Homeಮುಖಪುಟಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ?- ಮನಿಶ್ ತಿವಾರಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರು ವಾಟ್ಸಾಪ್‌ನಲ್ಲಿ ನಡೆಸಿರುವ ಸಂಭಾಷಣೆಗಳನ್ನು ಮುಂಬೈ ಪೊಲೀಸರು ಬಹಿರಂಗಗೊಳಿಸಿದ್ದು, ಅದರಲ್ಲಿ ಹತ್ತಾರು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಗಾಗಿ ಇದರ ಮೇಲೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಬಹಿರಂಗಗೊಂಡಿರುವ ವಾಟ್ಸಾಪ್ ಚಾಟ್‌ನಲ್ಲಿ, ಪುಲ್ವಾಮಾ ದಾಳಿಯಲ್ಲಿನ ಸೈನಿಕರ ಸಾವನ್ನು ಸಂಭ್ರಮಿಸಿರುವುದು, ಬಿಜೆಪಿಯೊಂದಿಗಿನ ಸಂಬಂಧ, ಪ್ರಧಾನಿ ಸೇರಿದಂತೆ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರ ಹೆಸರುಗಳು ಉಲ್ಲೇಖವಾಗಿರುವುದು ಕಂಡುಬಂದಿತ್ತು. ಜೊತೆಗೆ ತಮ್ಮ ಚಾನೆಲ್‌ಗೆ ಕರೆದು ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಿಸುತ್ತಿದ್ದ ಕಂಗನಾ ರಣಾವತ್ ಬಗ್ಗೆಯೂ ಅಶ್ಲೀಲವಾಗಿ ಮಾತನಾಡಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಕಾಂಗ್ರೆಸ್ ಸಂಸದ ಮನಿಶ್ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ವಿವಾದಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. “ಕೆಲವು ಮಾಧ್ಯಮಗಳು ಮಾಡುತ್ತಿರುವ ವರದಿಗಳು ನಿಜವಾಗಿದ್ದರೆ, 2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ? ಜಂಟಿ ಸಂಸದೀಯ ತನಿಖೆಯ ಅಗತ್ಯವಿದೆ” ಎಂದು ಮನಿಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

“ಯಾರೇ ಆದರೂ ಮತ್ತೊಬ್ಬರ ಖಾಸಗೀ ಚಾಟ್‌ಗಳನ್ನು ತನಿಖೆ ಮಾಡಬಾರದು. ಆದರೆ ವಾಯುದಾಳಿ ಮತ್ತು ಚುನಾವಣೆಗಳ ನಡುವೆ ಸಂಬಂಧವಿದ್ದರೆ ಅದನ್ನು ತನಿಖೆ ಮಾಡಲೇಬೇಕು” ಎಂದು ಹಿಂದೂಸ್ಥಾನ್ ಟೈಮ್ಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಪಿ ಚಿದಂಬರಂ ಟ್ವೀಟ್ ಮಾಡಿ, “ಸರ್ಜಿಕಲ್ ಸ್ಟ್ರೈಕ್‌ಗೆ ಮೂರು ದಿನಗಳ ಮೊದಲೇ ಪತ್ರಕರ್ತರಿಗೆ (ಅವರ ಸ್ನೇಹಿತರಿಗೆ) ತಿಳಿದಿದೆಯೇ? ಹೌದು ಎನ್ನುವುದಾದರೆ, ಈ ಮಾಹಿತಿಯನ್ನು ಅವರು ಗೂಢಾಚಾರರು ಮತ್ತು ಪಾಕಿಸ್ತಾನಕ್ಕಾಗಿ ಕೆಲಸ ಮಾಡುವವರೊಂದಿಗೆ ಹಂಚಿಕೊಂಡಿಲ್ಲ ಎನ್ನುವುದಕ್ಕೆ ಭರವಸೆ ಏನು? ನಿಮಗೆ ಮಾತ್ರ ತಿಳಿದಿರಬೇಕಾದ ವಿಷಯ ನಿಮ್ಮ ಸರ್ಕಾರವನ್ನು ಬೆಂಬಲಿಸುವ ಪತ್ರಕರ್ತನಿಗೆ ಹೇಗೆ ತಿಳಿದಿದೆ” ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ ಟ್ವೀಟ್ ಮಾಡಿದ್ದು, “ರಾಷ್ಟ್ರಕ್ಕೆ ತಿಳಿಯಬೇಕಿದೆ. ಸರ್ಕಾರವು ಬಾಲಾಕೋಟ್ ದಾಳಿ ಮತ್ತು 370 ನೇ ವಿಧಿಯ ರದ್ದತಿಯ ಪ್ರಾಥಮಿಕ ಮಾಹಿತಿಯನ್ನು