Homeಮುಖಪುಟಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ?- ಮನಿಶ್ ತಿವಾರಿ

- Advertisement -
- Advertisement -

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರು ವಾಟ್ಸಾಪ್‌ನಲ್ಲಿ ನಡೆಸಿರುವ ಸಂಭಾಷಣೆಗಳನ್ನು ಮುಂಬೈ ಪೊಲೀಸರು ಬಹಿರಂಗಗೊಳಿಸಿದ್ದು, ಅದರಲ್ಲಿ ಹತ್ತಾರು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಗಾಗಿ ಇದರ ಮೇಲೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಬಹಿರಂಗಗೊಂಡಿರುವ ವಾಟ್ಸಾಪ್ ಚಾಟ್‌ನಲ್ಲಿ, ಪುಲ್ವಾಮಾ ದಾಳಿಯಲ್ಲಿನ ಸೈನಿಕರ ಸಾವನ್ನು ಸಂಭ್ರಮಿಸಿರುವುದು, ಬಿಜೆಪಿಯೊಂದಿಗಿನ ಸಂಬಂಧ, ಪ್ರಧಾನಿ ಸೇರಿದಂತೆ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರ ಹೆಸರುಗಳು ಉಲ್ಲೇಖವಾಗಿರುವುದು ಕಂಡುಬಂದಿತ್ತು. ಜೊತೆಗೆ ತಮ್ಮ ಚಾನೆಲ್‌ಗೆ ಕರೆದು ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಿಸುತ್ತಿದ್ದ ಕಂಗನಾ ರಣಾವತ್ ಬಗ್ಗೆಯೂ ಅಶ್ಲೀಲವಾಗಿ ಮಾತನಾಡಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಕಾಂಗ್ರೆಸ್ ಸಂಸದ ಮನಿಶ್ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ವಿವಾದಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. “ಕೆಲವು ಮಾಧ್ಯಮಗಳು ಮಾಡುತ್ತಿರುವ ವರದಿಗಳು ನಿಜವಾಗಿದ್ದರೆ, 2019 ರ ಚುನಾವಣೆ ಮತ್ತು ಬಾಲಾಕೋಟ್ ವಾಯುದಾಳಿಯ ನಡುವೆ ನೇರಾನೇರ ಸಂಬಂಧವಿದೆ ಎಂಬುದು ಸಾಬೀತಾಗುತ್ತದೆ. ಚುನಾವಣೆಗಾಗಿ ರಾಷ್ಟ್ರೀಯ ಭದ್ರತೆಯನ್ನು ಬಲಿಕೊಡಲಾಗಿದೆಯೇ? ಜಂಟಿ ಸಂಸದೀಯ ತನಿಖೆಯ ಅಗತ್ಯವಿದೆ” ಎಂದು ಮನಿಶ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೇಶ ವಿರೋಧಿ ಬಿಜೆಪಿ ಅರ್ನಾಬ್’- ಟ್ವಿಟ್ಟರ್‌‌ನಲ್ಲಿ ಹ್ಯಾಶ್‌‌ಟ್ಯಾಗ್‌ ಟ್ರೆಂಡ್

