Homeಮುಖಪುಟಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.

- Advertisement -
- Advertisement -

2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ. ಈ ಕುರಿತು ದೇಶಾದ್ಯಂತ ಅರ್ನಾಬ್ ಗೋಸ್ವಾಮಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಸುದ್ದಿ ಮಾಡಿಲ್ಲವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಮಂದಿ ಕಿಡಿಕಾರಿದ್ದಾರೆ.

This attack we have won like crazy… ಇದು ಇಡೀ ದೇಶವನ್ನು ನಡುಗಿಸಿದ ಪುಲ್ವಾಮ ದಾಳಿಯ ಬಗ್ಗೆ ಅರ್ನಾಬ್ ಗೋಸ್ವಾಮಿ ಆಡಿದ ಮಾತುಗಳು. ಇವು ಲೀಕ್‌ ಆದ ವಾಟ್ಸಾಪ್ ಚಾಟ್‌ಗಳಲ್ಲಿ ದಾಖಲಾಗಿದೆ. ನೇಷನ್ ವಾಂಟ್ಸ್‌ ಟು ನೋ ಎಂದು ಅರಚುತ್ತಿದ್ದ ಅರ್ನಾಬ್ ಗೋಸ್ವಾಮಿಯ ದೇಶಪ್ರೇಮವೆ ಇದು? ಎಂದು ಹಲವರು ಟೀಕೆ ಮಾಡಿದ್ದಾರೆ.

ವಾಟ್ಸಾಪ್ ಚಾಟ್ ಪ್ರಕಾರ ಅರ್ನಾಬ್ ಗೋಸ್ವಾಮಿಗೆ ಬಾಲಾಕೋಟ್ ದಾಳಿಯ ಬಗ್ಗೆ ಮೂರು ದಿನಗಳ ಮೊದಲೇ ಗೊತ್ತಿತ್ತು. ಈ ಬಾರಿ ದೊಡ್ಡದೇನೋ ನಡೆಯುತ್ತದೆ ಎಂದು ಅರ್ನಾಬ್ ಹೇಳಿದರೆ, ಇದರಿಂದಾಗಿ ದೊಡ್ಡ ಮನುಷ್ಯನಿಗೆ (big man) ತುಂಬಾ ಒಳ್ಳೆಯದಾಗುತ್ತದೆ ಎನ್ನುತ್ತಾನೆ ಪಾರ್ಥೋ ದಾಸ್ ಗುಪ್ತ. ಅಷ್ಟೇ ಅಲ್ಲ, ಇದರಿಂದಾಗಿಯೇ ದೊಡ್ಡ ಮನುಷ್ಯ ಈ ಚುನಾವಣೆಯನ್ನು ಗುಡಿಸಿಕೊಂಡು (ದೊಡ್ಡ ಗೆಲುವು) ಬರುತ್ತಾನೆ ಎನ್ನುತ್ತಾನೆ. ಇದು ಮಾಮೂಲಿ ಸರ್ಜಿಕಲ್ ಸ್ಟ್ರೈಕ್ ಥರ ಅಲ್ಲ, ಅದಕ್ಕಿಂತ ದೊಡ್ಡದು. ಅಷ್ಟೇ ಅಲ್ಲ, ಕಾಶ್ಮೀರದಲ್ಲೂ ಸದ್ಯದಲ್ಲೇ ದೊಡ್ಡದೇನೋ ನಡೆಸಲಾಗುವುದು. ಜನ‌ರು ನಿಜಕ್ಕೂ ಖುಷಿಯಾಗುತ್ತಾರೆ ಎನ್ನುತ್ತಾನೆ ಅರ್ನಾಬ್.

