HomeಮುಖಪುಟPMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಅರ್ನಾಬ್ ಗೋಸ್ವಾಮಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ರವರನ್ನು ಭೇಟಿ ಮಾಡುವುದಾಗಿ ಒಂದು ಚಾಟ್‌ನಲ್ಲಿ ಹೇಳಿದರೆ ಅದಕ್ಕೆ ಪಾರ್ಥೋ ದಾಸ್ ಗುಪ್ತಾ ಅವರರನ್ನು ಯೂಸ್‌ಲೆಸ್ ಎಂದಿರುವುದು ದಾಖಲಾಗಿದೆ.

- Advertisement -
- Advertisement -

ಬಾರ್ಕ್ ಮಾಜಿ ಸಿಇಒ ಮತ್ತು ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ನಡುವಿನ ವಾಟ್ಸಾಪ್ ಚಾಟ್‌ಗಳ 500 ಕ್ಕೂ ಹೆಚ್ಚು ಪುಟಗಳು ಸೋರಿಕೆಯಾಗಿದ್ದು, ಅರ್ನಾಬ್ ಗೋಸ್ವಾಮಿ PMO ಕಚೇರಿಯಿಂದಲೇ ಸಹಾಯ ಕೋರಿದ್ದರು ಎಂಬ ರಹಸ್ಯ ಬಯಲಾಗಿದೆ ಎಂಬ ಚರ್ಚೆಗಳು ಟ್ವಿಟ್ಟರ್‌ನಲ್ಲಿ ಆರಂಭವಾಗಿವೆ.

ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಗೋಸ್ವಾಮಿ ವಿರುದ್ಧ ಸಾಕ್ಷಿಗಳಿಗೆ ಎಂದು ಮುಂಬೈ ಪೊಲಿಸರು ಕೋರ್ಟ್‌ಗೆ ತಿಳಿಸಿದ್ದಾರೆ. ಇಂದು ಮುಂಬೈ ಪೊಲೀಸರು ಈ ವಾಟ್ಸಾಪ್ ಚಾಟ್‌ಗಳ ಪುಟಗಳನ್ನು ಸೋರಿಕೆ ಮಾಡಿದ್ದಾರೆ ಎಂದು ನೆಟ್ಟಿಗರು ಷೇರ್ ಮಾಡುತ್ತಿದ್ದಾರೆ.

BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರೊಂದಿಗೆ ಅರ್ನಾಬ್ ಗೋಸ್ವಾಮಿ ನೇರವಾಗಿ ಪಿಎಂಒ ಕಚೇರಿಯಿಂದಲೇ ಸಹಾಯ ಕೇಳುತ್ತಿರುವ ಅನೇಕ ನಿದರ್ಶನಗಳಿವೆ. ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸುವಂತೆ ಅವರು ಅರ್ನಾಬ್‌ರನ್ನು ಒತ್ತಾಯಿಸಿರುವುದು ಕಂಡುಬಂದಿದೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.

ಅರ್ನಾಬ್ ಗೋಸ್ವಾಮಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ರವರನ್ನು ಭೇಟಿ ಮಾಡುವುದಾಗಿ ಒಂದು ಚಾಟ್‌ನಲ್ಲಿ ಹೇಳಿದರೆ ಅದಕ್ಕೆ ಪಾರ್ಥೋ ದಾಸ್ ಗುಪ್ತಾ ಅವರರನ್ನು ಯೂಸ್‌ಲೆಸ್ ಎಂದಿರುವುದು ದಾಖಲಾಗಿದೆ. ಅಲ್ಲದೆ ಗೃಹ ಸಚಿವ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಸಾರ್ ಭಾರತಿ ಸಿಇಓ ಶಶಿ ಶೇಖರ್ ಹೆಸರುಗಳ ಚಾಟ್‌ಗಳಲ್ಲಿ ಉಲ್ಲೇಖಗೊಂಡಿವೆ.

ಅರ್ನಾಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ಸೋರಿಕೆಯಾದ ಚಾಟ್‌ಗಳಲ್ಲಿ ಅವರು TRAI ಸುಧಾರಣಾ ಪ್ರಸ್ತಾಪದ ಬಗ್ಗೆ ಮಾತನಾಡುತ್ತಾರೆ. ಹೊಸ ಸುಧಾರಣೆಯು ಸೆಟ್-ಟಾಪ್ ಬಾಕ್ಸ್‌ನಲ್ಲಿ ಸ್ಥಾಪಿಸಲಾದ ವಿಶೇಷ ಸಾಫ್ಟ್‌ವೇರ್ ಮೂಲಕ ಟಿವಿ ವೀಕ್ಷಕರನ್ನು ಡಿಜಿಟಲ್ ಆಗಿ ಅಳೆಯುತ್ತದೆ. ಇದು ರಿಪಬ್ಲಿಕ್ ಚಾನೆಲ್ ಮತ್ತು ಬಿಜೆಪಿ ಎರಡಕ್ಕೂ ರಾಜಕೀಯವಾಗಿ ಹಿನ್ನೆಡೆ ಎಂದು ಪಾರ್ಥೋ ದಾಸ್ ಗುಪ್ತಾ ಸುಳಿವು ನೀಡಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಬಿಸಿ ಬಿಸಿ ಚರ್ಚೆಗಳಾಗುತ್ತಿದ್ದು ಅವುಗಳನ್ನು ಈ ಕೆಳಗೆ ನೀಡಲಾಗಿದೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...