Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...