Homeಮುಖಪುಟ‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ - ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅರ್ನಾಬ್‌ ಗೋಸ್ವಾಮಿ ಇಂಟಲಿಜೆನ್ಸ್‌!’ – ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು

‘ಅಫ್ಘಾನ್‌‌ನ ಸೆರೆನಾ ಹೋಟೆಲ್‌‌ನ ಐದನೆ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಇಂಟಲಿಜೆನ್ಸ್‌ ಮಾಹಿತಿಯಿದೆ’ ಎಂದು ಅರ್ನಾಬ್ ಹೇಳಿದ್ದರು. ಆದರೆ ಆ ಹೊಟೆಲ್‌ನಲ್ಲಿ ಎರಡೇ ಮಹಡಿಯಿದೆ!

- Advertisement -
- Advertisement -

‘‘ತಾಲಿಬಾನ್‌‌ಗಳ ಪರವಾಗಿ ಪಂಜ್‌ಶೀರ್‌ನಲ್ಲಿ ‘ಏರ್‌ಸ್ಟ್ರೈಕ್‌’ ನಡೆಸುತ್ತಿರುವ ಪಾಕಿಸ್ತಾನ’’ ಎಂದು ಹೇಳಿ, ವಿಡಿಯೊ ಗೇಮ್‌ ಒಂದರ ವಿಡಿಯೊ ಇಟ್ಟುಕೊಂಡು ಸುದ್ದಿ ಮಾಡಿದ್ದ ರಿಪಬ್ಲಿಕ್ ಟವಿ, ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ರೀತಿಯ ಸುಳ್ಳು ಹೇಳಿ ಸಿಕ್ಕಿಹಾಕಿಹೊಂಡಿದೆ. ಈ ಬಾರಿ, ಪಾಕಿಸ್ತಾನದ ಆಡಳಿತ ಪಕ್ಷವಾದ ‘ಪಾಕಿಸ್ತಾನ್‌ ತಹ್ರೀಕೆ ಇನ್ಸಫ್‌’ ವಕ್ತಾರ ಅಬ್ದುಲ್ ಸಮದ್ ಯಾಕೂಬ್‌ ಅವರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅವರ ಸುಳ್ಳನ್ನು ಬಹಿರಂಗ ಪಡಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಸಾರವಾದ “ದಿ ಡಿಬೇಟ್” ಕಾರ್ಯಕ್ರಮದಲ್ಲಿ ಅರ್ನಾಬ್‌ ಗೋಸ್ವಾಮಿ ಅವರು, “ತನ್ನಲ್ಲಿ ಇಂಟಲಿಜನ್ಸ್‌ ಮಾಹಿತಿಯಿದ್ದು, ಅಫ್ಘಾನ್‌ನ ಕಾಬೂಲ್‌ನಲ್ಲಿರುವ ಸೆರೆನಾ ಹೋಟೆಲ್‌(ಫೇಸ್‌‌ಬುಕ್‌ ಪೇಜ್‌) ನಲ್ಲಿ ಎಷ್ಟು ಮಂದಿ ಪಾಕಿಸ್ತಾನಿ ಅಧಿಕಾರಿಗಳು ತಂಗಿದ್ದಾರೆ ಎಂದು ತಿಳಿದಿದೆ” ಎಂದು ಹೇಳಿದ್ದರು. ಈ ಬಗ್ಗೆ ಬೇಕಾದರೆ ಪರಿಶೀಲಿಸುವಂತೆ ಅಬ್ದುಲ್ ಸಮದ್‌‌ ಅವರಿಗೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ಇಷ್ಟಕ್ಕೆ ಸುಮ್ಮನಿರದ ಅರ್ನಾಬ್‌ ಗೋಸ್ವಾಮಿ, “ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೊಟೇಲ್‌ನ ಯಾವ ರೂಂನಲ್ಲಿ ಇದ್ದಾರೆ, ಅವರು ತಿನ್ನಲು ಏನು ಕೇಳಿದ್ದರು ಎಂಬುವುದು ನಾನು ಹೇಳಬಲ್ಲೆ. ನನ್ನ ಇಂಟಲಿಜೆನ್ಸ್‌ ಮಾಹಿತಿಯನ್ನು ಪ್ರಶ್ನಿಸಬೇಡಿ. ನಿಮ್ಮ ಮೇಲೆ ನಮಗೆ ವೈಮಾನಿಕ ಕಣ್ಗಾವಲು ಇದೆ” ಎಂದು ಹೇಳಿದ್ದರು.

ಆದರೆ ಮರುದಿನ ಕೂಡಾ ಅರ್ನಾಬ್‌ ಗೋಸ್ವಾಮಿ ಅವರು ಅಬ್ದುಲ್ ಸಮದ್‌ ಅವರನ್ನು ತನ್ನ ಚಾನೆಲ್‌ಗೆ ಕರೆಸಿಕೊಂಡಿದ್ದಾರೆ.

ಈ ವೇಳೆ ಹಿಂದಿನ ದಿನದ ಮಾತನ್ನು ಅರ್ನಾಬ್‌ಗೆ ನೆನಪಿಸಿದ ಅಬ್ದುಲ್ ಸಮದ್‌, “ನಿನ್ನೆ ನೀವು ಸೆರೆನಾ ಹೋಟೆಲ್‌ನ ಐದನೇ ಮಹಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಇದ್ದಾರೆ ಎಂದು ಹೇಳಿದ್ದೀರಿ, ಈ ಬಗ್ಗೆ ನಾನು ಪರಿಶೀಲಿಸಿದ್ದೇನೆ. ನನ್ನ ಮಾಹಿತಿಗಳ ಪ್ರಕಾರ ಸೆರೆನಾ ಹೋಟೆಲ್‌‌‌ನಲ್ಲಿ ಇರುವುದೇ ಕೇವಲ ಎರಡು ಮಹಡಿ. ಅಲ್ಲಿ ಮೂರನೇ, ನಾಲ್ಕನೇ ಮತ್ತು ಐದನೆ ಮಹಡಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಇದಕ್ಕೆ ಯಾವುದೆ ತಾರ್ಕಿಕ ಉತ್ತರ ನೀಡದ ಅರ್ನಾಬ್‌ ಗೋಸ್ವಾಮಿ, ನಗುತ್ತಾ, “ಇದು ನೀವು ಮಾಡುವ ಕೆಲಸದ ಮಟ್ಟ… ಇದು ತಮಾಷೆಯಾಗಿದೆ. ಹಾಗಾದರೆ, ಪಾಕಿಸ್ತಾನಿ ಅಧಿಕಾರಿಗಳು ಸೆರೆನಾ ಹೋಟೆಲ್‌ನಲ್ಲಿದ್ದಾರೆ ಎಂದು ನಿಮಗೆ ತಿಳಿದಿದೆ. ನೀವು ಹೋಟೆಲ್‌ಗೆ ಕರೆ ಮಾಡಿ ಅದನ್ನು ದೃಡೀಕರಿಸಿದ್ದೀರಿ. ನಾನು ನಿಮ್ಮ ಮೇಲೆ ಒಂದು ತಂತ್ರ ಹೂಡಿ, ಐದನೆ ಮಹಡಿ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಸಿದ ಅಬ್ದುಲ್ ಸಮದ್, ನಾನು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇನೆ ಎಂದು ಹೇಳಿದ್ದಾರೆ.

ಅರ್ನಾಬ್‌ ಗೋಸ್ವಾಮಿ ಅವರ ಈ ಹೇಳಿಕೆಯನ್ನು ಪಾಕಿಸ್ತಾನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...