Homeಮುಖಪುಟಅರ್ನಾಬ್ ಜಾಮೀನು ಅರ್ಜಿ ವಿಚಾರಣೆ: ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ

ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ: ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ

ಮಹಾರಾಷ್ಟ್ರ ಸರ್ಕಾರವು ಅರ್ನಾಬ್‌ ಅವರ ಟ್ವೀಟ್‌ಗಳನ್ನು ,ಟಿವಿಯಲ್ಲಿ ಅವರ ಅವಹೇಳನ ಮಾತುಗಳನ್ನು ನಿರ್ಲಕ್ಷಿಸಬೇಕು ಎಂದು ನ್ಯಾಯಪೀಠ ಹೇಳಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ 2018ರ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವಂತೆ ಅರ್ನಾಬ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೊರ್ಟ್ ಬುಧವಾರ ವಿಚಾರಣೆ ನಡೆಸಿದೆ.

ಈ ವೇಳೆ ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಈ ರೀತಿ ಮೊಟಕುಗೊಳಿಸಿದರೆ ಅದು ನ್ಯಾಯದ ವ್ಯವಸ್ಥೆಯನ್ನು ನಗೆಪಾಟಲು ಮಾಡುತ್ತದೆ ಎಂದು ಹೇಳಿದೆ.

ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರ ರಜಾ ಪೀಠವು ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದೆ.

ಗೋಸ್ವಾಮಿಯವರ ಪ್ರಕರಣವು “ವೈಯಕ್ತಿಕ ಸ್ವಾತಂತ್ರ್ಯ”ಕ್ಕೆ ಸಂಬಂಧಿಸಿರುವುದರಿಂದ ಅವರನ್ನು ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿದೆಯೇ ಎಂದು ಮಹಾರಾಷ್ಟ್ರ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ನಾಳೆ ಸುಪ್ರೀಂನಲ್ಲಿ ಅರ್ನಾಬ್ ಅರ್ಜಿ ವಿಚಾರಣೆ: ಗೋಸ್ವಾಮಿಗೆ ಜೈಲೇ ಗತಿಯೋ, ಬೈಲ್ ಸಿಗುತ್ತದೋ?

ಮಹಾರಾಷ್ಟ್ರ ಸರ್ಕಾರವು ಅರ್ನಾಬ್‌ ಅವರ ಟ್ವೀಟ್‌ಗಳನ್ನು (ಟಿವಿಯಲ್ಲಿ ಅರ್ನಾಬ್ ಅವರ ಅವಹೇಳನ ಮಾತುಗಳನ್ನು) ನಿರ್ಲಕ್ಷಿಸಬೇಕು ಎಂದು ಹೇಳಿದೆ.

“ಅವರ ಸಿದ್ಧಾಂತ ಏನೇ ಇರಲಿ. ನಾನು ಕನಿಷ್ಠ ಅವರ ಚಾನೆಲ್ ಅನ್ನು ಸಹ ವೀಕ್ಷಿಸುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಸಾಂವಿಧಾನಿಕ ನ್ಯಾಯಾಲಯವು ಇಂದು ಹಸ್ತಕ್ಷೇಪ ಮಾಡದಿದ್ದರೆ, ನಾವು ನಿರ್ವಿವಾದವಾಗಿ ವಿನಾಶದ ಹಾದಿಯಲ್ಲಿ ಪ್ರಯಾಣಿಸುತ್ತಿದ್ದೇವೆ ಎಂದಾಗುತ್ತದೆ. ನೀವು ಅವರನ್ನು ನಿರಾಕರಿಸಬಹುದು. ಈ ಆರೋಪಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನದ್ದಾಗಿದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಮುಖ್ಯ ವಿಷಯವೆಂದರೆ, ಸರ್ಕಾರಗಳು ಅವರನ್ನು (ಟಿವಿಯಲ್ಲಿ ನಿಂದಿಸುವುದು) ನಿರ್ಲಕ್ಷಿಸಬೇಕು. ಇದು ಯಾವ ಆಧಾರದ ಮೇಲೆ ಚುನಾವಣೆಗಳನ್ನು ನಡೆಸುತ್ತದೆ ಎಂಬುದರ ಆಧಾರವಲ್ಲ. ಅವರು ಹೇಳುವುದು ಚುನಾವಣೆಯಲ್ಲಿ ಏನಾದರೂ ವ್ಯತ್ಯಾಸ ಉಂಟುಮಾಡುತ್ತದೆ ಎಂದು ನೀವು ಭಾವಿಸುತ್ತೀರಾ? ಎಂದು ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದೆ.

ರಾಜ್ಯ ಸರ್ಕಾರಗಳು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡರೆ, ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಅವರು ಅರಿತುಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೇ ವಿಚಾರ ಬೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಿಗೂ ಅನ್ವಯ ಆಗಬೇಕಲ್ಲವಾ?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...