Homeಮುಖಪುಟಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.

- Advertisement -
- Advertisement -

2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ. ಈ ಕುರಿತು ದೇಶಾದ್ಯಂತ ಅರ್ನಾಬ್ ಗೋಸ್ವಾಮಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಸುದ್ದಿ ಮಾಡಿಲ್ಲವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಮಂದಿ ಕಿಡಿಕಾರಿದ್ದಾರೆ.

This attack we have won like crazy… ಇದು ಇಡೀ ದೇಶವನ್ನು ನಡುಗಿಸಿದ ಪುಲ್ವಾಮ ದಾಳಿಯ ಬಗ್ಗೆ ಅರ್ನಾಬ್ ಗೋಸ್ವಾಮಿ ಆಡಿದ ಮಾತುಗಳು. ಇವು ಲೀಕ್‌ ಆದ ವಾಟ್ಸಾಪ್ ಚಾಟ್‌ಗಳಲ್ಲಿ ದಾಖಲಾಗಿದೆ. ನೇಷನ್ ವಾಂಟ್ಸ್‌ ಟು ನೋ ಎಂದು ಅರಚುತ್ತಿದ್ದ ಅರ್ನಾಬ್ ಗೋಸ್ವಾಮಿಯ ದೇಶಪ್ರೇಮವೆ ಇದು? ಎಂದು ಹಲವರು ಟೀಕೆ ಮಾಡಿದ್ದಾರೆ.

ವಾಟ್ಸಾಪ್ ಚಾಟ್ ಪ್ರಕಾರ ಅರ್ನಾಬ್ ಗೋಸ್ವಾಮಿಗೆ ಬಾಲಾಕೋಟ್ ದಾಳಿಯ ಬಗ್ಗೆ ಮೂರು ದಿನಗಳ ಮೊದಲೇ ಗೊತ್ತಿತ್ತು. ಈ ಬಾರಿ ದೊಡ್ಡದೇನೋ ನಡೆಯುತ್ತದೆ ಎಂದು ಅರ್ನಾಬ್ ಹೇಳಿದರೆ, ಇದರಿಂದಾಗಿ ದೊಡ್ಡ ಮನುಷ್ಯನಿಗೆ (big man) ತುಂಬಾ ಒಳ್ಳೆಯದಾಗುತ್ತದೆ ಎನ್ನುತ್ತಾನೆ ಪಾರ್ಥೋ ದಾಸ್ ಗುಪ್ತ. ಅಷ್ಟೇ ಅಲ್ಲ, ಇದರಿಂದಾಗಿಯೇ ದೊಡ್ಡ ಮನುಷ್ಯ ಈ ಚುನಾವಣೆಯನ್ನು ಗುಡಿಸಿಕೊಂಡು (ದೊಡ್ಡ ಗೆಲುವು) ಬರುತ್ತಾನೆ ಎನ್ನುತ್ತಾನೆ. ಇದು ಮಾಮೂಲಿ ಸರ್ಜಿಕಲ್ ಸ್ಟ್ರೈಕ್ ಥರ ಅಲ್ಲ, ಅದಕ್ಕಿಂತ ದೊಡ್ಡದು. ಅಷ್ಟೇ ಅಲ್ಲ, ಕಾಶ್ಮೀರದಲ್ಲೂ ಸದ್ಯದಲ್ಲೇ ದೊಡ್ಡದೇನೋ ನಡೆಸಲಾಗುವುದು. ಜನ‌ರು ನಿಜಕ್ಕೂ ಖುಷಿಯಾಗುತ್ತಾರೆ ಎನ್ನುತ್ತಾನೆ ಅರ್ನಾಬ್.

