Homeಮುಖಪುಟಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು.

- Advertisement -
- Advertisement -

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಮುಸ್ಲಿಮರ ಭಾವನೆಗಳನ್ನು ನೋಯಿಸಿದ ಆರೋಪದ ನಂತರ ಅಪರೂಪಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ. ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿಯಾದ ಸುದ್ದಿ ಪ್ರಸಾರ ಮಾಡಿ ಸಿಕ್ಕಿಬಿದ್ದ ನಂತರ ಅರ್ನಬ್‌ ಗೋಸ್ವಾಮಿಯ ಚಾನೆಲ್‌ನ ಅಸಾಧಾರಣ ಕ್ಷಮೆಯಾಚನೆಯು ಹೊರಬಿದ್ದಿದೆ.

ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪವನ್ನು ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿಯು ಕ್ಷಮೆಯಾಚಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಹಲವಾರು ಮುಸ್ಲಿಂ ಗುಂಪುಗಳು ರಿಪಬ್ಲಿಕ್‌ ಮತ್ತು ಸಿಎನ್‌ಎನ್-ನ್ಯೂಸ್ 18 ಚಾನೆಲ್‌‌ಗಳ ಸುಳ್ಳು ಸುದ್ದಿ ಹರಡುವ ಕೃತ್ಯವನ್ನು ಖಂಡಿಸಿ ಪತ್ರವೊಂದನ್ನು ಬರೆದಿದ್ದು, ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ. ಎಐಎಂಪಿಎಲ್‌ಬಿಯ ಪತ್ರದಲ್ಲಿ “ಸಿಎನ್‌ಎನ್-ನ್ಯೂಸ್ 18 ಚಾನೆಲ್‌ ಮುಸ್ಲಿಮರಿಗೆ ಪವಿತ್ರವಾದ ಮೂರು ತಾಣಗಳನ್ನು ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ‘ಭಯೋತ್ಪಾದಕ ಕಾರ್ಖಾನೆ’ಗೆ ಸಂಬಂಧಿಸಿವೆ ಎಂದು ತೋರಿಸುವ ಮೂಲಕ ಧರ್ಮನಿಂದನೆ ಮಾಡಿದ್ದನ್ನು ಖಂಡಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಕುರಿತು ಟ್ವಿಟ್ಟರ್‌ನಲ್ಲಿ “ಎಐಎಂಪಿಎಲ್‌ಬಿಯ ಉಪಾಧ್ಯಕ್ಷ ಎಂ.ಎಲ್.ಜಲಾಲುದ್ದೀನ್ ಉಮ್ರಿಯವರನ್ನು ರಿಪಬ್ಲಿಕ್‌ ಟಿವಿಯು ಭಯೋತ್ಪಾದಕನೆಂದು ಸುಳ್ಳು ಆರೋಪಿಸಿದ್ದಕ್ಕಾಗಿ ತೀವ್ರವಾಗಿ ಖಂಡಿಸುತ್ತೇವೆ. ಮೆಕ್ಕಾ, ಮದೀನಾ ಮತ್ತು ಕುಡ್ಸ್‌ನ ಕುರಿತು ಧರ್ಮನಿಂದನೆ ಮಾಡಿದ್ದಕ್ಕೆ CNNnews18 ನ ಕ್ರಮವನ್ನು ಖಂಡಿಸುತ್ತೇವೆ. ಈ ಕುರಿತು ಸಾರ್ವಜನಿಕವಾಗಿ ಎರಡು ಚಾನೆಲ್‌ಗಳು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು. ಅದರ ಟ್ವೀಟ್‌ನಲ್ಲಿ, “ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವನ್ನು ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸ್ಪಷ್ಟೀಕರಣ ಮತ್ತು ಕ್ಷಮೆಯಾಚನೆಯನ್ನು ರಿಪಬ್ಲಿಕ್ ಟಿವಿಯಲ್ಲಿ ಸಂಜೆ 4:03 ಕ್ಕೆ ಪ್ರಸಾರ ಮಾಡಲಾಯಿತು. ಇದು ಅಜಾಗರೂಕ ದೋಷವಾಗಿದ್ದು, ಸಂಬಂಧಪಟ್ಟ ವೀಡಿಯೊದಲ್ಲಿ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವು ನಮ್ಮ ತಪ್ಪಾಗಿ ಪ್ರಸಾರವಾಯಿತು ಮತ್ತು ತಕ್ಷಣ ಸರಿಪಡಿಸಲಾಗಿದೆ”

ಅದರ ನಂತರದ ಟ್ವೀಟ್‌ನಲ್ಲಿ, “ರಿಪಬ್ಲಿಕ್ ಟಿವಿ ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತದೆ” ಎಂದು ಬರೆದಿದೆ.

ರಿಪಬ್ಲಿಕ್ ಟಿವಿ ತನ್ನ ವೆಬ್‌ಸೈಟ್‌ನಿಂದ ವಿವಾದಾತ್ಮಕ ವೀಡಿಯೊವನ್ನು ತೆಗೆದುಹಾಕಿರುವಂತೆ ತೋರುತ್ತಿದೆ ಮತ್ತು ಕಾಶ್ಮೀರದ ಜಮಾತ್-ಇ-ಇಸ್ಲಾಮಿ ವಿರುದ್ಧ ಸರಕಾರದ ದಬ್ಬಾಳಿಕೆಯ ಕುರಿತಾದ ತನ್ನ ವರದಿಯನ್ನು ನವೀಕರಿಸಿದೆ. ಕಣಿವೆಯ ಜಮಾತೆ-ಇ-ಇಸ್ಲಾಮಿ ಭಾರತದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಸಿಎನ್ಎನ್-ನ್ಯೂಸ್ 18 ಚಾನೆಲ್‌ನ ಅವಾಂತರಗಳು

ಮತ್ತೊಂದೆಡೆ, ಮುಕೇಶ್ ಅಂಬಾನಿಯ ರಿಲಯನ್ಸ್ ಗ್ರೂಪ್ ಒಡೆತನದ ಚಾನೆಲ್ ಸಿಎನ್ಎನ್-ನ್ಯೂಸ್ 18 ಚಾನೆಲ್‌ ಇನ್ನಷ್ಟು ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಈ ಚಾನೆಲ್‌ ವಿಶ್ವದಾದ್ಯಂತ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಎಐಎಂಪಿಎಲ್‌ಬಿಯು ಆರೋಪಿಸಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ವ್ಯಕ್ತಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ಆಸ್ತಿ ವಿವರಗಳನ್ನು ಚಾನೆಲ್ ಶನಿವಾರ ತನ್ನ ಪ್ರಸಾರದಲ್ಲಿ ತಿಳಿಸಿದೆ. ಆಗ ಅದು ‘ಬಹವಾಲ್‌ಪುರದ ಜೆಎಂ ಭಯೋತ್ಪಾದಕ ಕಾರ್ಖಾನೆ’ ಎಂಬ ಮುಖ್ಯಾಂಶಗಳನ್ನು ಪ್ರಸಾರ ಮಾಡುತ್ತಿರುವಾಗ, ಮೆಕ್ಕಾದ ಬೃಹತ್‌ ಮಸೀದಿಯ ಫೋಟೋಗಳನ್ನು ತೋರಿಸಿದೆ. ಮದೀನಾದ ಮಸೀದಿ ಮತ್ತು ಅಲ್-ಅಕ್ಸಾವನ್ನು ಕೂಡ ಅಜರ್‌ನ ಭಯೋತ್ಪಾದಕ ಕಾರ್ಖಾನೆಯ ಭಾಗವೆಂದು ಪ್ರಸಾರ ಮಾಡಿದೆ. ಈ ಮಸೀದಿಗಳನ್ನು ವಿಶ್ವದಾದ್ಯಂತ ಮುಸ್ಲಿಮರಿಗೆ ಮೂರು ಅತ್ಯಂತ ಪವಿತ್ರ ತಾಣವೆಂದು ಪರಿಗಣಿಸಲಾಗಿದೆ.

ಎಐಎಂಪಿಎಲ್‌ಬಿಯ ಪತ್ರವು ಸಿಎನ್ಎನ್-ನ್ಯೂಸ್ 18 ರ ನ್ಯೂಸ್ ಫ್ಲ್ಯಾಷ್ ಅನ್ನು ಚೇಷ್ಟೆಯೆಂದು, ಇಸ್ಲಾಂ ಧರ್ಮವನ್ನು ಕೆಣಕಲು ಮತ್ತು ಮುಸ್ಲಿಮರನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದೆ. ಜಗತ್ತಿನಾದ್ಯಂತ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಂಬಲಾಗದಷ್ಟು ಕೋಮುಪ್ರಚೋದನೆಯ ಪ್ರಸಾರಕ್ಕಾಗಿ ಚಾನೆಲ್ ಇನ್ನೂ ಕ್ಷಮೆಯಾಚಿಸಿಲ್ಲ. ಇಸ್ಲಾಂ ಧರ್ಮದ ಮೂರು ಪವಿತ್ರ ತಾಣಗಳ ಚಿತ್ರಗಳನ್ನು ‘ಜೆಎಂ ಭಯೋತ್ಪಾದಕ ಅಂಶ’ ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡುವ ಮೂಲಕ, ಚಾನೆಲ್ ಮುಸ್ಲಿಮರನ್ನು ಭಯೋತ್ಪಾದನೆಯೊಂದಿಗೆ ಜೋಡಿಸಲು ಪ್ರಯತ್ನಿಸಿದೆ.

ಒಟ್ಟಿನಲ್ಲಿ ಭಾರತದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಮುಸ್ಲಿಂ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ಸುಳ್ಳು ಸುದ್ದಿ ಹರಡುವಲ್ಲಿ ನಿರತವಾಗಿವೆ. ಆ ಮೂಲಕ ಪತ್ರಿಕೋದ್ಯಮದ ಮೂಲ ಆಶಯಗಳನ್ನು ಮಣ್ಣು ಮಾಡುತ್ತಿವೆ. ಆದರೆ ಇದರ ವಿರುದ್ಧ ದೂರು ನೀಡುವ, ಸುಳ್ಳುಗಳನ್ನು ಬಯಲು ಮಾಡುವ ಕೆಲಸವೂ ಕೂಡ ನಡೆಯುತ್ತಿರುವುದು ಆಶಾದಾಯಕ ಸಂಗತಿಯಾಗಿದೆ.

ಕೃಪೆ: ಜನತಕಾರಿಪೋರ್ಟರ್‌

(ಈ ಲೇಖನ 2019ರ ಮಾರ್ಚ್‌ 3 ರಂದು ಜನತಕಾರಿಪೋರ್ಟರ್‌ನಲ್ಲಿ ಪ್ರಕಟವಾಗಿದ್ದು. ಮಾಧ್ಯಮಗಳು ಹೇಗೆ ಸುಳ್ಳು ಹಬ್ಬಿಸುತ್ತವೆ ಎಂಬುದಕ್ಕೆ ಉದಾಹರಣೆಯಾಗಿದ್ದರಿಂದ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ)


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾರತದ ದೇಶದಲ್ಲಿನ ಮಾಧ್ಯಮದ ಸೂ……ಮಕ್ಕಳು ಹೀಗೆ ಸುಮ್ಮನೆ ಸುಳ್ಳಿನ ಸುದ್ದಿ ಹರಡಿ ಭಾರತದ ದೇಶವನ್ನು ಛಿದ್ರ ಛಿದ್ರ ಛಿದ್ರವಾಗಿ ಮಾಡಿದರೆ……ಇದಕ್ಕೆ ಮೂಲ ಪುರುಷನೇ ನರೇಂದ್ರ ಮೋದಿ ಅವನು ಗೆಲ್ಲಲು ಮುಖ್ಯ ಕಾರಣ 2 ಜಿ ಸ್ಪ್ರೆಕ್ಟ್ರಂ ಅದು ನಮಗೆ ಮಹಾನಾಯಕ ಸುಳ್ಳು ಎಂದೂ ಅಂದೇ ಅದರ ಬಗ್ಗೆ ಲೇಖನವೇ ಬರೆದಿದ್ದೇ, ಒಬ್ಬ ಸಾಮಾನ್ಯ ದಲಿತ ನಾಯಕನು ಅಷ್ಟು ದೊಡ್ಡ ಹಗರಣವನ್ನು ಮಾಡಲು 1,76,000 ಲಕ್ಷ ಕೋಟಿ ರೂ ಹಗರಣವನ್ನು ಸಾಧ್ಯವಿಲ್ಲವೆಂದು, ಆ ಹಣವನ್ನು ಇಡಲೂ ಸಹ ದಾರಿ ಅರಿಯಲು ಸಾಧ್ಯವಿಲ್ಲವೆಂದು. ಜೊತೆಗೆ ಆತ ಹೊಸಬ ಬಡತನದಿಂದಲೀ ಕುಗ್ರಾಮದಿಂದಲೀ ಬಂದವನು. ಜೊತೆಗೆ ಹಾಗೆಯೇ ಕದ್ದದ್ದು ನಿಜವೇ ಆದರೇ, ತನ್ನ ಗ್ರಾಮದಲ್ಲಿ ಜಮೀನನ್ನು ಕೆಲವೇ ಕೆಲವರು ಬೆರಳೆಣಿಕೆಯಷ್ಟು ಆಸ್ತಿ ಮಾಡಲೇ ಬೇಕಿತ್ತು. ಹೋಗಲೀ ಅವನದು ಜೀವನ ಬಾಳ್ವೇ ಐದು ಪೈಸೆಯಾದರು ಬದಲಾಗಲೇಬೇಕಿತ್ತು. ಜೊತೆಗೆ ಅಗಾಧವಾದ ಜ್ಞಾನವು ಚತುರತೆಯೂ ಮೋಸವು ಗೊತ್ತಿರಬೇಕಿತ್ತು. ಹೋಗಲೀ ಮನ ಮೋಹನ್ ಸಿಂಗ್ ರವರನ್ನು ಹೆದರಿಯಿರಬೇಕಿತ್ತು. ಆದರೇ, ಪ್ರಧಾನಿಗೇ ಗೌರವಿಸದ ಅಹಂ ಇರಬೇಕಾದರೇ ಅದರಲ್ಲಿ ಸತ್ಯ ನ್ಯಾಯ ಧರ್ಮ ನೀತಿ ನಿಯಮ ಇತ್ತು. ಅದಕ್ಕೆ ಮೊದಲು ಸ್ವಾಭಿಮಾನ ಸ್ವಂತಿಕೆಯೇ ತುಂಬಿದ್ದೇ ಕಂಡಿದ್ದೇವು.

    ಬರೆಯಲು ಬಹಳಷ್ಟು ಇದೇ ಸದ್ಯಕ್ಕೆ ಬೇಡ ನಿಲ್ಲಿಸುವೇ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...