ದೇಶದ ರಕ್ಷಣೆ, ಮಿಲಿಟರಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಅತ್ಯಂತ ರಹಸ್ಯ‌ ಮಾಹಿತಿಗಳೆಲ್ಲ ಅರ್ನಾಬ್ ಗೋಸ್ವಾಮಿಗೆ ಹೇಗೆ ಗೊತ್ತಾಗುತ್ತಿತ್ತು? ಇದು Official secrets Act ಪ್ರಕಾರ ಕ್ರಿಮಿನಲ್ ಅಪರಾಧವಲ್ಲವೇ?
ಬೇರೆ ದೇಶಗಳಲ್ಲಿ ಇಂಥದ್ದೇನಾದರೂ ನಡೆದಿದ್ದರೆ, ಇಷ್ಟೊತ್ತಿಗೆ ಅರ್ನಾಬ್ ಜೈಲಿನಲ್ಲಿರುತ್ತಿದ್ದ. ಆದರೆ ಅವನು ದೊಡ್ಡ ಮನುಷ್ಯರ‌ ಮುದ್ದಿನ ಕೂಸು. ಅವನು ಕಿಯ್ಯೋ ಎಂದು ಕೂಗಿದರೆ ಉನ್ನತ ನ್ಯಾಯಾಲಯಗಳ ಕರುಳು ಚುರುಕ್ ಎಂದು ರಕ್ಷಣೆಗೆ ನಿಲ್ಲುತ್ತವೆ! ಒಂದಂತೂ ಸತ್ಯ. ಇಡೀ ದೇಶದಲ್ಲಿ ಅತಿ ದೊಡ್ಡ AntiNational ಪತ್ರಕರ್ತ ಒಬ್ಬನಿದ್ದರೆ ಅದು ಅರ್ನಾಬ್ ಗೋಸ್ವಾಮಿಯೇ. ನಲವತ್ತು ಸೈನಿಕರ ಸಾವನ್ನು ತನ್ನ ಚಾನಲ್ ವಿಜಯಕ್ಕಾಗಿ ಸಂಭ್ರಮಿಸುವ ಇಂಥ ದೇಶದ್ರೋಹಿ ಇನ್ನೊಬ್ಬನಿರಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ಎಸ್‌.ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BARC ಮಾಜಿ ಮುಖ್ಯಸ್ಥ ಮತ್ತು ಅರ್ನಾಬ್ ಗೋಸ್ವಾಮಿ ನಡುವೆ ನಡೆದ ವಾಟ್ಸಪ್ ಹರಟೆಗಳು ಅನೇಕ ಕಳವಳಕಾರಿ ವಿಷಯಗಳನ್ನು ಬಯಲಿಗೆಳೆದಿವೆ. ಕೆಲ ಪತ್ರಕರ್ತರು ಮತ್ತು ಸರಕಾರದ ನಡುವಣ ಅನೈತಿಕ ಸಂಬಂಧದ ಮೇಲೆ (ರಾಡಿಯಾ ಟೇಪ್ ಬಳಿಕ) ಮತ್ತೊಮ್ಮೆ ಬೆಳಕು ಚೆಲ್ಲಿದೆ. ಅರ್ನಾಬ್ ಮತ್ತು ಪ್ರಧಾನಿ ಕಚೇರಿಯ ನಡುವಣ ಸುಮಧುರ ಸಂಬಂಧ, ಅರ್ನಾಬ್ ಗೆ ಸರಕಾರದ ಮೇಲಿದ್ದ ನಿಯಂತ್ರಣ ಇವಷ್ಟೇ ಅಲ್ಲ, ನ್ಯಾಯಾಧೀಶರನ್ನು ಖರೀದಿಸುವ ಬಗ್ಗೆಯೂ ಅದರಲ್ಲಿ ಪ್ರಸ್ತಾಪವಿದೆ. ! ಇದು ತುಂಬಾ ಗಂಭೀರ ವಿಚಾರ. ಇದರ ಬಗ್ಗೆ ನ್ಯಾಯಾಲಯ ಏನು ಕ್ರಮ ತೆಗೆದುಕೊಳ್ಳುತ್ತದೆ ನೋಡಬೇಕು ಎಂದು ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಬಾಲಾಕೋಟ್ ದಾಳಿ ಮೂರು ದಿನ ಮೊದಲೇ ಅರ್ನಾಬ್‌ಗೆ ಗೊತ್ತಿದ್ದರೆ, ಈ ದೇಶದ ಪ್ರಧಾನಿ, ರಕ್ಷಣಾ ಮಂತ್ರಿ, ಗೃಹಮಂತ್ರಿ ಯಾರು? ಎಂದು ಪ್ರಸಾದ್ ರಕ್ಷಿಧಿಯವರು ಪ್ರಶ್ನಿಸಿದ್ದಾರೆ.