ದೇಶದ ರಕ್ಷಣೆ, ಮಿಲಿಟರಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಅತ್ಯಂತ ರಹಸ್ಯ‌ ಮಾಹಿತಿಗಳೆಲ್ಲ ಅರ್ನಾಬ್ ಗೋಸ್ವಾಮಿಗೆ ಹೇಗೆ ಗೊತ್ತಾಗುತ್ತಿತ್ತು? ಇದು Official secrets Act ಪ್ರಕಾರ ಕ್ರಿಮಿನಲ್ ಅಪರಾಧವಲ್ಲವೇ?
ಬೇರೆ ದೇಶಗಳಲ್ಲಿ ಇಂಥದ್ದೇನಾದರೂ ನಡೆದಿದ್ದರೆ, ಇಷ್ಟೊತ್ತಿಗೆ ಅರ್ನಾಬ್ ಜೈಲಿನಲ್ಲಿರುತ್ತಿದ್ದ. ಆದರೆ ಅವನು ದೊಡ್ಡ ಮನುಷ್ಯರ‌ ಮುದ್ದಿನ ಕೂಸು. ಅವನು ಕಿಯ್ಯೋ ಎಂದು ಕೂಗಿದರೆ ಉನ್ನತ ನ್ಯಾಯಾಲಯಗಳ ಕರುಳು ಚುರುಕ್ ಎಂದು ರಕ್ಷಣೆಗೆ ನಿಲ್ಲುತ್ತವೆ! ಒಂದಂತೂ ಸತ್ಯ. ಇಡೀ ದೇಶದಲ್ಲಿ ಅತಿ ದೊಡ್ಡ AntiNational ಪತ್ರಕರ್ತ ಒಬ್ಬನಿದ್ದರೆ ಅದು ಅರ್ನಾಬ್ ಗೋಸ್ವಾಮಿಯೇ. ನಲವತ್ತು ಸೈನಿಕರ ಸಾವನ್ನು ತನ್ನ ಚಾನಲ್ ವಿಜಯಕ್ಕಾಗಿ ಸಂಭ್ರಮಿಸುವ ಇಂಥ ದೇಶದ್ರೋಹಿ ಇನ್ನೊಬ್ಬನಿರಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ಎಸ್‌.ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BARC ಮಾಜಿ ಮುಖ್ಯಸ್ಥ ಮತ್ತು ಅರ್ನಾಬ್ ಗೋಸ್ವಾಮಿ ನಡುವೆ ನಡೆದ ವಾಟ್ಸಪ್ ಹರಟೆಗಳು ಅನೇಕ ಕಳವಳಕಾರಿ ವಿಷಯಗಳನ್ನು ಬಯಲಿಗೆಳೆದಿವೆ. ಕೆಲ ಪತ್ರಕರ್ತರು ಮತ್ತು ಸರಕಾರದ ನಡುವಣ ಅನೈತಿಕ ಸಂಬಂಧದ ಮೇಲೆ (ರಾಡಿಯಾ ಟೇಪ್ ಬಳಿಕ) ಮತ್ತೊಮ್ಮೆ ಬೆಳಕು ಚೆಲ್ಲಿದೆ. ಅರ್ನಾಬ್ ಮತ್ತು ಪ್ರಧಾನಿ ಕಚೇರಿಯ ನಡುವಣ ಸುಮಧುರ ಸಂಬಂಧ, ಅರ್ನಾಬ್ ಗೆ ಸರಕಾರದ ಮೇಲಿದ್ದ ನಿಯಂತ್ರಣ ಇವಷ್ಟೇ ಅಲ್ಲ, ನ್ಯಾಯಾಧೀಶರನ್ನು ಖರೀದಿಸುವ ಬಗ್ಗೆಯೂ ಅದರಲ್ಲಿ ಪ್ರಸ್ತಾಪವಿದೆ. ! ಇದು ತುಂಬಾ ಗಂಭೀರ ವಿಚಾರ. ಇದರ ಬಗ್ಗೆ ನ್ಯಾಯಾಲಯ ಏನು ಕ್ರಮ ತೆಗೆದುಕೊಳ್ಳುತ್ತದೆ ನೋಡಬೇಕು ಎಂದು ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಬಾಲಾಕೋಟ್ ದಾಳಿ ಮೂರು ದಿನ ಮೊದಲೇ ಅರ್ನಾಬ್‌ಗೆ ಗೊತ್ತಿದ್ದರೆ, ಈ ದೇಶದ ಪ್ರಧಾನಿ, ರಕ್ಷಣಾ ಮಂತ್ರಿ, ಗೃಹಮಂತ್ರಿ ಯಾರು? ಎಂದು ಪ್ರಸಾದ್ ರಕ್ಷಿಧಿಯವರು ಪ್ರಶ್ನಿಸಿದ್ದಾರೆ.

