Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...