Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮತ್ತೆ ಅರೆಸೈನಿಕ ಪಡೆಗಳ ಸಂಚಾರ; ಆತಂಕದಲ್ಲಿ ಕಣಿವೆಯ ನಿವಾಸಿಗಳು

ಜಮ್ಮು ಕಾಶ್ಮೀರದಲ್ಲಿ ಮತ್ತೆ ಅರೆಸೈನಿಕ ಪಡೆಗಳ ಸಂಚಾರ; ಆತಂಕದಲ್ಲಿ ಕಣಿವೆಯ ನಿವಾಸಿಗಳು

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಸಂಖ್ಯೆಯ ಅರೆಸೈನಿಕ ಪಡೆಗಳು ಸಂಚಾರ ಮಾಡುತ್ತಿದ್ದು, ನಾಗರಿಕರಲ್ಲಿ ಆತಂಕದ ಕರಿನೆರಳು ಹೆಚ್ಚುತ್ತಿವೆ. 2019 ರ ಆಗಸ್ಟ್‌ ತಿಂಗಳಲ್ಲಿ ರಾಜ್ಯದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಘಟನೆಯ ರೀತಿಯದ್ದೇ ಏನೊ ಮತ್ತೆ ನಡೆಯಲಿದೆ ಎಂದು ಕಣಿವೆಯ ಜನರು ಸಂಶಯ ಪಡುತ್ತಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಅರೆಸೈನಿಕ ಪಡೆಗಳು ಉತ್ತರ ಕಾಶ್ಮೀರ ಮತ್ತು ಜಮ್ಮು ಪ್ರದೇಶದ ಕೆಲವು ಭಾಗಗಳಲ್ಲಿ ನಿಯೋಜಿಸಲಾಗಿದೆ ಎನ್ನಲಾಗಿದೆ.

ಸೈನ್ಯದ ಬೃಹತ್‌ ಸಂಚಾರವು ರಾಜ್ಯದಲ್ಲಿ ಮತ್ತೆ ಏನೋ ಸಂಭವಿಸಲಿದೆ ಎಂದು ಸ್ಥಳೀಯ ರಾಜಕೀಯ ನಾಯಕರೇ ಅನುಮಾನ ಪಟ್ಟಿದ್ದಾರೆ. 2019 ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಬಂಧನಕ್ಕೊಳಗಾದ ಕೆಲವು ರಾಜಕೀಯ ನಾಯಕರನ್ನು ಮತ್ತೆ ಬಂಧಿಸಬಹುದು ಎಂದು ಆಂತಕ ವ್ಯಕ್ತಪಡಿಸಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮೊದಲು ಕೂಡಾ ಜಮ್ಮು ಕಾಶ್ಮೀರದಲ್ಲಿ ಇದೇ ರೀತಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರ ಸಲಹೆಗಾರ ತನ್ವೀರ್‌ ಸಿದ್ದೀಕಿ ಅವರು ಕಣಿವೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ, “ವದಂತಿಗಳು ದಟ್ಟವಾಗಿ ಮತ್ತು ವೇಗವಾಗಿ ಹಬ್ಬುತ್ತಿದೆ, ನಾವು ಎರಡನೆ ಸೆಮಿಸ್ಟರ್‌ಗೆ ಸಿದ್ದವಾಗಬೇಕೆ? ಶಾಸಕರ ಹಾಸ್ಟೆಲ್‌ 2.0 ? ” ಎಂದು ಪ್ರಶ್ನಿಸಿದ್ದಾರೆ.

ಪೀಪಲ್ಸ್‌ ಕಾನ್ಫರೆನ್ಸ್‌ ಅಧ್ಯಕ್ಷ, ರಾಜ್ಯದ ಮಾಜಿ ಸಚಿವರು ಆಗಿರುವ ಸಜ್ಜಾದ್ ಲೋನ್ ಅವರು ಕೂಡಾ ರಾಜ್ಯದಲ್ಲಿ ಹರಡುತ್ತಿರುವ ವದಂತಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಕಣಿವೆಯಲ್ಲಿ ಸೈನ್ಯದ ಸಂಚಾರದಿಂದಾಗಿ ಹರಡುತ್ತಿರುವ ಈ ಎಲ್ಲಾ ವದಂತಿಗಳನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವ ಪಡೆಗಳು ಪಂಚರಾಜ್ಯ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡವರಾಗಿದ್ದು, ಇದೀಗ ಕರ್ತವ್ಯ ನಿರ್ವಹಿಸಿ ಹಿಂತಿರುಗುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

“ಈ ಪಡೆಗಳು ಇತ್ತೀಚೆಗೆ ಚುನಾವಣೆ ನಡೆದ ರಾಜ್ಯಗಳಿಂದ ಹಿಂತಿರುಗುತ್ತಿವೆ. ಅವರನ್ನು ಮತ್ತೆ ಸೇರಿಸಿಕೊಳ್ಳಲಾಗುತ್ತಿದೆ. ಇದು ಹೊಸ ನಿಯೋಜನೆಯಲ್ಲ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.

“ಜಮ್ಮು ಕಾಶ್ಮೀರದ ಅರೆಸೈನಿಕ ಪಡೆಗಳ ಸುಮಾರು 200 ತುಕಡಿಗಳು ವಿಧಾನಸಭಾ ಚುನಾವಣೆಗಾಗಿ ರಾಜ್ಯಗಳಿಗೆ ಕಳುಹಿಸಲಾಗಿತ್ತು. ಅದರಲ್ಲಿ ಐವತ್ತು ತುಕಡಿಗಳು ಒಂದು ತಿಂಗಳ ಹಿಂದೆ ಮರಳಿದ್ದವು ಮತ್ತು ಉಳಿದವುಗಳು ಈಗ ಮರಳಿ ಬರುತ್ತಿವೆ” ಎಂದು ಹೇಳಿದ್ದಾರೆ.

2019 ಆಗಸ್ಟ್‌ ತಿಂಗಳು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೊದಲು ಕೇಂದ್ರ ಅರೆಸೈನಿಕ ಪಡೆಗಳ ಕನಿಷ್ಠ 800 ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿತ್ತು. ಆದರೆ ಕಳೆದ ವರ್ಷದ ಆರಂಭದಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆದಾಗ 100 ತುಕಡಿಗಳನ್ನು ಅಲ್ಲಿಂದ ದೇಶದ ಇತರ ಭಾಗಗಳಿಗೆ ಕಳುಹಿಸಲಾಯಿತು.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...