Homeಮುಖಪುಟಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.

- Advertisement -
- Advertisement -

2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ. ಈ ಕುರಿತು ದೇಶಾದ್ಯಂತ ಅರ್ನಾಬ್ ಗೋಸ್ವಾಮಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಸುದ್ದಿ ಮಾಡಿಲ್ಲವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಮಂದಿ ಕಿಡಿಕಾರಿದ್ದಾರೆ.

This attack we have won like crazy… ಇದು ಇಡೀ ದೇಶವನ್ನು ನಡುಗಿಸಿದ ಪುಲ್ವಾಮ ದಾಳಿಯ ಬಗ್ಗೆ ಅರ್ನಾಬ್ ಗೋಸ್ವಾಮಿ ಆಡಿದ ಮಾತುಗಳು. ಇವು ಲೀಕ್‌ ಆದ ವಾಟ್ಸಾಪ್ ಚಾಟ್‌ಗಳಲ್ಲಿ ದಾಖಲಾಗಿದೆ. ನೇಷನ್ ವಾಂಟ್ಸ್‌ ಟು ನೋ ಎಂದು ಅರಚುತ್ತಿದ್ದ ಅರ್ನಾಬ್ ಗೋಸ್ವಾಮಿಯ ದೇಶಪ್ರೇಮವೆ ಇದು? ಎಂದು ಹಲವರು ಟೀಕೆ ಮಾಡಿದ್ದಾರೆ.

ವಾಟ್ಸಾಪ್ ಚಾಟ್ ಪ್ರಕಾರ ಅರ್ನಾಬ್ ಗೋಸ್ವಾಮಿಗೆ ಬಾಲಾಕೋಟ್ ದಾಳಿಯ ಬಗ್ಗೆ ಮೂರು ದಿನಗಳ ಮೊದಲೇ ಗೊತ್ತಿತ್ತು. ಈ ಬಾರಿ ದೊಡ್ಡದೇನೋ ನಡೆಯುತ್ತದೆ ಎಂದು ಅರ್ನಾಬ್ ಹೇಳಿದರೆ, ಇದರಿಂದಾಗಿ ದೊಡ್ಡ ಮನುಷ್ಯನಿಗೆ (big man) ತುಂಬಾ ಒಳ್ಳೆಯದಾಗುತ್ತದೆ ಎನ್ನುತ್ತಾನೆ ಪಾರ್ಥೋ ದಾಸ್ ಗುಪ್ತ. ಅಷ್ಟೇ ಅಲ್ಲ, ಇದರಿಂದಾಗಿಯೇ ದೊಡ್ಡ ಮನುಷ್ಯ ಈ ಚುನಾವಣೆಯನ್ನು ಗುಡಿಸಿಕೊಂಡು (ದೊಡ್ಡ ಗೆಲುವು) ಬರುತ್ತಾನೆ ಎನ್ನುತ್ತಾನೆ. ಇದು ಮಾಮೂಲಿ ಸರ್ಜಿಕಲ್ ಸ್ಟ್ರೈಕ್ ಥರ ಅಲ್ಲ, ಅದಕ್ಕಿಂತ ದೊಡ್ಡದು. ಅಷ್ಟೇ ಅಲ್ಲ, ಕಾಶ್ಮೀರದಲ್ಲೂ ಸದ್ಯದಲ್ಲೇ ದೊಡ್ಡದೇನೋ ನಡೆಸಲಾಗುವುದು. ಜನ‌ರು ನಿಜಕ್ಕೂ ಖುಷಿಯಾಗುತ್ತಾರೆ ಎನ್ನುತ್ತಾನೆ ಅರ್ನಾಬ್.

