Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...