Homeಮುಖಪುಟಅರ್ನಬ್ ಗೋಸ್ವಾಮಿ ಸೇರಿ 14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿದ I.N.D.I.A.

ಅರ್ನಬ್ ಗೋಸ್ವಾಮಿ ಸೇರಿ 14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿದ I.N.D.I.A.

- Advertisement -
- Advertisement -

INDIA ಒಕ್ಕೂಟದ ನಾಯಕರು ಮುಂಬರುವ ದಿನಗಳಲ್ಲಿ ಕೆಲವು ಸುದ್ದಿವಾಹಿನಿಗಳ ನಿರೂಪಕರ ಕಾರ್ಯಕ್ರಮ ಹಾಗೂ ಸಂವಾದಗಳನ್ನು ಬಹಿಷ್ಕರಿಸುವುದಾಗಿ ಬುಧವಾರ ಪ್ರಕಟಿಸಿತ್ತು. ಇದೀಗ ಯಾವ ಯಾವ ಸುದ್ದಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸುತ್ತೇವೆ ಎಂಬ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಅರ್ನಬ್ ಗೋಸ್ವಾಮಿ ಸೇರಿದಂತೆ ಒಟ್ಟು 14 ಸುದ್ದಿ ನಿರೂಪಕರ ಹೆಸರುಗಳನ್ನು ಪಟ್ಟಿ ಮಾಡಿದೆ. ಇವರೆಲ್ಲರೂ ಹಿಂದಿ ಹಾಗೂ ಇಂಗ್ಲಿಷ್ ಸುದ್ದಿ ವಾಹಿನಿಗಳನ್ನು ಪ್ರತಿನಿಧಿಸುತ್ತಿದ್ದಾರೆ. ಇವರಲ್ಲಿ ಕೆಲವು ಮಹಿಳಾ ನಿರೂಪಕರೂ ಇದ್ದಾರೆ. ರಾಜ್ಯದ ಪ್ರಾದೇಶಿಕ ಸುದ್ದಿ ವಾಹಿನಿ ಕಾರ್ಯಕ್ರಮ ಅಥವಾ ನಿರೂಪಕರ ಹೆಸರು ಪಟ್ಟಿಯಲ್ಲಿಲ್ಲ.

ಬಿಜೆಪಿ ಪರ ಎಂದು ಗುರುತಿಸಿಕೊಂಡಿರುವ ಅಥವಾ ಪ್ರಚೋದನಾತ್ಮಕ ಮತ್ತು ಕೋಮು ಭಾವನೆ ಕೆರಳಿಸುವಂತೆ ಚರ್ಚಾ ಕಾರ್ಯಕ್ರಮ ನಡೆಸುವ ಆರೋಪದಡಿ ಈ ನಿರೂಪಕರನ್ನು ಬಹಿಷ್ಕರಿಸಲು ಐಎನ್‌ಡಿಐಎ ಬಣ ನಿರ್ಧರಿಸಿದೆ. ನೈಜ ಸಮಸ್ಯೆಗಳ ಕುರಿತಾದ ಗಮನವನ್ನು ಬೇರೆಡೆ ತಿರುಗಿಸುವ ಕೆಲಸವನ್ನು ಈ ನಿರೂಪಕರು ಮಾಡುತ್ತಿದ್ದಾರೆ ಎಂದು ದೂರಲಾಗಿದೆ.

ಈ ಹಿಂದೆ ಕೂಡ ಕಾಂಗ್ರೆಸ್ ಮಾಧ್ಯಮಗಳಿಂದ ದೂರ ಉಳಿಯುವ ನಿರ್ಧಾರ ಮಾಡಿತ್ತು. 2019ರ ಚುನಾವಣೆ ಸಂದರ್ಭದಲ್ಲಿ ಅದು ತನ್ನ ವಕ್ತಾರರನ್ನು ಸುದ್ದಿವಾಹಿನಿಗಳ ಚರ್ಚೆಗೆ ಕಳುಹಿಸುವುದಿಲ್ಲ ಎಂದು ಹೇಳಿತ್ತು. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ INDIA ಕೂಟದ ವಿವಿಧ ಪಕ್ಷಗಳು ಈ ಪಟ್ಟಿಯನ್ನು ಹಂಚಿಕೊಂಡಿವೆ.

INDIA ಗುರುತಿಸಿರುವ 14 ಮಂದಿ ನಿರೂಪಕರ ಪಟ್ಟಿ ಇಲ್ಲಿದೆ..

  • ಅದಿತಿ ತ್ಯಾಗಿ
  • ಅಮನ್ ಚೋಪ್ರಾ
  • ಅಮೀಶ್ ದೇವಗನ್
  • ಆನಂದ್ ನರಸಿಂಹನ್
  • ಅರ್ನಬ್ ಗೋಸ್ವಾಮಿ
  • ಅಶೋಕ್ ಶ್ರೀವಾಸ್ತವ
  • ಚಿತ್ರ ತ್ರಿಪಾಠಿ
  • ಗೌರವ್ ಸಾವಂತ್
  • ನವಿಕಾ ಕುಮಾರ್
  • ಪ್ರಾಚಿ ಪರಾಶರ್
  • ರುಬಿಕಾ ಲಿಯಾಖತ್
  • ಶಿವ್ ಅರೂರ್
  • ಸುಧೀರ್ ಚೌಧುರಿ
  • ಸುಶಾಂತ್ ಸಿನ್ಹಾ.

ಇದನ್ನೂ ಓದಿ: INDIA ಒಕ್ಕೂಟದಿಂದ ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ: ಪಟ್ಟಿ ಸಿದ್ದಪಡಿಸಿದ ಉಪ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...