ಅರ್ನಾಬ್ ವಾಟ್ಸಾಪ್ ಚಾಟ್ ಲೀಕ್ ಹೊಲಸು ರಾಡಿಯಾ ಟೇಪ್‌ಗಿಂತ ಹೆಚ್ಚು ಅಪಾಕಾರಿಯಾದುದು. ಆದರೆ ಆಗ ವಿಚಾರಗಳನ್ನು ಆಲಿಸುವ ಮತ್ತು ವಿಮರ್ಶಿಸುವ ಜನರಿದ್ದರು ಅವರು ಕಣ್ಮರೆಯಾಗಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಆದಿತ್ಯ ಭಾರದ್ವಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ಹೇಳಿದ್ವಿ, ಇಂದೂ ಹೇಳ್ತೀವಿ, ಮುಂದೆಯೂ ಹೇಳ್ತಾನೇ ಇರ್ತೀವಿ.. ಪುಲ್ವಾಮಾ ದಾಳಿ ಒಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದೇಶದ ಪ್ರಮುಖ ವ್ಯಕ್ತಿಗಳು ಭಯೋತ್ಪಾದಕರ ಜೊತೆಗೆ ಶಾಮೀಲಾಗಿದ್ದಾರೆ. ಅದರಲ್ಲೂ ಒಂದು ನಿರ್ದಿಷ್ಟ ಪಕ್ಷದ ಪ್ರಮುಖರು ಈ ಸಂಚಿಗೆ ಮತ್ತವರ ರಾಜಕೀಯ ಹಿತಾಸಕ್ತಿಗಾಗಿ 40 ಮಂದಿ ಸೈನಿಕರನ್ನು ಬಲಿ ಪಡೆದಿದ್ದಾರೆ. 2019 ರ ಚುನಾವಣೆಯ ಗೆಲುವಿನ ಕಾರಣಕ್ಕೆ, ದೇಶದಲ್ಲಿ ಯುದ್ಧೋನ್ಮಾದ ಸೃಷ್ಟಿಸುವುದರಿಂದ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಅಂಶವನ್ನೇ ಪ್ರಮುಖವಾಗಿ ಇಟ್ಟುಕೊಂಡು ಈ ದಾಳಿಗೆ ಮುಹೂರ್ತ ಇಟ್ಟಿದ್ದಾರೆ. ಪುಲ್ವಾಮಾ ದಾಳಿಯ ನಂತರದ ಬೆಳವಣಿಗೆ ಇವೆಲ್ಲಾ ಅನುಮಾನಗಳನ್ನು ಹುಟ್ಟು ಹಾಕಿತ್ತು ಮತ್ತು ಆ ಅನುಮಾನ ಬಹುತೇಕ ನಿಜ ಕೂಡಾ ಆಗಿವೆ. ಈಗ ಸಿಕ್ಕಿರುವ ಅರ್ನಬ್ ಗೋಸ್ವಾಮಿ ಚಾಟ್ ಹಿಸ್ಟರಿ ಇವೆಲ್ಲ ಆರೋಪ, ಅನುಮಾನಗಳಿಗೆ ಪುಷ್ಟಿ ಕೊಡುವಂತಿದೆ.

ಅರ್ನಬ್ ಕ್ಯಾಮೆರಾ ಮುಂದೆ ಕೂತಾಗ ದೇಶ, ಸೈನ್ಯ, ಸೈನಿಕರು, ಪಾಕಿಸ್ತಾನ, ಭಯೋತ್ಪಾದಕ, ತುಕ್ಡೆ ತುಕ್ಡೆ ಅಂತ ಅರಚಾಡುವವನು ಕ್ಯಾಮೆರಾ ಹಿಂದೆ ನಿಜವಾದ ಭಯೋತ್ಪಾದಕನಂತೆಯೇ ವರ್ತಿಸಿದ್ದಾನೆ. ಇಡೀ ದೇಶಕ್ಕೆ ದೇಶವೇ 40 ಮಂದಿ ಸೈನಿಕರ ಸಾವಿಗೆ ಮರುಗುತ್ತಿರುವಾಗ ಈತ ಇದನ್ನು “ವಿಕ್ಟರಿ” ಎಂಬಂತೆ ಸಂಭ್ರಮಿಸಿದ್ದಾನೆ. ಇಲ್ಲಿ ಅರ್ನಬ್ ಗೋಸ್ವಾಮಿ, ಆತನ ಬೆಂಬಲಿಸುವವರು, ಆತನ ಧೋರಣೆಗಳನ್ನು ಒಪ್ಪುವ ಪಕ್ಷದವರ ಉದ್ದೇಶ ಸ್ಪಷ್ಟವಾಗಿದೆ ಎಂದು ಪ್ರಗತ್ ಕೆ.ಆರ್ ಅಭಿಪ್ರಾಯಪಟ್ಟಿದ್ದಾರೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.


ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ದೇಶದ್ರೋಹಿ ಕೆಲಸ ಮಾಡಿದರೂ ಪರವಾಗಿಲ್ಲ ……
    ಆದರೆ ಅವನು BJP ಗೆ ಬಕೆಟ್ ಹಿಡಿದ್ರೆ ಅವನು ದೇಶಪ್ರೇಮಿ…
    RSS..BJP…ಆಟವಿದು…

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...