Homeಮುಖಪುಟಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು.

- Advertisement -
- Advertisement -

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಮುಸ್ಲಿಮರ ಭಾವನೆಗಳನ್ನು ನೋಯಿಸಿದ ಆರೋಪದ ನಂತರ ಅಪರೂಪಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ. ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿಯಾದ ಸುದ್ದಿ ಪ್ರಸಾರ ಮಾಡಿ ಸಿಕ್ಕಿಬಿದ್ದ ನಂತರ ಅರ್ನಬ್‌ ಗೋಸ್ವಾಮಿಯ ಚಾನೆಲ್‌ನ ಅಸಾಧಾರಣ ಕ್ಷಮೆಯಾಚನೆಯು ಹೊರಬಿದ್ದಿದೆ.

ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪವನ್ನು ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿಯು ಕ್ಷಮೆಯಾಚಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಹಲವಾರು ಮುಸ್ಲಿಂ ಗುಂಪುಗಳು ರಿಪಬ್ಲಿಕ್‌ ಮತ್ತು ಸಿಎನ್‌ಎನ್-ನ್ಯೂಸ್ 18 ಚಾನೆಲ್‌‌ಗಳ ಸುಳ್ಳು ಸುದ್ದಿ ಹರಡುವ ಕೃತ್ಯವನ್ನು ಖಂಡಿಸಿ ಪತ್ರವೊಂದನ್ನು ಬರೆದಿದ್ದು, ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ. ಎಐಎಂಪಿಎಲ್‌ಬಿಯ ಪತ್ರದಲ್ಲಿ “ಸಿಎನ್‌ಎನ್-ನ್ಯೂಸ್ 18 ಚಾನೆಲ್‌ ಮುಸ್ಲಿಮರಿಗೆ ಪವಿತ್ರವಾದ ಮೂರು ತಾಣಗಳನ್ನು ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ‘ಭಯೋತ್ಪಾದಕ ಕಾರ್ಖಾನೆ’ಗೆ ಸಂಬಂಧಿಸಿವೆ ಎಂದು ತೋರಿಸುವ ಮೂಲಕ ಧರ್ಮನಿಂದನೆ ಮಾಡಿದ್ದನ್ನು ಖಂಡಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಕುರಿತು ಟ್ವಿಟ್ಟರ್‌ನಲ್ಲಿ “ಎಐಎಂಪಿಎಲ್‌ಬಿಯ ಉಪಾಧ್ಯಕ್ಷ ಎಂ.ಎಲ್.ಜಲಾಲುದ್ದೀನ್ ಉಮ್ರಿಯವರನ್ನು ರಿಪಬ್ಲಿಕ್‌ ಟಿವಿಯು ಭಯೋತ್ಪಾದಕನೆಂದು ಸುಳ್ಳು ಆರೋಪಿಸಿದ್ದಕ್ಕಾಗಿ ತೀವ್ರವಾಗಿ ಖಂಡಿಸುತ್ತೇವೆ. ಮೆಕ್ಕಾ, ಮದೀನಾ ಮತ್ತು ಕುಡ್ಸ್‌ನ ಕುರಿತು ಧರ್ಮನಿಂದನೆ ಮಾಡಿದ್ದಕ್ಕೆ CNNnews18 ನ ಕ್ರಮವನ್ನು ಖಂಡಿಸುತ್ತೇವೆ. ಈ ಕುರಿತು ಸಾರ್ವಜನಿಕವಾಗಿ ಎರಡು ಚಾನೆಲ್‌ಗಳು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು. ಅದರ ಟ್ವೀಟ್‌ನಲ್ಲಿ, “ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವನ್ನು ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸ್ಪಷ್ಟೀಕರಣ ಮತ್ತು ಕ್ಷಮೆಯಾಚನೆಯನ್ನು ರಿಪಬ್ಲಿಕ್ ಟಿವಿಯಲ್ಲಿ ಸಂಜೆ 4:03 ಕ್ಕೆ ಪ್ರಸಾರ ಮಾಡಲಾಯಿತು. ಇದು ಅಜಾಗರೂಕ ದೋಷವಾಗಿದ್ದು, ಸಂಬಂಧಪಟ್ಟ ವೀಡಿಯೊದಲ್ಲಿ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವು ನಮ್ಮ ತಪ್ಪಾಗಿ ಪ್ರಸಾರವಾಯಿತು ಮತ್ತು ತಕ್ಷಣ ಸರಿಪಡಿಸಲಾಗಿದೆ”

ಅದರ ನಂತರದ ಟ್ವೀಟ್‌ನಲ್ಲಿ, “ರಿಪಬ್ಲಿಕ್ ಟಿವಿ ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತದೆ” ಎಂದು ಬರೆದಿದೆ.

