Homeಮುಖಪುಟಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ?- ಮನಿಶ್ ತಿವಾರಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರು ವಾಟ್ಸಾಪ್‌ನಲ್ಲಿ ನಡೆಸಿರುವ ಸಂಭಾಷಣೆಗಳನ್ನು ಮುಂಬೈ ಪೊಲೀಸರು ಬಹಿರಂಗಗೊಳಿಸಿದ್ದು, ಅದರಲ್ಲಿ ಹತ್ತಾರು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಗಾಗಿ ಇದರ ಮೇಲೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಬಹಿರಂಗಗೊಂಡಿರುವ ವಾಟ್ಸಾಪ್ ಚಾಟ್‌ನಲ್ಲಿ, ಪುಲ್ವಾಮಾ ದಾಳಿಯಲ್ಲಿನ ಸೈನಿಕರ ಸಾವನ್ನು ಸಂಭ್ರಮಿಸಿರುವುದು, ಬಿಜೆಪಿಯೊಂದಿಗಿನ ಸಂಬಂಧ, ಪ್ರಧಾನಿ ಸೇರಿದಂತೆ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರ ಹೆಸರುಗಳು ಉಲ್ಲೇಖವಾಗಿರುವುದು ಕಂಡುಬಂದಿತ್ತು. ಜೊತೆಗೆ ತಮ್ಮ ಚಾನೆಲ್‌ಗೆ ಕರೆದು ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಿಸುತ್ತಿದ್ದ ಕಂಗನಾ ರಣಾವತ್ ಬಗ್ಗೆಯೂ ಅಶ್ಲೀಲವಾಗಿ ಮಾತನಾಡಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಕಾಂಗ್ರೆಸ್ ಸಂಸದ ಮನಿಶ್ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ವಿವಾದಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. “ಕೆಲವು ಮಾಧ್ಯಮಗಳು ಮಾಡುತ್ತಿರುವ ವರದಿಗಳು ನಿಜವಾಗಿದ್ದರೆ, 2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ? ಜಂಟಿ ಸಂಸದೀಯ ತನಿಖೆಯ ಅಗತ್ಯವಿದೆ” ಎಂದು ಮನಿಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

“ಯಾರೇ ಆದರೂ ಮತ್ತೊಬ್ಬರ ಖಾಸಗೀ ಚಾಟ್‌ಗಳನ್ನು ತನಿಖೆ ಮಾಡಬಾರದು. ಆದರೆ ವಾಯುದಾಳಿ ಮತ್ತು ಚುನಾವಣೆಗಳ ನಡುವೆ ಸಂಬಂಧವಿದ್ದರೆ ಅದನ್ನು ತನಿಖೆ ಮಾಡಲೇಬೇಕು” ಎಂದು ಹಿಂದೂಸ್ಥಾನ್ ಟೈಮ್ಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಪಿ ಚಿದಂಬರಂ ಟ್ವೀಟ್ ಮಾಡಿ, “ಸರ್ಜಿಕಲ್ ಸ್ಟ್ರೈಕ್‌ಗೆ ಮೂರು ದಿನಗಳ ಮೊದಲೇ ಪತ್ರಕರ್ತರಿಗೆ (ಅವರ ಸ್ನೇಹಿತರಿಗೆ) ತಿಳಿದಿದೆಯೇ? ಹೌದು ಎನ್ನುವುದಾದರೆ, ಈ ಮಾಹಿತಿಯನ್ನು ಅವರು ಗೂಢಾಚಾರರು ಮತ್ತು ಪಾಕಿಸ್ತಾನಕ್ಕಾಗಿ ಕೆಲಸ ಮಾಡುವವರೊಂದಿಗೆ ಹಂಚಿಕೊಂಡಿಲ್ಲ ಎನ್ನುವುದಕ್ಕೆ ಭರವಸೆ ಏನು? ನಿಮಗೆ ಮಾತ್ರ ತಿಳಿದಿರಬೇಕಾದ ವಿಷಯ ನಿಮ್ಮ ಸರ್ಕಾರವನ್ನು ಬೆಂಬಲಿಸುವ ಪತ್ರಕರ್ತನಿಗೆ ಹೇಗೆ ತಿಳಿದಿದೆ” ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ ಟ್ವೀಟ್ ಮಾಡಿದ್ದು, “ರಾಷ್ಟ್ರಕ್ಕೆ ತಿಳಿಯಬೇಕಿದೆ. ಸರ್ಕಾರವು ಬಾಲಾಕೋಟ್ ದಾಳಿ ಮತ್ತು 370 ನೇ ವಿಧಿಯ ರದ್ದತಿಯ ಪ್ರಾಥಮಿಕ ಮಾಹಿತಿಯನ್ನು