ದೇಶದ ರಕ್ಷಣೆ, ಮಿಲಿಟರಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಅತ್ಯಂತ ರಹಸ್ಯ‌ ಮಾಹಿತಿಗಳೆಲ್ಲ ಅರ್ನಾಬ್ ಗೋಸ್ವಾಮಿಗೆ ಹೇಗೆ ಗೊತ್ತಾಗುತ್ತಿತ್ತು? ಇದು Official secrets Act ಪ್ರಕಾರ ಕ್ರಿಮಿನಲ್ ಅಪರಾಧವಲ್ಲವೇ?
ಬೇರೆ ದೇಶಗಳಲ್ಲಿ ಇಂಥದ್ದೇನಾದರೂ ನಡೆದಿದ್ದರೆ, ಇಷ್ಟೊತ್ತಿಗೆ ಅರ್ನಾಬ್ ಜೈಲಿನಲ್ಲಿರುತ್ತಿದ್ದ. ಆದರೆ ಅವನು ದೊಡ್ಡ ಮನುಷ್ಯರ‌ ಮುದ್ದಿನ ಕೂಸು. ಅವನು ಕಿಯ್ಯೋ ಎಂದು ಕೂಗಿದರೆ ಉನ್ನತ ನ್ಯಾಯಾಲಯಗಳ ಕರುಳು ಚುರುಕ್ ಎಂದು ರಕ್ಷಣೆಗೆ ನಿಲ್ಲುತ್ತವೆ! ಒಂದಂತೂ ಸತ್ಯ. ಇಡೀ ದೇಶದಲ್ಲಿ ಅತಿ ದೊಡ್ಡ AntiNational ಪತ್ರಕರ್ತ ಒಬ್ಬನಿದ್ದರೆ ಅದು ಅರ್ನಾಬ್ ಗೋಸ್ವಾಮಿಯೇ. ನಲವತ್ತು ಸೈನಿಕರ ಸಾವನ್ನು ತನ್ನ ಚಾನಲ್ ವಿಜಯಕ್ಕಾಗಿ ಸಂಭ್ರಮಿಸುವ ಇಂಥ ದೇಶದ್ರೋಹಿ ಇನ್ನೊಬ್ಬನಿರಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ಎಸ್‌.ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BARC ಮಾಜಿ ಮುಖ್ಯಸ್ಥ ಮತ್ತು ಅರ್ನಾಬ್ ಗೋಸ್ವಾಮಿ ನಡುವೆ ನಡೆದ ವಾಟ್ಸಪ್ ಹರಟೆಗಳು ಅನೇಕ ಕಳವಳಕಾರಿ ವಿಷಯಗಳನ್ನು ಬಯಲಿಗೆಳೆದಿವೆ. ಕೆಲ ಪತ್ರಕರ್ತರು ಮತ್ತು ಸರಕಾರದ ನಡುವಣ ಅನೈತಿಕ ಸಂಬಂಧದ ಮೇಲೆ (ರಾಡಿಯಾ ಟೇಪ್ ಬಳಿಕ) ಮತ್ತೊಮ್ಮೆ ಬೆಳಕು ಚೆಲ್ಲಿದೆ. ಅರ್ನಾಬ್ ಮತ್ತು ಪ್ರಧಾನಿ ಕಚೇರಿಯ ನಡುವಣ ಸುಮಧುರ ಸಂಬಂಧ, ಅರ್ನಾಬ್ ಗೆ ಸರಕಾರದ ಮೇಲಿದ್ದ ನಿಯಂತ್ರಣ ಇವಷ್ಟೇ ಅಲ್ಲ, ನ್ಯಾಯಾಧೀಶರನ್ನು ಖರೀದಿಸುವ ಬಗ್ಗೆಯೂ ಅದರಲ್ಲಿ ಪ್ರಸ್ತಾಪವಿದೆ. ! ಇದು ತುಂಬಾ ಗಂಭೀರ ವಿಚಾರ. ಇದರ ಬಗ್ಗೆ ನ್ಯಾಯಾಲಯ ಏನು ಕ್ರಮ ತೆಗೆದುಕೊಳ್ಳುತ್ತದೆ ನೋಡಬೇಕು ಎಂದು ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಬಾಲಾಕೋಟ್ ದಾಳಿ ಮೂರು ದಿನ ಮೊದಲೇ ಅರ್ನಾಬ್‌ಗೆ ಗೊತ್ತಿದ್ದರೆ, ಈ ದೇಶದ ಪ್ರಧಾನಿ, ರಕ್ಷಣಾ ಮಂತ್ರಿ, ಗೃಹಮಂತ್ರಿ ಯಾರು? ಎಂದು ಪ್ರಸಾದ್ ರಕ್ಷಿಧಿಯವರು ಪ್ರಶ್ನಿಸಿದ್ದಾರೆ.

