೆ. ಬಹುತೇಕರು ಆರು ತಿಂಗಳಲ್ಲಿ ಕೆಲಸ ಕಳೆದುಕೊಳ್ಳಲಿದ್ದಾರೆ. ಬಹುತೇಕ ಯೋಧರಿಗೆ ಈ ಕದನದ ಮೇಲೆ ಹೆಚ್ಚಿನ ಆಸಕ್ತಿ ಇಲ್ಲ” ಎಂದು ಉಲ್ಲೇಖಿಸಿದರು.

ಮಾಜಿ ಯೋಧರಾದ ಕೆ.ಜಿ.ಶಿವಂ ಮಾತನಾಡಿ, “ಸೇನೆಗೆ ಸೇರಿ ತರಬೇತಿ ಪಡೆದು ಹೊರಬಂದವರು ತಮ್ಮ ತರಬೇತಿಯನ್ನು ದುರುಪಯೋಗ ಮಾಡಿಕೊಳ್ಳಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...