Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...