ಅರ್ನಾಬ್ ವಾಟ್ಸಾಪ್ ಚಾಟ್ ಲೀಕ್ ಹೊಲಸು ರಾಡಿಯಾ ಟೇಪ್‌ಗಿಂತ ಹೆಚ್ಚು ಅಪಾಕಾರಿಯಾದುದು. ಆದರೆ ಆಗ ವಿಚಾರಗಳನ್ನು ಆಲಿಸುವ ಮತ್ತು ವಿಮರ್ಶಿಸುವ ಜನರಿದ್ದರು ಅವರು ಕಣ್ಮರೆಯಾಗಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಆದಿತ್ಯ ಭಾರದ್ವಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ಹೇಳಿದ್ವಿ, ಇಂದೂ ಹೇಳ್ತೀವಿ, ಮುಂದೆಯೂ ಹೇಳ್ತಾನೇ ಇರ್ತೀವಿ.. ಪುಲ್ವಾಮಾ ದಾಳಿ ಒಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದೇಶದ ಪ್ರಮುಖ ವ್ಯಕ್ತಿಗಳು ಭಯೋತ್ಪಾದಕರ ಜೊತೆಗೆ ಶಾಮೀಲಾಗಿದ್ದಾರೆ. ಅದರಲ್ಲೂ ಒಂದು ನಿರ್ದಿಷ್ಟ ಪಕ್ಷದ ಪ್ರಮುಖರು ಈ ಸಂಚಿಗೆ ಮತ್ತವರ ರಾಜಕೀಯ ಹಿತಾಸಕ್ತಿಗಾಗಿ 40 ಮಂದಿ ಸೈನಿಕರನ್ನು ಬಲಿ ಪಡೆದಿದ್ದಾರೆ. 2019 ರ ಚುನಾವಣೆಯ ಗೆಲುವಿನ ಕಾರಣಕ್ಕೆ, ದೇಶದಲ್ಲಿ ಯುದ್ಧೋನ್ಮಾದ ಸೃಷ್ಟಿಸುವುದರಿಂದ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಅಂಶವನ್ನೇ ಪ್ರಮುಖವಾಗಿ ಇಟ್ಟುಕೊಂಡು ಈ ದಾಳಿಗೆ ಮುಹೂರ್ತ ಇಟ್ಟಿದ್ದಾರೆ. ಪುಲ್ವಾಮಾ ದಾಳಿಯ ನಂತರದ ಬೆಳವಣಿಗೆ ಇವೆಲ್ಲಾ ಅನುಮಾನಗಳನ್ನು ಹುಟ್ಟು ಹಾಕಿತ್ತು ಮತ್ತು ಆ ಅನುಮಾನ ಬಹುತೇಕ ನಿಜ ಕೂಡಾ ಆಗಿವೆ. ಈಗ ಸಿಕ್ಕಿರುವ ಅರ್ನಬ್ ಗೋಸ್ವಾಮಿ ಚಾಟ್ ಹಿಸ್ಟರಿ ಇವೆಲ್ಲ ಆರೋಪ, ಅನುಮಾನಗಳಿಗೆ ಪುಷ್ಟಿ ಕೊಡುವಂತಿದೆ.

ಅರ್ನಬ್ ಕ್ಯಾಮೆರಾ ಮುಂದೆ ಕೂತಾಗ ದೇಶ, ಸೈನ್ಯ, ಸೈನಿಕರು, ಪಾಕಿಸ್ತಾನ, ಭಯೋತ್ಪಾದಕ, ತುಕ್ಡೆ ತುಕ್ಡೆ ಅಂತ ಅರಚಾಡುವವನು ಕ್ಯಾಮೆರಾ ಹಿಂದೆ ನಿಜವಾದ ಭಯೋತ್ಪಾದಕನಂತೆಯೇ ವರ್ತಿಸಿದ್ದಾನೆ. ಇಡೀ ದೇಶಕ್ಕೆ ದೇಶವೇ 40 ಮಂದಿ ಸೈನಿಕರ ಸಾವಿಗೆ ಮರುಗುತ್ತಿರುವಾಗ ಈತ ಇದನ್ನು “ವಿಕ್ಟರಿ” ಎಂಬಂತೆ ಸಂಭ್ರಮಿಸಿದ್ದಾನೆ. ಇಲ್ಲಿ ಅರ್ನಬ್ ಗೋಸ್ವಾಮಿ, ಆತನ ಬೆಂಬಲಿಸುವವರು, ಆತನ ಧೋರಣೆಗಳನ್ನು ಒಪ್ಪುವ ಪಕ್ಷದವರ ಉದ್ದೇಶ ಸ್ಪಷ್ಟವಾಗಿದೆ ಎಂದು ಪ್ರಗತ್ ಕೆ.ಆರ್ ಅಭಿಪ್ರಾಯಪಟ್ಟಿದ್ದಾರೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.


ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ದೇಶದ್ರೋಹಿ ಕೆಲಸ ಮಾಡಿದರೂ ಪರವಾಗಿಲ್ಲ ……
    ಆದರೆ ಅವನು BJP ಗೆ ಬಕೆಟ್ ಹಿಡಿದ್ರೆ ಅವನು ದೇಶಪ್ರೇಮಿ…
    RSS..BJP…ಆಟವಿದು…

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...