Homeಮುಖಪುಟಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ?- ಮನಿಶ್ ತಿವಾರಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರು ವಾಟ್ಸಾಪ್‌ನಲ್ಲಿ ನಡೆಸಿರುವ ಸಂಭಾಷಣೆಗಳನ್ನು ಮುಂಬೈ ಪೊಲೀಸರು ಬಹಿರಂಗಗೊಳಿಸಿದ್ದು, ಅದರಲ್ಲಿ ಹತ್ತಾರು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಗಾಗಿ ಇದರ ಮೇಲೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಬಹಿರಂಗಗೊಂಡಿರುವ ವಾಟ್ಸಾಪ್ ಚಾಟ್‌ನಲ್ಲಿ, ಪುಲ್ವಾಮಾ ದಾಳಿಯಲ್ಲಿನ ಸೈನಿಕರ ಸಾವನ್ನು ಸಂಭ್ರಮಿಸಿರುವುದು, ಬಿಜೆಪಿಯೊಂದಿಗಿನ ಸಂಬಂಧ, ಪ್ರಧಾನಿ ಸೇರಿದಂತೆ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರ ಹೆಸರುಗಳು ಉಲ್ಲೇಖವಾಗಿರುವುದು ಕಂಡುಬಂದಿತ್ತು. ಜೊತೆಗೆ ತಮ್ಮ ಚಾನೆಲ್‌ಗೆ ಕರೆದು ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಿಸುತ್ತಿದ್ದ ಕಂಗನಾ ರಣಾವತ್ ಬಗ್ಗೆಯೂ ಅಶ್ಲೀಲವಾಗಿ ಮಾತನಾಡಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಕಾಂಗ್ರೆಸ್ ಸಂಸದ ಮನಿಶ್ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ವಿವಾದಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. “ಕೆಲವು ಮಾಧ್ಯಮಗಳು ಮಾಡುತ್ತಿರುವ ವರದಿಗಳು ನಿಜವಾಗಿದ್ದರೆ, 2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ? ಜಂಟಿ ಸಂಸದೀಯ ತನಿಖೆಯ ಅಗತ್ಯವಿದೆ” ಎಂದು ಮನಿಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

“ಯಾರೇ ಆದರೂ ಮತ್ತೊಬ್ಬರ ಖಾಸಗೀ ಚಾಟ್‌ಗಳನ್ನು ತನಿಖೆ ಮಾಡಬಾರದು. ಆದರೆ ವಾಯುದಾಳಿ ಮತ್ತು ಚುನಾವಣೆಗಳ ನಡುವೆ ಸಂಬಂಧವಿದ್ದರೆ ಅದನ್ನು ತನಿಖೆ ಮಾಡಲೇಬೇಕು” ಎಂದು ಹಿಂದೂಸ್ಥಾನ್ ಟೈಮ್ಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಪಿ ಚಿದಂಬರಂ ಟ್ವೀಟ್ ಮಾಡಿ, “ಸರ್ಜಿಕಲ್ ಸ್ಟ್ರೈಕ್‌ಗೆ ಮೂರು ದಿನಗಳ ಮೊದಲೇ ಪತ್ರಕರ್ತರಿಗೆ (ಅವರ ಸ್ನೇಹಿತರಿಗೆ) ತಿಳಿದಿದೆಯೇ? ಹೌದು ಎನ್ನುವುದಾದರೆ, ಈ ಮಾಹಿತಿಯನ್ನು ಅವರು ಗೂಢಾಚಾರರು ಮತ್ತು ಪಾಕಿಸ್ತಾನಕ್ಕಾಗಿ ಕೆಲಸ ಮಾಡುವವರೊಂದಿಗೆ ಹಂಚಿಕೊಂಡಿಲ್ಲ ಎನ್ನುವುದಕ್ಕೆ ಭರವಸೆ ಏನು? ನಿಮಗೆ ಮಾತ್ರ ತಿಳಿದಿರಬೇಕಾದ ವಿಷಯ ನಿಮ್ಮ ಸರ್ಕಾರವನ್ನು ಬೆಂಬಲಿಸುವ ಪತ್ರಕರ್ತನಿಗೆ ಹೇಗೆ ತಿಳಿದಿದೆ” ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ ಟ್ವೀಟ್ ಮಾಡಿದ್ದು, “ರಾಷ್ಟ್ರಕ್ಕೆ ತಿಳಿಯಬೇಕಿದೆ. ಸರ್ಕಾರವು ಬಾಲಾಕೋಟ್ ದಾಳಿ ಮತ್ತು 370 ನೇ ವಿಧಿಯ ರದ್ದತಿಯ ಪ್ರಾಥಮಿಕ ಮಾಹಿತಿಯನ್ನು