ರಿಪಬ್ಲಿಕ್ ಟಿವಿ ತನ್ನ ವೆಬ್‌ಸೈಟ್‌ನಿಂದ ವಿವಾದಾತ್ಮಕ ವೀಡಿಯೊವನ್ನು ತೆಗೆದುಹಾಕಿರುವಂತೆ ತೋರುತ್ತಿದೆ ಮತ್ತು ಕಾಶ್ಮೀರದ ಜಮಾತ್-ಇ-ಇಸ್ಲಾಮಿ ವಿರುದ್ಧ ಸರಕಾರದ ದಬ್ಬಾಳಿಕೆಯ ಕುರಿತಾದ ತನ್ನ ವರದಿಯನ್ನು ನವೀಕರಿಸಿದೆ. ಕಣಿವೆಯ ಜಮಾತೆ-ಇ-ಇಸ್ಲಾಮಿ ಭಾರತದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಸಿಎನ್ಎನ್-ನ್ಯೂಸ್ 18 ಚಾನೆಲ್‌ನ ಅವಾಂತರಗಳು

ಮತ್ತೊಂದೆಡೆ, ಮುಕೇಶ್ ಅಂಬಾನಿಯ ರಿಲಯನ್ಸ್ ಗ್ರೂಪ್ ಒಡೆತನದ ಚಾನೆಲ್ ಸಿಎನ್ಎನ್-ನ್ಯೂಸ್ 18 ಚಾನೆಲ್‌ ಇನ್ನಷ್ಟು ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಈ ಚಾನೆಲ್‌ ವಿಶ್ವದಾದ್ಯಂತ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಎಐಎಂಪಿಎಲ್‌ಬಿಯು ಆರೋಪಿಸಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ವ್ಯಕ್ತಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ಆಸ್ತಿ ವಿವರಗಳನ್ನು ಚಾನೆಲ್ ಶನಿವಾರ ತನ್ನ ಪ್ರಸಾರದಲ್ಲಿ ತಿಳಿಸಿದೆ. ಆಗ ಅದು ‘ಬಹವಾಲ್‌ಪುರದ ಜೆಎಂ ಭಯೋತ್ಪಾದಕ ಕಾರ್ಖಾನೆ’ ಎಂಬ ಮುಖ್ಯಾಂಶಗಳನ್ನು ಪ್ರಸಾರ ಮಾಡುತ್ತಿರುವಾಗ, ಮೆಕ್ಕಾದ ಬೃಹತ್‌ ಮಸೀದಿಯ ಫೋಟೋಗಳನ್ನು ತೋರಿಸಿದೆ. ಮದೀನಾದ ಮಸೀದಿ ಮತ್ತು ಅಲ್-ಅಕ್ಸಾವನ್ನು ಕೂಡ ಅಜರ್‌ನ ಭಯೋತ್ಪಾದಕ ಕಾರ್ಖಾನೆಯ ಭಾಗವೆಂದು ಪ್ರಸಾರ ಮಾಡಿದೆ. ಈ ಮಸೀದಿಗಳನ್ನು ವಿಶ್ವದಾದ್ಯಂತ ಮುಸ್ಲಿಮರಿಗೆ ಮೂರು ಅತ್ಯಂತ ಪವಿತ್ರ ತಾಣವೆಂದು ಪರಿಗಣಿಸಲಾಗಿದೆ.

ಎಐಎಂಪಿಎಲ್‌ಬಿಯ ಪತ್ರವು ಸಿಎನ್ಎನ್-ನ್ಯೂಸ್ 18 ರ ನ್ಯೂಸ್ ಫ್ಲ್ಯಾಷ್ ಅನ್ನು ಚೇಷ್ಟೆಯೆಂದು, ಇಸ್ಲಾಂ ಧರ್ಮವನ್ನು ಕೆಣಕಲು ಮತ್ತು ಮುಸ್ಲಿಮರನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದೆ. ಜಗತ್ತಿನಾದ್ಯಂತ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಂಬಲಾಗದಷ್ಟು ಕೋಮುಪ್ರಚೋದನೆಯ ಪ್ರಸಾರಕ್ಕಾಗಿ ಚಾನೆಲ್ ಇನ್ನೂ ಕ್ಷಮೆಯಾಚಿಸಿಲ್ಲ. ಇಸ್ಲಾಂ ಧರ್ಮದ ಮೂರು ಪವಿತ್ರ ತಾಣಗಳ ಚಿತ್ರಗಳನ್ನು ‘ಜೆಎಂ ಭಯೋತ್ಪಾದಕ ಅಂಶ’ ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡುವ ಮೂಲಕ, ಚಾನೆಲ್ ಮುಸ್ಲಿಮರನ್ನು ಭಯೋತ್ಪಾದನೆಯೊಂದಿಗೆ ಜೋಡಿಸಲು ಪ್ರಯತ್ನಿಸಿದೆ.

ಒಟ್ಟಿನಲ್ಲಿ ಭಾರತದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಮುಸ್ಲಿಂ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ಸುಳ್ಳು ಸುದ್ದಿ ಹರಡುವಲ್ಲಿ ನಿರತವಾಗಿವೆ. ಆ ಮೂಲಕ ಪತ್ರಿಕೋದ್ಯಮದ ಮೂಲ ಆಶಯಗಳನ್ನು ಮಣ್ಣು ಮಾಡುತ್ತಿವೆ. ಆದರೆ ಇದರ ವಿರುದ್ಧ ದೂರು ನೀಡುವ, ಸುಳ್ಳುಗಳನ್ನು ಬಯಲು ಮಾಡುವ ಕೆಲಸವೂ ಕೂಡ ನಡೆಯುತ್ತಿರುವುದು ಆಶಾದಾಯಕ ಸಂಗತಿಯಾಗಿದೆ.

ಕೃಪೆ: ಜನತಕಾರಿಪೋರ್ಟರ್‌

(ಈ ಲೇಖನ 2019ರ ಮಾರ್ಚ್‌ 3 ರಂದು ಜನತಕಾರಿಪೋರ್ಟರ್‌ನಲ್ಲಿ ಪ್ರಕಟವಾಗಿದ್ದು. ಮಾಧ್ಯಮಗಳು ಹೇಗೆ ಸುಳ್ಳು ಹಬ್ಬಿಸುತ್ತವೆ ಎಂಬುದಕ್ಕೆ ಉದಾಹರಣೆಯಾಗಿದ್ದರಿಂದ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ)


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾರತದ ದೇಶದಲ್ಲಿನ ಮಾಧ್ಯಮದ ಸೂ……ಮಕ್ಕಳು ಹೀಗೆ ಸುಮ್ಮನೆ ಸುಳ್ಳಿನ ಸುದ್ದಿ ಹರಡಿ ಭಾರತದ ದೇಶವನ್ನು ಛಿದ್ರ ಛಿದ್ರ ಛಿದ್ರವಾಗಿ ಮಾಡಿದರೆ……ಇದಕ್ಕೆ ಮೂಲ ಪುರುಷನೇ ನರೇಂದ್ರ ಮೋದಿ ಅವನು ಗೆಲ್ಲಲು ಮುಖ್ಯ ಕಾರಣ 2 ಜಿ ಸ್ಪ್ರೆಕ್ಟ್ರಂ ಅದು ನಮಗೆ ಮಹಾನಾಯಕ ಸುಳ್ಳು ಎಂದೂ ಅಂದೇ ಅದರ ಬಗ್ಗೆ ಲೇಖನವೇ ಬರೆದಿದ್ದೇ, ಒಬ್ಬ ಸಾಮಾನ್ಯ ದಲಿತ ನಾಯಕನು ಅಷ್ಟು ದೊಡ್ಡ ಹಗರಣವನ್ನು ಮಾಡಲು 1,76,000 ಲಕ್ಷ ಕೋಟಿ ರೂ ಹಗರಣವನ್ನು ಸಾಧ್ಯವಿಲ್ಲವೆಂದು, ಆ ಹಣವನ್ನು ಇಡಲೂ ಸಹ ದಾರಿ ಅರಿಯಲು ಸಾಧ್ಯವಿಲ್ಲವೆಂದು. ಜೊತೆಗೆ ಆತ ಹೊಸಬ ಬಡತನದಿಂದಲೀ ಕುಗ್ರಾಮದಿಂದಲೀ ಬಂದವನು. ಜೊತೆಗೆ ಹಾಗೆಯೇ ಕದ್ದದ್ದು ನಿಜವೇ ಆದರೇ, ತನ್ನ ಗ್ರಾಮದಲ್ಲಿ ಜಮೀನನ್ನು ಕೆಲವೇ ಕೆಲವರು ಬೆರಳೆಣಿಕೆಯಷ್ಟು ಆಸ್ತಿ ಮಾಡಲೇ ಬೇಕಿತ್ತು. ಹೋಗಲೀ ಅವನದು ಜೀವನ ಬಾಳ್ವೇ ಐದು ಪೈಸೆಯಾದರು ಬದಲಾಗಲೇಬೇಕಿತ್ತು. ಜೊತೆಗೆ ಅಗಾಧವಾದ ಜ್ಞಾನವು ಚತುರತೆಯೂ ಮೋಸವು ಗೊತ್ತಿರಬೇಕಿತ್ತು. ಹೋಗಲೀ ಮನ ಮೋಹನ್ ಸಿಂಗ್ ರವರನ್ನು ಹೆದರಿಯಿರಬೇಕಿತ್ತು. ಆದರೇ, ಪ್ರಧಾನಿಗೇ ಗೌರವಿಸದ ಅಹಂ ಇರಬೇಕಾದರೇ ಅದರಲ್ಲಿ ಸತ್ಯ ನ್ಯಾಯ ಧರ್ಮ ನೀತಿ ನಿಯಮ ಇತ್ತು. ಅದಕ್ಕೆ ಮೊದಲು ಸ್ವಾಭಿಮಾನ ಸ್ವಂತಿಕೆಯೇ ತುಂಬಿದ್ದೇ ಕಂಡಿದ್ದೇವು.

    ಬರೆಯಲು ಬಹಳಷ್ಟು ಇದೇ ಸದ್ಯಕ್ಕೆ ಬೇಡ ನಿಲ್ಲಿಸುವೇ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...