ಅರ್ನಾಬ್ ವಾಟ್ಸಾಪ್ ಚಾಟ್ ಲೀಕ್ ಹೊಲಸು ರಾಡಿಯಾ ಟೇಪ್‌ಗಿಂತ ಹೆಚ್ಚು ಅಪಾಕಾರಿಯಾದುದು. ಆದರೆ ಆಗ ವಿಚಾರಗಳನ್ನು ಆಲಿಸುವ ಮತ್ತು ವಿಮರ್ಶಿಸುವ ಜನರಿದ್ದರು ಅವರು ಕಣ್ಮರೆಯಾಗಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಆದಿತ್ಯ ಭಾರದ್ವಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ಹೇಳಿದ್ವಿ, ಇಂದೂ ಹೇಳ್ತೀವಿ, ಮುಂದೆಯೂ ಹೇಳ್ತಾನೇ ಇರ್ತೀವಿ.. ಪುಲ್ವಾಮಾ ದಾಳಿ ಒಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದೇಶದ ಪ್ರಮುಖ ವ್ಯಕ್ತಿಗಳು ಭಯೋತ್ಪಾದಕರ ಜೊತೆಗೆ ಶಾಮೀಲಾಗಿದ್ದಾರೆ. ಅದರಲ್ಲೂ ಒಂದು ನಿರ್ದಿಷ್ಟ ಪಕ್ಷದ ಪ್ರಮುಖರು ಈ ಸಂಚಿಗೆ ಮತ್ತವರ ರಾಜಕೀಯ ಹಿತಾಸಕ್ತಿಗಾಗಿ 40 ಮಂದಿ ಸೈನಿಕರನ್ನು ಬಲಿ ಪಡೆದಿದ್ದಾರೆ. 2019 ರ ಚುನಾವಣೆಯ ಗೆಲುವಿನ ಕಾರಣಕ್ಕೆ, ದೇಶದಲ್ಲಿ ಯುದ್ಧೋನ್ಮಾದ ಸೃಷ್ಟಿಸುವುದರಿಂದ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಅಂಶವನ್ನೇ ಪ್ರಮುಖವಾಗಿ ಇಟ್ಟುಕೊಂಡು ಈ ದಾಳಿಗೆ ಮುಹೂರ್ತ ಇಟ್ಟಿದ್ದಾರೆ. ಪುಲ್ವಾಮಾ ದಾಳಿಯ ನಂತರದ ಬೆಳವಣಿಗೆ ಇವೆಲ್ಲಾ ಅನುಮಾನಗಳನ್ನು ಹುಟ್ಟು ಹಾಕಿತ್ತು ಮತ್ತು ಆ ಅನುಮಾನ ಬಹುತೇಕ ನಿಜ ಕೂಡಾ ಆಗಿವೆ. ಈಗ ಸಿಕ್ಕಿರುವ ಅರ್ನಬ್ ಗೋಸ್ವಾಮಿ ಚಾಟ್ ಹಿಸ್ಟರಿ ಇವೆಲ್ಲ ಆರೋಪ, ಅನುಮಾನಗಳಿಗೆ ಪುಷ್ಟಿ ಕೊಡುವಂತಿದೆ.

ಅರ್ನಬ್ ಕ್ಯಾಮೆರಾ ಮುಂದೆ ಕೂತಾಗ ದೇಶ, ಸೈನ್ಯ, ಸೈನಿಕರು, ಪಾಕಿಸ್ತಾನ, ಭಯೋತ್ಪಾದಕ, ತುಕ್ಡೆ ತುಕ್ಡೆ ಅಂತ ಅರಚಾಡುವವನು ಕ್ಯಾಮೆರಾ ಹಿಂದೆ ನಿಜವಾದ ಭಯೋತ್ಪಾದಕನಂತೆಯೇ ವರ್ತಿಸಿದ್ದಾನೆ. ಇಡೀ ದೇಶಕ್ಕೆ ದೇಶವೇ 40 ಮಂದಿ ಸೈನಿಕರ ಸಾವಿಗೆ ಮರುಗುತ್ತಿರುವಾಗ ಈತ ಇದನ್ನು “ವಿಕ್ಟರಿ” ಎಂಬಂತೆ ಸಂಭ್ರಮಿಸಿದ್ದಾನೆ. ಇಲ್ಲಿ ಅರ್ನಬ್ ಗೋಸ್ವಾಮಿ, ಆತನ ಬೆಂಬಲಿಸುವವರು, ಆತನ ಧೋರಣೆಗಳನ್ನು ಒಪ್ಪುವ ಪಕ್ಷದವರ ಉದ್ದೇಶ ಸ್ಪಷ್ಟವಾಗಿದೆ ಎಂದು ಪ್ರಗತ್ ಕೆ.ಆರ್ ಅಭಿಪ್ರಾಯಪಟ್ಟಿದ್ದಾರೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.


ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ದೇಶದ್ರೋಹಿ ಕೆಲಸ ಮಾಡಿದರೂ ಪರವಾಗಿಲ್ಲ ……
    ಆದರೆ ಅವನು BJP ಗೆ ಬಕೆಟ್ ಹಿಡಿದ್ರೆ ಅವನು ದೇಶಪ್ರೇಮಿ…
    RSS..BJP…ಆಟವಿದು…

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...