ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವುಲಾರ್ ವೀವ್ ಪಾಯಿಂಟ್ ಬಳಿ ಇಂದು (ಜ.4) ಸೇನಾ ವಾಹನವೊಂದು ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
“ಅಪಘಾತದಲ್ಲಿ ಗಾಯಗೊಂಡಿದ್ದ ಐವರು ಯೋಧರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಈ ಪೈಕಿ ಇಬ್ಬರು ಸಾವನಪ್ಪಿದ್ದಾರೆ. ಇನ್ನುಳಿದ ಮೂವರ ಪರಿಸ್ಥಿತಿ ಗಂಭೀರವಾಗಿರುವುದರಿಂದ ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದೇವೆ” ಎಂದು ಬಂಡಿಪೋರಾದ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷ ಡಾ. ಮಸರತ್ ಇಕ್ಬಾಲ್ ವಾನಿ ಹೇಳಿದ್ದಾಗಿ ಎಎನ್ಐ ವರದಿ ಮಾಡಿದೆ.
ಕಳೆದ ವಾರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸೇನಾ ವಾಹನ ಸ್ಕಿಡ್ ಆಗಿ ಕಮರಿಗೆ ಉರುಳಿದ ಪರಿಣಾಮ ಕರ್ನಾಟಕದ ಮೂವರು ಸೇರಿದಂತೆ ಐವರು ಯೋಧರು ಸಾವನ್ನಪ್ಪಿದ್ದರು ಮತ್ತು ವಾಹನದ ಚಾಲಕ ಸೇರಿದಂತೆ ಇತರ ಐವರು ಗಂಭೀರ ಗಾಯಗೊಂಡಿದ್ದರು. ಒಂದು ವಾರದ ಅವಧಿಯಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ.
ಇದನ್ನೂ ಓದಿ : ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ


