Homeಮುಖಪುಟಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು.

- Advertisement -
- Advertisement -

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಮುಸ್ಲಿಮರ ಭಾವನೆಗಳನ್ನು ನೋಯಿಸಿದ ಆರೋಪದ ನಂತರ ಅಪರೂಪಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ. ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿಯಾದ ಸುದ್ದಿ ಪ್ರಸಾರ ಮಾಡಿ ಸಿಕ್ಕಿಬಿದ್ದ ನಂತರ ಅರ್ನಬ್‌ ಗೋಸ್ವಾಮಿಯ ಚಾನೆಲ್‌ನ ಅಸಾಧಾರಣ ಕ್ಷಮೆಯಾಚನೆಯು ಹೊರಬಿದ್ದಿದೆ.

ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪವನ್ನು ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿಯು ಕ್ಷಮೆಯಾಚಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಹಲವಾರು ಮುಸ್ಲಿಂ ಗುಂಪುಗಳು ರಿಪಬ್ಲಿಕ್‌ ಮತ್ತು ಸಿಎನ್‌ಎನ್-ನ್ಯೂಸ್ 18 ಚಾನೆಲ್‌‌ಗಳ ಸುಳ್ಳು ಸುದ್ದಿ ಹರಡುವ ಕೃತ್ಯವನ್ನು ಖಂಡಿಸಿ ಪತ್ರವೊಂದನ್ನು ಬರೆದಿದ್ದು, ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ. ಎಐಎಂಪಿಎಲ್‌ಬಿಯ ಪತ್ರದಲ್ಲಿ “ಸಿಎನ್‌ಎನ್-ನ್ಯೂಸ್ 18 ಚಾನೆಲ್‌ ಮುಸ್ಲಿಮರಿಗೆ ಪವಿತ್ರವಾದ ಮೂರು ತಾಣಗಳನ್ನು ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ‘ಭಯೋತ್ಪಾದಕ ಕಾರ್ಖಾನೆ’ಗೆ ಸಂಬಂಧಿಸಿವೆ ಎಂದು ತೋರಿಸುವ ಮೂಲಕ ಧರ್ಮನಿಂದನೆ ಮಾಡಿದ್ದನ್ನು ಖಂಡಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಕುರಿತು ಟ್ವಿಟ್ಟರ್‌ನಲ್ಲಿ “ಎಐಎಂಪಿಎಲ್‌ಬಿಯ ಉಪಾಧ್ಯಕ್ಷ ಎಂ.ಎಲ್.ಜಲಾಲುದ್ದೀನ್ ಉಮ್ರಿಯವರನ್ನು ರಿಪಬ್ಲಿಕ್‌ ಟಿವಿಯು ಭಯೋತ್ಪಾದಕನೆಂದು ಸುಳ್ಳು ಆರೋಪಿಸಿದ್ದಕ್ಕಾಗಿ ತೀವ್ರವಾಗಿ ಖಂಡಿಸುತ್ತೇವೆ. ಮೆಕ್ಕಾ, ಮದೀನಾ ಮತ್ತು ಕುಡ್ಸ್‌ನ ಕುರಿತು ಧರ್ಮನಿಂದನೆ ಮಾಡಿದ್ದಕ್ಕೆ CNNnews18 ನ ಕ್ರಮವನ್ನು ಖಂಡಿಸುತ್ತೇವೆ. ಈ ಕುರಿತು ಸಾರ್ವಜನಿಕವಾಗಿ ಎರಡು ಚಾನೆಲ್‌ಗಳು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು. ಅದರ ಟ್ವೀಟ್‌ನಲ್ಲಿ, “ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವನ್ನು ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸ್ಪಷ್ಟೀಕರಣ ಮತ್ತು ಕ್ಷಮೆಯಾಚನೆಯನ್ನು ರಿಪಬ್ಲಿಕ್ ಟಿವಿಯಲ್ಲಿ ಸಂಜೆ 4:03 ಕ್ಕೆ ಪ್ರಸಾರ ಮಾಡಲಾಯಿತು. ಇದು ಅಜಾಗರೂಕ ದೋಷವಾಗಿದ್ದು, ಸಂಬಂಧಪಟ್ಟ ವೀಡಿಯೊದಲ್ಲಿ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವು ನಮ್ಮ ತಪ್ಪಾಗಿ ಪ್ರಸಾರವಾಯಿತು ಮತ್ತು ತಕ್ಷಣ ಸರಿಪಡಿಸಲಾಗಿದೆ”

ಅದರ ನಂತರದ ಟ್ವೀಟ್‌ನಲ್ಲಿ, “ರಿಪಬ್ಲಿಕ್ ಟಿವಿ ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತದೆ” ಎಂದು ಬರೆದಿದೆ.

ರಿಪಬ್ಲಿಕ್ ಟಿವಿ ತನ್ನ ವೆಬ್‌ಸೈಟ್‌ನಿಂದ ವಿವಾದಾತ್ಮಕ ವೀಡಿಯೊವನ್ನು ತೆಗೆದುಹಾಕಿರುವಂತೆ ತೋರುತ್ತಿದೆ ಮತ್ತು ಕಾಶ್ಮೀರದ ಜಮಾತ್-ಇ-ಇಸ್ಲಾಮಿ ವಿರುದ್ಧ ಸರಕಾರದ ದಬ್ಬಾಳಿಕೆಯ ಕುರಿತಾದ ತನ್ನ ವರದಿಯನ್ನು ನವೀಕರಿಸಿದೆ. ಕಣಿವೆಯ ಜಮಾತೆ-ಇ-ಇಸ್ಲಾಮಿ ಭಾರತದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಸಿಎನ್ಎನ್-ನ್ಯೂಸ್ 18 ಚಾನೆಲ್‌ನ ಅವಾಂತರಗಳು

ಮತ್ತೊಂದೆಡೆ, ಮುಕೇಶ್ ಅಂಬಾನಿಯ ರಿಲಯನ್ಸ್ ಗ್ರೂಪ್ ಒಡೆತನದ ಚಾನೆಲ್ ಸಿಎನ್ಎನ್-ನ್ಯೂಸ್ 18 ಚಾನೆಲ್‌ ಇನ್ನಷ್ಟು ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಈ ಚಾನೆಲ್‌ ವಿಶ್ವದಾದ್ಯಂತ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಎಐಎಂಪಿಎಲ್‌ಬಿಯು ಆರೋಪಿಸಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ವ್ಯಕ್ತಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ಆಸ್ತಿ ವಿವರಗಳನ್ನು ಚಾನೆಲ್ ಶನಿವಾರ ತನ್ನ ಪ್ರಸಾರದಲ್ಲಿ ತಿಳಿಸಿದೆ. ಆಗ ಅದು ‘ಬಹವಾಲ್‌ಪುರದ ಜೆಎಂ ಭಯೋತ್ಪಾದಕ ಕಾರ್ಖಾನೆ’ ಎಂಬ ಮುಖ್ಯಾಂಶಗಳನ್ನು ಪ್ರಸಾರ ಮಾಡುತ್ತಿರುವಾಗ, ಮೆಕ್ಕಾದ ಬೃಹತ್‌ ಮಸೀದಿಯ ಫೋಟೋಗಳನ್ನು ತೋರಿಸಿದೆ. ಮದೀನಾದ ಮಸೀದಿ ಮತ್ತು ಅಲ್-ಅಕ್ಸಾವನ್ನು ಕೂಡ ಅಜರ್‌ನ ಭಯೋತ್ಪಾದಕ ಕಾರ್ಖಾನೆಯ ಭಾಗವೆಂದು ಪ್ರಸಾರ ಮಾಡಿದೆ. ಈ ಮಸೀದಿಗಳನ್ನು ವಿಶ್ವದಾದ್ಯಂತ ಮುಸ್ಲಿಮರಿಗೆ ಮೂರು ಅತ್ಯಂತ ಪವಿತ್ರ ತಾಣವೆಂದು ಪರಿಗಣಿಸಲಾಗಿದೆ.

