Homeಮುಖಪುಟಅರ್ನಬ್‌ ಗೋಸ್ವಾಮಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಆರೋಪ, ಇಬ್ಬರ ಬಂಧನ

ಅರ್ನಬ್‌ ಗೋಸ್ವಾಮಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಆರೋಪ, ಇಬ್ಬರ ಬಂಧನ

- Advertisement -
- Advertisement -

ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ಮೇಲೆ ಇಂದು ಬೆಳಗಿನ ಜಾವ ಮುಂಬೈನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಗೋಸ್ವಾಮಿ ಆರೋಪಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇಂದು ಬೆಳಿಗ್ಗೆ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯ ಗೋಸ್ವಾಮಿ ಇಬ್ಬರು ತಮ್ಮ ಸ್ಟುಡಿಯೋದಿಂದ ಕೆಲಸ ಮುಗಿಸಿ ಮನಗೆ ತೆರಳುತ್ತಿರುವಾಗ ಅವರ ಮೇಲೆ ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡಿಸಿದ್ದಾರೆ ಎಂದು ಪೊಲೀಸ್‌ ದೂರು ದಾಖಲಾಗಿದೆ. ಹಲ್ಲೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಇಬ್ಬರು ಶಂಕಿತ ಆರೋಪಿಗಳನ್ನು ಮುಂಬೈನ ಎನ್‌ಎಂ ಜೋಶಿ ಮಾರ್ಗ್‌ ಪೋಲೀಸರು ಬಂಧಿಸಿದ್ದು, ಅವರ ಮೇಲೆ ಐಪಿಸಿ ಸೆಕ್ಷನ್‌ 341 ಮತ್ತು 504 ರೀತ್ಯಾ ಎಫ್‌ಐಆರ್‌ ಹಾಕಲಾಗಿದೆ.

ನಿನ್ನೆ ಇಡೀ ದಿನ ಟ್ವಿಟ್ಟರ್‌ನಲ್ಲಿ #ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿತ್ತು. ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ಅರ್ನಬ್‌ ವಿರುದ್ಧ ದೂರುಗಳನ್ನು ದಾಖಲಿಸಿದ್ದು, ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿದ್ದವು.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ರವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದರು.

ಇಂದು ಟ್ವಿಟ್ಟರ್‌ನಲ್ಲಿ #SoniaGoonsAttackArnab #IsupportArnabGoswami ಹ್ಯಾಸ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಐ ಸಪೋರ್ಟ್‌ ಅರ್ನಬ್‌ ಹ್ಯಾಸ್‌ಟ್ಯಾಗ್‌ ಹತ್ತು ಲಕ್ಷಕ್ಕೂ ಅಧಿಕ ಟ್ವೀಟ್‌ಗಳನ್ನು ಕಂಡಿದೆ.

ಅರ್ನಬ್ ಅಪರಾಧಿ. ಪ್ರತೀಕಾರದ ಪ್ರಚಾರಕ್ಕಾಗಿ ಪತ್ರಿಕೋದ್ಯಮವನ್ನು ಬಳಸಿಕೊಂಡಿದ್ದಕ್ಕೆ ಅವರಿಗೆ ನಾಚಿಕೆಯಾಗಬೇಕು. ಆತನ ಮೇಲೆ ಹಿಂಸೆ ನಡೆಸುವುದಕ್ಕೂ ಅವನು ಲಾಯಕ್ಕಿಲ್ಲ. ಅವನ ಮೇಲೆ ಹಲ್ಲೆ, ಅದು ನಕಲಿಯಾಗಿದ್ದರೂ, ತನಿಖೆ ನಡೆಸಬೇಕು ಮತ್ತು ಅರ್ನಾಬ್‌ನನ್ನು ಅವನ ಹೊಲಸು ಕೆಲಸಗಳಿಗಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನಿಖಿಲ್‌ ವಾಗ್ಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವು ಸಾಮಾಜಿಕ ಕಾರ್ಯಕರ್ತರು ಅರ್ನಬ್‌ ಮೇಲಿನ ದಾಳಿ ಅನುಮಾನಸ್ಪದವಾಗಿದೆ. 2002ರಲ್ಲಿಯೇ ಇದೇ ರೀತಿಯಾಗಿ ಅವರು ಆಧಾರರಹಿತವಾಗಿ ಆರೋಪ ಮಾಡಿ ನಂತರ ಸಿಕ್ಕಿಬಿದ್ದಿದ್ದರು. ಈಗಲೂ ಅವರು ತಮ್ಮ ಮೇಲೆ ದಾಳಿಯಾಗಿದ್ದರ ಬಗ್ಗೆ ಮಾಡಿರುವ ವಿಡಿಯೋ ನಿನ್ನೆ ರಾತ್ರಿ 8 ಗಂಟೆಯ ವೇಳೆಯಲ್ಲಿ. ಇನ್ನು ದಾಳಿಯಾಗಿರುವುದು 12 ಗಂಟೆಯ ನಂತರ ಎಂದು ಹೇಳಿದ್ದಾರೆ. ಈ ಬಗ್ಗೆ ವೈಜ್ಞಾನಿಕ ತನಿಖೆ ನಡೆದರೆ ಅವರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ದಿನೂರವರು ಆರೋಪಿಸಿದ್ದಾರೆ.

ಅರ್ನಾಬ್ ಗೋಸ್ವಾಮಿಯ ಮೇಲೆ ದಾಳಿ ನಡೆದಿರೋದು ಅವನೇ ಹೇಳುವ ಪ್ರಕಾರ ಮಧ್ಯರಾತ್ರಿ 12.15ರ ಸುಮಾರಿಗೆ. ಆದರೆ ಅರ್ನಾಬ್ ದಾಳಿ ಕುರಿತು ವರ್ಣಿಸುವ…

Posted by Dinesh Kumar Dinoo on Wednesday, April 22, 2020


ಇದನ್ನೂ ಓದಿ: ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...