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

“ಯಾರೇ ಆದರೂ ಮತ್ತೊಬ್ಬರ ಖಾಸಗೀ ಚಾಟ್‌ಗಳನ್ನು ತನಿಖೆ ಮಾಡಬಾರದು. ಆದರೆ ವಾಯುದಾಳಿ ಮತ್ತು ಚುನಾವಣೆಗಳ ನಡುವೆ ಸಂಬಂಧವಿದ್ದರೆ ಅದನ್ನು ತನಿಖೆ ಮಾಡಲೇಬೇಕು” ಎಂದು ಹಿಂದೂಸ್ಥಾನ್ ಟೈಮ್ಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಪಿ ಚಿದಂಬರಂ ಟ್ವೀಟ್ ಮಾಡಿ, “ಸರ್ಜಿಕಲ್ ಸ್ಟ್ರೈಕ್‌ಗೆ ಮೂರು ದಿನಗಳ ಮೊದಲೇ ಪತ್ರಕರ್ತರಿಗೆ (ಅವರ ಸ್ನೇಹಿತರಿಗೆ) ತಿಳಿದಿದೆಯೇ? ಹೌದು ಎನ್ನುವುದಾದರೆ, ಈ ಮಾಹಿತಿಯನ್ನು ಅವರು ಗೂಢಾಚಾರರು ಮತ್ತು ಪಾಕಿಸ್ತಾನಕ್ಕಾಗಿ ಕೆಲಸ ಮಾಡುವವರೊಂದಿಗೆ ಹಂಚಿಕೊಂಡಿಲ್ಲ ಎನ್ನುವುದಕ್ಕೆ ಭರವಸೆ ಏನು? ನಿಮಗೆ ಮಾತ್ರ ತಿಳಿದಿರಬೇಕಾದ ವಿಷಯ ನಿಮ್ಮ ಸರ್ಕಾರವನ್ನು ಬೆಂಬಲಿಸುವ ಪತ್ರಕರ್ತನಿಗೆ ಹೇಗೆ ತಿಳಿದಿದೆ” ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ ಟ್ವೀಟ್ ಮಾಡಿದ್ದು, “ರಾಷ್ಟ್ರಕ್ಕೆ ತಿಳಿಯಬೇಕಿದೆ. ಸರ್ಕಾರವು ಬಾಲಾಕೋಟ್ ದಾಳಿ ಮತ್ತು 370 ನೇ ವಿಧಿಯ ರದ್ದತಿಯ ಪ್ರಾಥಮಿಕ ಮಾಹಿತಿಯನ್ನು ಪತ್ರಕರ್ತರಿಗೆ ಬಿಟ್ಟುಕೊಟ್ಟಿದೆ ಎಂಬುದನ್ನು ವಾಟ್ಸಾಪ್ ಸಂದೇಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಏನಾಗುತ್ತಿದೆ? ಮೋದಿ-ಶಾ ಮಾತ್ರ ಉತ್ತರಿಸಬೇಕೆಂಬುದು ನನ್ನ ಬಯಕೆ ಮಾತ್ರವೆ?” ಎಂದು ಪ್ರಶ್ನಿಸಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ನಡುವಿನ 500 ಪುಟಗಳ ವಾಟ್ಸಾಪ್ ಸಂಭಾಷಣೆಯು ಇತ್ತೀಚೆಗೆ ಬಹಿರಂಗಗೊಂಡಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಪಕ್ಷವು ಬಿಜೆಪಿಯನ್ನು ಪ್ರಶ್ನಿಸಬೆಕು. ಇದು ಸಮಸ್ಯೆಯನ್ನು ಮೃದುವಾಗಿ ನಿರ್ವಹಿಸುವ ಸಮಯವಲ್ಲ” ಎಂದು ಹೆಸರು ಹೇಳದೆ ಟೀಕಿಸುವ ಸಮಯವಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರಾದ ಜೈರಾಮ್ ರಮೇಶ್, ಜಿತೇಂದ್ರ ಸಿಂಗ್, ಅಭಿಷೇಕ್ ಮನು ಸಿಂಗ್ವಿ ಮತ್ತು ಕಾರ್ತಿ ಚಿದಂಬರಂ ಅವರು ಶನಿವಾರ ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ.

ಕಾರ್ತಿ ಚದಂರಂ ಟ್ವೀಟ್ ಮಾಡಿ, “ಅರ್ನಾಬ್‌ಗೆ ಸಂಬಂಧಿಸಿದ ವಿವಾದಗಳ ಬಗ್ಗೆ ಬಿಜೆಪಿ ಏನಾದರೂ ಹೇಳುತ್ತದೆಯೇ? ಆಥವಾ ಇದು ಪ್ರತಿಕ್ರಿಯಿಸುವ ವಿಷಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿಲ್ಲ. ಆದರೆ ದಾಖಲೆಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುತ್ತಿದ್ದೇವೆ ಮತ್ತು ಸಮಯಕ್ಕೆ ಸ್ಪಂದಿಸುತ್ತೇವೆ ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಟ್ವೀಟ್ ಮಾಡಿ, “ಪಾಕ್ ಗಡಿಯಲ್ಲಿನ ಭಾರತದ ಕ್ರಮವನ್ನು 23.02.2019 ರ ಅರ್ನಾಬ್‌ನ ಚಾಟ್‌ಗಳು ಉಲ್ಲೇಖಿಸುತ್ತವೆ. ಸರ್ಕಾರದಲ್ಲಿನ ಹಿರಿಯರು ಯಾರಾದರೂ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆಯೇ? ಇದು ನಮ್ಮ ಸೈನಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಮತ್ತು ಇವರ ಟಿಆರ್‌ಪಿಯನ್ನು ಹೆಚ್ಚಿಸಲು ಅನುವಾಯಿತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿ, “1967 ರಿಂದ BARC ಎಂದರೆ ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ಎಂದು ತಿಳಿದಿದ್ದೆವು. ಈಗ ಅರ್ನಾಬ್ ಗೋಸ್ವಾಮಿಯ ದೆಸೆಯಿಂದಾಗಿ ಮತ್ತೊಂದು BARC – ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಲ್ – ಸುದ್ದಿಯಲ್ಲಿದೆ. ಈ ಎರಡು BARC ಗಳಲ್ಲಿ ಮೊದಲನೆಯದು ಬಲಿಷ್ಟ ಹಾಗೂ ವೈಜ್ಞಾನಿಕ ಭಾರತದ ನಿರ್ಮಾಣಕ್ಕೆ ಕೆಲಸ ಮಾಡಿದ್ದರೆ ಮತ್ತೊಂದು ಸಮೂಹ ತಪ್ಪು ಮಾಹಿತಿಯ ಹತಾರಗಳನ್ನು ಒದಗಿಸುತ್ತಾ ಜನರನ್ನು ದಿಕ್ಕು ತಪ್ಪಿಸಲು ಕೆಲಸ ಮಾಡುತ್ತಿದೆ‌.” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...