HomeಮುಖಪುಟPMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಅರ್ನಾಬ್ ಗೋಸ್ವಾಮಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ರವರನ್ನು ಭೇಟಿ ಮಾಡುವುದಾಗಿ ಒಂದು ಚಾಟ್‌ನಲ್ಲಿ ಹೇಳಿದರೆ ಅದಕ್ಕೆ ಪಾರ್ಥೋ ದಾಸ್ ಗುಪ್ತಾ ಅವರರನ್ನು ಯೂಸ್‌ಲೆಸ್ ಎಂದಿರುವುದು ದಾಖಲಾಗಿದೆ.

- Advertisement -
- Advertisement -

ಬಾರ್ಕ್ ಮಾಜಿ ಸಿಇಒ ಮತ್ತು ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ನಡುವಿನ ವಾಟ್ಸಾಪ್ ಚಾಟ್‌ಗಳ 500 ಕ್ಕೂ ಹೆಚ್ಚು ಪುಟಗಳು ಸೋರಿಕೆಯಾಗಿದ್ದು, ಅರ್ನಾಬ್ ಗೋಸ್ವಾಮಿ PMO ಕಚೇರಿಯಿಂದಲೇ ಸಹಾಯ ಕೋರಿದ್ದರು ಎಂಬ ರಹಸ್ಯ ಬಯಲಾಗಿದೆ ಎಂಬ ಚರ್ಚೆಗಳು ಟ್ವಿಟ್ಟರ್‌ನಲ್ಲಿ ಆರಂಭವಾಗಿವೆ.

ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಗೋಸ್ವಾಮಿ ವಿರುದ್ಧ ಸಾಕ್ಷಿಗಳಿಗೆ ಎಂದು ಮುಂಬೈ ಪೊಲಿಸರು ಕೋರ್ಟ್‌ಗೆ ತಿಳಿಸಿದ್ದಾರೆ. ಇಂದು ಮುಂಬೈ ಪೊಲೀಸರು ಈ ವಾಟ್ಸಾಪ್ ಚಾಟ್‌ಗಳ ಪುಟಗಳನ್ನು ಸೋರಿಕೆ ಮಾಡಿದ್ದಾರೆ ಎಂದು ನೆಟ್ಟಿಗರು ಷೇರ್ ಮಾಡುತ್ತಿದ್ದಾರೆ.

BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರೊಂದಿಗೆ ಅರ್ನಾಬ್ ಗೋಸ್ವಾಮಿ ನೇರವಾಗಿ ಪಿಎಂಒ ಕಚೇರಿಯಿಂದಲೇ ಸಹಾಯ ಕೇಳುತ್ತಿರುವ ಅನೇಕ ನಿದರ್ಶನಗಳಿವೆ. ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸುವಂತೆ ಅವರು ಅರ್ನಾಬ್‌ರನ್ನು ಒತ್ತಾಯಿಸಿರುವುದು ಕಂಡುಬಂದಿದೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.

ಅರ್ನಾಬ್ ಗೋಸ್ವಾಮಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ರವರನ್ನು ಭೇಟಿ ಮಾಡುವುದಾಗಿ ಒಂದು ಚಾಟ್‌ನಲ್ಲಿ ಹೇಳಿದರೆ ಅದಕ್ಕೆ ಪಾರ್ಥೋ ದಾಸ್ ಗುಪ್ತಾ ಅವರರನ್ನು ಯೂಸ್‌ಲೆಸ್ ಎಂದಿರುವುದು ದಾಖಲಾಗಿದೆ. ಅಲ್ಲದೆ ಗೃಹ ಸಚಿವ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಸಾರ್ ಭಾರತಿ ಸಿಇಓ ಶಶಿ ಶೇಖರ್ ಹೆಸರುಗಳ ಚಾಟ್‌ಗಳಲ್ಲಿ ಉಲ್ಲೇಖಗೊಂಡಿವೆ.

ಅರ್ನಾಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ಸೋರಿಕೆಯಾದ ಚಾಟ್‌ಗಳಲ್ಲಿ ಅವರು TRAI ಸುಧಾರಣಾ ಪ್ರಸ್ತಾಪದ ಬಗ್ಗೆ ಮಾತನಾಡುತ್ತಾರೆ. ಹೊಸ ಸುಧಾರಣೆಯು ಸೆಟ್-ಟಾಪ್ ಬಾಕ್ಸ್‌ನಲ್ಲಿ ಸ್ಥಾಪಿಸಲಾದ ವಿಶೇಷ ಸಾಫ್ಟ್‌ವೇರ್ ಮೂಲಕ ಟಿವಿ ವೀಕ್ಷಕರನ್ನು ಡಿಜಿಟಲ್ ಆಗಿ ಅಳೆಯುತ್ತದೆ. ಇದು ರಿಪಬ್ಲಿಕ್ ಚಾನೆಲ್ ಮತ್ತು ಬಿಜೆಪಿ ಎರಡಕ್ಕೂ ರಾಜಕೀಯವಾಗಿ ಹಿನ್ನೆಡೆ ಎಂದು ಪಾರ್ಥೋ ದಾಸ್ ಗುಪ್ತಾ ಸುಳಿವು ನೀಡಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಬಿಸಿ ಬಿಸಿ ಚರ್ಚೆಗಳಾಗುತ್ತಿದ್ದು ಅವುಗಳನ್ನು ಈ ಕೆಳಗೆ ನೀಡಲಾಗಿದೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...