ಪತ್ರಕರ್ತರಿಗೆ ಬಿಟ್ಟುಕೊಟ್ಟಿದೆ ಎಂಬುದನ್ನು ವಾಟ್ಸಾಪ್ ಸಂದೇಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಏನಾಗುತ್ತಿದೆ? ಮೋದಿ-ಶಾ ಮಾತ್ರ ಉತ್ತರಿಸಬೇಕೆಂಬುದು ನನ್ನ ಬಯಕೆ ಮಾತ್ರವೆ?” ಎಂದು ಪ್ರಶ್ನಿಸಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ನಡುವಿನ 500 ಪುಟಗಳ ವಾಟ್ಸಾಪ್ ಸಂಭಾಷಣೆಯು ಇತ್ತೀಚೆಗೆ ಬಹಿರಂಗಗೊಂಡಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಪಕ್ಷವು ಬಿಜೆಪಿಯನ್ನು ಪ್ರಶ್ನಿಸಬೆಕು. ಇದು ಸಮಸ್ಯೆಯನ್ನು ಮೃದುವಾಗಿ ನಿರ್ವಹಿಸುವ ಸಮಯವಲ್ಲ” ಎಂದು ಹೆಸರು ಹೇಳದೆ ಟೀಕಿಸುವ ಸಮಯವಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರಾದ ಜೈರಾಮ್ ರಮೇಶ್, ಜಿತೇಂದ್ರ ಸಿಂಗ್, ಅಭಿಷೇಕ್ ಮನು ಸಿಂಗ್ವಿ ಮತ್ತು ಕಾರ್ತಿ ಚಿದಂಬರಂ ಅವರು ಶನಿವಾರ ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ.

ಕಾರ್ತಿ ಚದಂರಂ ಟ್ವೀಟ್ ಮಾಡಿ, “ಅರ್ನಾಬ್‌ಗೆ ಸಂಬಂಧಿಸಿದ ವಿವಾದಗಳ ಬಗ್ಗೆ ಬಿಜೆಪಿ ಏನಾದರೂ ಹೇಳುತ್ತದೆಯೇ? ಆಥವಾ ಇದು ಪ್ರತಿಕ್ರಿಯಿಸುವ ವಿಷಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿಲ್ಲ. ಆದರೆ ದಾಖಲೆಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುತ್ತಿದ್ದೇವೆ ಮತ್ತು ಸಮಯಕ್ಕೆ ಸ್ಪಂದಿಸುತ್ತೇವೆ ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಟ್ವೀಟ್ ಮಾಡಿ, “ಪಾಕ್ ಗಡಿಯಲ್ಲಿನ ಭಾರತದ ಕ್ರಮವನ್ನು 23.02.2019 ರ ಅರ್ನಾಬ್‌ನ ಚಾಟ್‌ಗಳು ಉಲ್ಲೇಖಿಸುತ್ತವೆ. ಸರ್ಕಾರದಲ್ಲಿನ ಹಿರಿಯರು ಯಾರಾದರೂ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆಯೇ? ಇದು ನಮ್ಮ ಸೈನಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಮತ್ತು ಇವರ ಟಿಆರ್‌ಪಿಯನ್ನು ಹೆಚ್ಚಿಸಲು ಅನುವಾಯಿತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿ, “1967 ರಿಂದ BARC ಎಂದರೆ ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ಎಂದು ತಿಳಿದಿದ್ದೆವು. ಈಗ ಅರ್ನಾಬ್ ಗೋಸ್ವಾಮಿಯ ದೆಸೆಯಿಂದಾಗಿ ಮತ್ತೊಂದು BARC – ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಲ್ – ಸುದ್ದಿಯಲ್ಲಿದೆ. ಈ ಎರಡು BARC ಗಳಲ್ಲಿ ಮೊದಲನೆಯದು ಬಲಿಷ್ಟ ಹಾಗೂ ವೈಜ್ಞಾನಿಕ ಭಾರತದ ನಿರ್ಮಾಣಕ್ಕೆ ಕೆಲಸ ಮಾಡಿದ್ದರೆ ಮತ್ತೊಂದು ಸಮೂಹ ತಪ್ಪು ಮಾಹಿತಿಯ ಹತಾರಗಳನ್ನು ಒದಗಿಸುತ್ತಾ ಜನರನ್ನು ದಿಕ್ಕು ತಪ್ಪಿಸಲು ಕೆಲಸ ಮಾಡುತ್ತಿದೆ‌.” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...