ಪತ್ರಕರ್ತರಿಗೆ ಬಿಟ್ಟುಕೊಟ್ಟಿದೆ ಎಂಬುದನ್ನು ವಾಟ್ಸಾಪ್ ಸಂದೇಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಏನಾಗುತ್ತಿದೆ? ಮೋದಿ-ಶಾ ಮಾತ್ರ ಉತ್ತರಿಸಬೇಕೆಂಬುದು ನನ್ನ ಬಯಕೆ ಮಾತ್ರವೆ?” ಎಂದು ಪ್ರಶ್ನಿಸಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ನಡುವಿನ 500 ಪುಟಗಳ ವಾಟ್ಸಾಪ್ ಸಂಭಾಷಣೆಯು ಇತ್ತೀಚೆಗೆ ಬಹಿರಂಗಗೊಂಡಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಪಕ್ಷವು ಬಿಜೆಪಿಯನ್ನು ಪ್ರಶ್ನಿಸಬೆಕು. ಇದು ಸಮಸ್ಯೆಯನ್ನು ಮೃದುವಾಗಿ ನಿರ್ವಹಿಸುವ ಸಮಯವಲ್ಲ” ಎಂದು ಹೆಸರು ಹೇಳದೆ ಟೀಕಿಸುವ ಸಮಯವಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರಾದ ಜೈರಾಮ್ ರಮೇಶ್, ಜಿತೇಂದ್ರ ಸಿಂಗ್, ಅಭಿಷೇಕ್ ಮನು ಸಿಂಗ್ವಿ ಮತ್ತು ಕಾರ್ತಿ ಚಿದಂಬರಂ ಅವರು ಶನಿವಾರ ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ.

ಕಾರ್ತಿ ಚದಂರಂ ಟ್ವೀಟ್ ಮಾಡಿ, “ಅರ್ನಾಬ್‌ಗೆ ಸಂಬಂಧಿಸಿದ ವಿವಾದಗಳ ಬಗ್ಗೆ ಬಿಜೆಪಿ ಏನಾದರೂ ಹೇಳುತ್ತದೆಯೇ? ಆಥವಾ ಇದು ಪ್ರತಿಕ್ರಿಯಿಸುವ ವಿಷಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿಲ್ಲ. ಆದರೆ ದಾಖಲೆಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುತ್ತಿದ್ದೇವೆ ಮತ್ತು ಸಮಯಕ್ಕೆ ಸ್ಪಂದಿಸುತ್ತೇವೆ ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಟ್ವೀಟ್ ಮಾಡಿ, “ಪಾಕ್ ಗಡಿಯಲ್ಲಿನ ಭಾರತದ ಕ್ರಮವನ್ನು 23.02.2019 ರ ಅರ್ನಾಬ್‌ನ ಚಾಟ್‌ಗಳು ಉಲ್ಲೇಖಿಸುತ್ತವೆ. ಸರ್ಕಾರದಲ್ಲಿನ ಹಿರಿಯರು ಯಾರಾದರೂ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆಯೇ? ಇದು ನಮ್ಮ ಸೈನಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಮತ್ತು ಇವರ ಟಿಆರ್‌ಪಿಯನ್ನು ಹೆಚ್ಚಿಸಲು ಅನುವಾಯಿತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿ, “1967 ರಿಂದ BARC ಎಂದರೆ ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ಎಂದು ತಿಳಿದಿದ್ದೆವು. ಈಗ ಅರ್ನಾಬ್ ಗೋಸ್ವಾಮಿಯ ದೆಸೆಯಿಂದಾಗಿ ಮತ್ತೊಂದು BARC – ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಲ್ – ಸುದ್ದಿಯಲ್ಲಿದೆ. ಈ ಎರಡು BARC ಗಳಲ್ಲಿ ಮೊದಲನೆಯದು ಬಲಿಷ್ಟ ಹಾಗೂ ವೈಜ್ಞಾನಿಕ ಭಾರತದ ನಿರ್ಮಾಣಕ್ಕೆ ಕೆಲಸ ಮಾಡಿದ್ದರೆ ಮತ್ತೊಂದು ಸಮೂಹ ತಪ್ಪು ಮಾಹಿತಿಯ ಹತಾರಗಳನ್ನು ಒದಗಿಸುತ್ತಾ ಜನರನ್ನು ದಿಕ್ಕು ತಪ್ಪಿಸಲು ಕೆಲಸ ಮಾಡುತ್ತಿದೆ‌.” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...