Homeಮುಖಪುಟಅರ್ನಬ್‌ ಗೋಸ್ವಾಮಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಆರೋಪ, ಇಬ್ಬರ ಬಂಧನ

ಅರ್ನಬ್‌ ಗೋಸ್ವಾಮಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಆರೋಪ, ಇಬ್ಬರ ಬಂಧನ

- Advertisement -
- Advertisement -

ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ಮೇಲೆ ಇಂದು ಬೆಳಗಿನ ಜಾವ ಮುಂಬೈನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಗೋಸ್ವಾಮಿ ಆರೋಪಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇಂದು ಬೆಳಿಗ್ಗೆ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯ ಗೋಸ್ವಾಮಿ ಇಬ್ಬರು ತಮ್ಮ ಸ್ಟುಡಿಯೋದಿಂದ ಕೆಲಸ ಮುಗಿಸಿ ಮನಗೆ ತೆರಳುತ್ತಿರುವಾಗ ಅವರ ಮೇಲೆ ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡಿಸಿದ್ದಾರೆ ಎಂದು ಪೊಲೀಸ್‌ ದೂರು ದಾಖಲಾಗಿದೆ. ಹಲ್ಲೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಇಬ್ಬರು ಶಂಕಿತ ಆರೋಪಿಗಳನ್ನು ಮುಂಬೈನ ಎನ್‌ಎಂ ಜೋಶಿ ಮಾರ್ಗ್‌ ಪೋಲೀಸರು ಬಂಧಿಸಿದ್ದು, ಅವರ ಮೇಲೆ ಐಪಿಸಿ ಸೆಕ್ಷನ್‌ 341 ಮತ್ತು 504 ರೀತ್ಯಾ ಎಫ್‌ಐಆರ್‌ ಹಾಕಲಾಗಿದೆ.

ನಿನ್ನೆ ಇಡೀ ದಿನ ಟ್ವಿಟ್ಟರ್‌ನಲ್ಲಿ #ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿತ್ತು. ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ಅರ್ನಬ್‌ ವಿರುದ್ಧ ದೂರುಗಳನ್ನು ದಾಖಲಿಸಿದ್ದು, ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿದ್ದವು.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ರವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದರು.

ಇಂದು ಟ್ವಿಟ್ಟರ್‌ನಲ್ಲಿ #SoniaGoonsAttackArnab #IsupportArnabGoswami ಹ್ಯಾಸ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಐ ಸಪೋರ್ಟ್‌ ಅರ್ನಬ್‌ ಹ್ಯಾಸ್‌ಟ್ಯಾಗ್‌ ಹತ್ತು ಲಕ್ಷಕ್ಕೂ ಅಧಿಕ ಟ್ವೀಟ್‌ಗಳನ್ನು ಕಂಡಿದೆ.

ಅರ್ನಬ್ ಅಪರಾಧಿ. ಪ್ರತೀಕಾರದ ಪ್ರಚಾರಕ್ಕಾಗಿ ಪತ್ರಿಕೋದ್ಯಮವನ್ನು ಬಳಸಿಕೊಂಡಿದ್ದಕ್ಕೆ ಅವರಿಗೆ ನಾಚಿಕೆಯಾಗಬೇಕು. ಆತನ ಮೇಲೆ ಹಿಂಸೆ ನಡೆಸುವುದಕ್ಕೂ ಅವನು ಲಾಯಕ್ಕಿಲ್ಲ. ಅವನ ಮೇಲೆ ಹಲ್ಲೆ, ಅದು ನಕಲಿಯಾಗಿದ್ದರೂ, ತನಿಖೆ ನಡೆಸಬೇಕು ಮತ್ತು ಅರ್ನಾಬ್‌ನನ್ನು ಅವನ ಹೊಲಸು ಕೆಲಸಗಳಿಗಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನಿಖಿಲ್‌ ವಾಗ್ಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವು ಸಾಮಾಜಿಕ ಕಾರ್ಯಕರ್ತರು ಅರ್ನಬ್‌ ಮೇಲಿನ ದಾಳಿ ಅನುಮಾನಸ್ಪದವಾಗಿದೆ. 2002ರಲ್ಲಿಯೇ ಇದೇ ರೀತಿಯಾಗಿ ಅವರು ಆಧಾರರಹಿತವಾಗಿ ಆರೋಪ ಮಾಡಿ ನಂತರ ಸಿಕ್ಕಿಬಿದ್ದಿದ್ದರು. ಈಗಲೂ ಅವರು ತಮ್ಮ ಮೇಲೆ ದಾಳಿಯಾಗಿದ್ದರ ಬಗ್ಗೆ ಮಾಡಿರುವ ವಿಡಿಯೋ ನಿನ್ನೆ ರಾತ್ರಿ 8 ಗಂಟೆಯ ವೇಳೆಯಲ್ಲಿ. ಇನ್ನು ದಾಳಿಯಾಗಿರುವುದು 12 ಗಂಟೆಯ ನಂತರ ಎಂದು ಹೇಳಿದ್ದಾರೆ. ಈ ಬಗ್ಗೆ ವೈಜ್ಞಾನಿಕ ತನಿಖೆ ನಡೆದರೆ ಅವರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ದಿನೂರವರು ಆರೋಪಿಸಿದ್ದಾರೆ.

ಅರ್ನಾಬ್ ಗೋಸ್ವಾಮಿಯ ಮೇಲೆ ದಾಳಿ ನಡೆದಿರೋದು ಅವನೇ ಹೇಳುವ ಪ್ರಕಾರ ಮಧ್ಯರಾತ್ರಿ 12.15ರ ಸುಮಾರಿಗೆ. ಆದರೆ ಅರ್ನಾಬ್ ದಾಳಿ ಕುರಿತು ವರ್ಣಿಸುವ…

Posted by Dinesh Kumar Dinoo on Wednesday, April 22, 2020


ಇದನ್ನೂ ಓದಿ: ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...