Homeಮುಖಪುಟಅರ್ನಬ್‌ ಗೋಸ್ವಾಮಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಆರೋಪ, ಇಬ್ಬರ ಬಂಧನ

ಅರ್ನಬ್‌ ಗೋಸ್ವಾಮಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಆರೋಪ, ಇಬ್ಬರ ಬಂಧನ

- Advertisement -
- Advertisement -

ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ಮೇಲೆ ಇಂದು ಬೆಳಗಿನ ಜಾವ ಮುಂಬೈನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಗೋಸ್ವಾಮಿ ಆರೋಪಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇಂದು ಬೆಳಿಗ್ಗೆ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯ ಗೋಸ್ವಾಮಿ ಇಬ್ಬರು ತಮ್ಮ ಸ್ಟುಡಿಯೋದಿಂದ ಕೆಲಸ ಮುಗಿಸಿ ಮನಗೆ ತೆರಳುತ್ತಿರುವಾಗ ಅವರ ಮೇಲೆ ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡಿಸಿದ್ದಾರೆ ಎಂದು ಪೊಲೀಸ್‌ ದೂರು ದಾಖಲಾಗಿದೆ. ಹಲ್ಲೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಇಬ್ಬರು ಶಂಕಿತ ಆರೋಪಿಗಳನ್ನು ಮುಂಬೈನ ಎನ್‌ಎಂ ಜೋಶಿ ಮಾರ್ಗ್‌ ಪೋಲೀಸರು ಬಂಧಿಸಿದ್ದು, ಅವರ ಮೇಲೆ ಐಪಿಸಿ ಸೆಕ್ಷನ್‌ 341 ಮತ್ತು 504 ರೀತ್ಯಾ ಎಫ್‌ಐಆರ್‌ ಹಾಕಲಾಗಿದೆ.

ನಿನ್ನೆ ಇಡೀ ದಿನ ಟ್ವಿಟ್ಟರ್‌ನಲ್ಲಿ #ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿತ್ತು. ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ಅರ್ನಬ್‌ ವಿರುದ್ಧ ದೂರುಗಳನ್ನು ದಾಖಲಿಸಿದ್ದು, ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿದ್ದವು.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ರವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದರು.

ಇಂದು ಟ್ವಿಟ್ಟರ್‌ನಲ್ಲಿ #SoniaGoonsAttackArnab #IsupportArnabGoswami ಹ್ಯಾಸ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಐ ಸಪೋರ್ಟ್‌ ಅರ್ನಬ್‌ ಹ್ಯಾಸ್‌ಟ್ಯಾಗ್‌ ಹತ್ತು ಲಕ್ಷಕ್ಕೂ ಅಧಿಕ ಟ್ವೀಟ್‌ಗಳನ್ನು ಕಂಡಿದೆ.

ಅರ್ನಬ್ ಅಪರಾಧಿ. ಪ್ರತೀಕಾರದ ಪ್ರಚಾರಕ್ಕಾಗಿ ಪತ್ರಿಕೋದ್ಯಮವನ್ನು ಬಳಸಿಕೊಂಡಿದ್ದಕ್ಕೆ ಅವರಿಗೆ ನಾಚಿಕೆಯಾಗಬೇಕು. ಆತನ ಮೇಲೆ ಹಿಂಸೆ ನಡೆಸುವುದಕ್ಕೂ ಅವನು ಲಾಯಕ್ಕಿಲ್ಲ. ಅವನ ಮೇಲೆ ಹಲ್ಲೆ, ಅದು ನಕಲಿಯಾಗಿದ್ದರೂ, ತನಿಖೆ ನಡೆಸಬೇಕು ಮತ್ತು ಅರ್ನಾಬ್‌ನನ್ನು ಅವನ ಹೊಲಸು ಕೆಲಸಗಳಿಗಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನಿಖಿಲ್‌ ವಾಗ್ಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವು ಸಾಮಾಜಿಕ ಕಾರ್ಯಕರ್ತರು ಅರ್ನಬ್‌ ಮೇಲಿನ ದಾಳಿ ಅನುಮಾನಸ್ಪದವಾಗಿದೆ. 2002ರಲ್ಲಿಯೇ ಇದೇ ರೀತಿಯಾಗಿ ಅವರು ಆಧಾರರಹಿತವಾಗಿ ಆರೋಪ ಮಾಡಿ ನಂತರ ಸಿಕ್ಕಿಬಿದ್ದಿದ್ದರು. ಈಗಲೂ ಅವರು ತಮ್ಮ ಮೇಲೆ ದಾಳಿಯಾಗಿದ್ದರ ಬಗ್ಗೆ ಮಾಡಿರುವ ವಿಡಿಯೋ ನಿನ್ನೆ ರಾತ್ರಿ 8 ಗಂಟೆಯ ವೇಳೆಯಲ್ಲಿ. ಇನ್ನು ದಾಳಿಯಾಗಿರುವುದು 12 ಗಂಟೆಯ ನಂತರ ಎಂದು ಹೇಳಿದ್ದಾರೆ. ಈ ಬಗ್ಗೆ ವೈಜ್ಞಾನಿಕ ತನಿಖೆ ನಡೆದರೆ ಅವರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ದಿನೂರವರು ಆರೋಪಿಸಿದ್ದಾರೆ.

ಅರ್ನಾಬ್ ಗೋಸ್ವಾಮಿಯ ಮೇಲೆ ದಾಳಿ ನಡೆದಿರೋದು ಅವನೇ ಹೇಳುವ ಪ್ರಕಾರ ಮಧ್ಯರಾತ್ರಿ 12.15ರ ಸುಮಾರಿಗೆ. ಆದರೆ ಅರ್ನಾಬ್ ದಾಳಿ ಕುರಿತು ವರ್ಣಿಸುವ…

Posted by Dinesh Kumar Dinoo on Wednesday, April 22, 2020


ಇದನ್ನೂ ಓದಿ: ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...