ಪತ್ರಕರ್ತರಿಗೆ ಬಿಟ್ಟುಕೊಟ್ಟಿದೆ ಎಂಬುದನ್ನು ವಾಟ್ಸಾಪ್ ಸಂದೇಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಏನಾಗುತ್ತಿದೆ? ಮೋದಿ-ಶಾ ಮಾತ್ರ ಉತ್ತರಿಸಬೇಕೆಂಬುದು ನನ್ನ ಬಯಕೆ ಮಾತ್ರವೆ?” ಎಂದು ಪ್ರಶ್ನಿಸಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ನಡುವಿನ 500 ಪುಟಗಳ ವಾಟ್ಸಾಪ್ ಸಂಭಾಷಣೆಯು ಇತ್ತೀಚೆಗೆ ಬಹಿರಂಗಗೊಂಡಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಪಕ್ಷವು ಬಿಜೆಪಿಯನ್ನು ಪ್ರಶ್ನಿಸಬೆಕು. ಇದು ಸಮಸ್ಯೆಯನ್ನು ಮೃದುವಾಗಿ ನಿರ್ವಹಿಸುವ ಸಮಯವಲ್ಲ” ಎಂದು ಹೆಸರು ಹೇಳದೆ ಟೀಕಿಸುವ ಸಮಯವಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರಾದ ಜೈರಾಮ್ ರಮೇಶ್, ಜಿತೇಂದ್ರ ಸಿಂಗ್, ಅಭಿಷೇಕ್ ಮನು ಸಿಂಗ್ವಿ ಮತ್ತು ಕಾರ್ತಿ ಚಿದಂಬರಂ ಅವರು ಶನಿವಾರ ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ.

ಕಾರ್ತಿ ಚದಂರಂ ಟ್ವೀಟ್ ಮಾಡಿ, “ಅರ್ನಾಬ್‌ಗೆ ಸಂಬಂಧಿಸಿದ ವಿವಾದಗಳ ಬಗ್ಗೆ ಬಿಜೆಪಿ ಏನಾದರೂ ಹೇಳುತ್ತದೆಯೇ? ಆಥವಾ ಇದು ಪ್ರತಿಕ್ರಿಯಿಸುವ ವಿಷಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿಲ್ಲ. ಆದರೆ ದಾಖಲೆಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುತ್ತಿದ್ದೇವೆ ಮತ್ತು ಸಮಯಕ್ಕೆ ಸ್ಪಂದಿಸುತ್ತೇವೆ ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಟ್ವೀಟ್ ಮಾಡಿ, “ಪಾಕ್ ಗಡಿಯಲ್ಲಿನ ಭಾರತದ ಕ್ರಮವನ್ನು 23.02.2019 ರ ಅರ್ನಾಬ್‌ನ ಚಾಟ್‌ಗಳು ಉಲ್ಲೇಖಿಸುತ್ತವೆ. ಸರ್ಕಾರದಲ್ಲಿನ ಹಿರಿಯರು ಯಾರಾದರೂ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆಯೇ? ಇದು ನಮ್ಮ ಸೈನಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಮತ್ತು ಇವರ ಟಿಆರ್‌ಪಿಯನ್ನು ಹೆಚ್ಚಿಸಲು ಅನುವಾಯಿತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿ, “1967 ರಿಂದ BARC ಎಂದರೆ ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ಎಂದು ತಿಳಿದಿದ್ದೆವು. ಈಗ ಅರ್ನಾಬ್ ಗೋಸ್ವಾಮಿಯ ದೆಸೆಯಿಂದಾಗಿ ಮತ್ತೊಂದು BARC – ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಲ್ – ಸುದ್ದಿಯಲ್ಲಿದೆ. ಈ ಎರಡು BARC ಗಳಲ್ಲಿ ಮೊದಲನೆಯದು ಬಲಿಷ್ಟ ಹಾಗೂ ವೈಜ್ಞಾನಿಕ ಭಾರತದ ನಿರ್ಮಾಣಕ್ಕೆ ಕೆಲಸ ಮಾಡಿದ್ದರೆ ಮತ್ತೊಂದು ಸಮೂಹ ತಪ್ಪು ಮಾಹಿತಿಯ ಹತಾರಗಳನ್ನು ಒದಗಿಸುತ್ತಾ ಜನರನ್ನು ದಿಕ್ಕು ತಪ್ಪಿಸಲು ಕೆಲಸ ಮಾಡುತ್ತಿದೆ‌.” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...