Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...