ಎಐಎಂಪಿಎಲ್‌ಬಿಯ ಪತ್ರವು ಸಿಎನ್ಎನ್-ನ್ಯೂಸ್ 18 ರ ನ್ಯೂಸ್ ಫ್ಲ್ಯಾಷ್ ಅನ್ನು ಚೇಷ್ಟೆಯೆಂದು, ಇಸ್ಲಾಂ ಧರ್ಮವನ್ನು ಕೆಣಕಲು ಮತ್ತು ಮುಸ್ಲಿಮರನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದೆ. ಜಗತ್ತಿನಾದ್ಯಂತ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಂಬಲಾಗದಷ್ಟು ಕೋಮುಪ್ರಚೋದನೆಯ ಪ್ರಸಾರಕ್ಕಾಗಿ ಚಾನೆಲ್ ಇನ್ನೂ ಕ್ಷಮೆಯಾಚಿಸಿಲ್ಲ. ಇಸ್ಲಾಂ ಧರ್ಮದ ಮೂರು ಪವಿತ್ರ ತಾಣಗಳ ಚಿತ್ರಗಳನ್ನು ‘ಜೆಎಂ ಭಯೋತ್ಪಾದಕ ಅಂಶ’ ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡುವ ಮೂಲಕ, ಚಾನೆಲ್ ಮುಸ್ಲಿಮರನ್ನು ಭಯೋತ್ಪಾದನೆಯೊಂದಿಗೆ ಜೋಡಿಸಲು ಪ್ರಯತ್ನಿಸಿದೆ.

ಒಟ್ಟಿನಲ್ಲಿ ಭಾರತದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಮುಸ್ಲಿಂ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ಸುಳ್ಳು ಸುದ್ದಿ ಹರಡುವಲ್ಲಿ ನಿರತವಾಗಿವೆ. ಆ ಮೂಲಕ ಪತ್ರಿಕೋದ್ಯಮದ ಮೂಲ ಆಶಯಗಳನ್ನು ಮಣ್ಣು ಮಾಡುತ್ತಿವೆ. ಆದರೆ ಇದರ ವಿರುದ್ಧ ದೂರು ನೀಡುವ, ಸುಳ್ಳುಗಳನ್ನು ಬಯಲು ಮಾಡುವ ಕೆಲಸವೂ ಕೂಡ ನಡೆಯುತ್ತಿರುವುದು ಆಶಾದಾಯಕ ಸಂಗತಿಯಾಗಿದೆ.

ಕೃಪೆ: ಜನತಕಾರಿಪೋರ್ಟರ್‌

(ಈ ಲೇಖನ 2019ರ ಮಾರ್ಚ್‌ 3 ರಂದು ಜನತಕಾರಿಪೋರ್ಟರ್‌ನಲ್ಲಿ ಪ್ರಕಟವಾಗಿದ್ದು. ಮಾಧ್ಯಮಗಳು ಹೇಗೆ ಸುಳ್ಳು ಹಬ್ಬಿಸುತ್ತವೆ ಎಂಬುದಕ್ಕೆ ಉದಾಹರಣೆಯಾಗಿದ್ದರಿಂದ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ)


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾರತದ ದೇಶದಲ್ಲಿನ ಮಾಧ್ಯಮದ ಸೂ……ಮಕ್ಕಳು ಹೀಗೆ ಸುಮ್ಮನೆ ಸುಳ್ಳಿನ ಸುದ್ದಿ ಹರಡಿ ಭಾರತದ ದೇಶವನ್ನು ಛಿದ್ರ ಛಿದ್ರ ಛಿದ್ರವಾಗಿ ಮಾಡಿದರೆ……ಇದಕ್ಕೆ ಮೂಲ ಪುರುಷನೇ ನರೇಂದ್ರ ಮೋದಿ ಅವನು ಗೆಲ್ಲಲು ಮುಖ್ಯ ಕಾರಣ 2 ಜಿ ಸ್ಪ್ರೆಕ್ಟ್ರಂ ಅದು ನಮಗೆ ಮಹಾನಾಯಕ ಸುಳ್ಳು ಎಂದೂ ಅಂದೇ ಅದರ ಬಗ್ಗೆ ಲೇಖನವೇ ಬರೆದಿದ್ದೇ, ಒಬ್ಬ ಸಾಮಾನ್ಯ ದಲಿತ ನಾಯಕನು ಅಷ್ಟು ದೊಡ್ಡ ಹಗರಣವನ್ನು ಮಾಡಲು 1,76,000 ಲಕ್ಷ ಕೋಟಿ ರೂ ಹಗರಣವನ್ನು ಸಾಧ್ಯವಿಲ್ಲವೆಂದು, ಆ ಹಣವನ್ನು ಇಡಲೂ ಸಹ ದಾರಿ ಅರಿಯಲು ಸಾಧ್ಯವಿಲ್ಲವೆಂದು. ಜೊತೆಗೆ ಆತ ಹೊಸಬ ಬಡತನದಿಂದಲೀ ಕುಗ್ರಾಮದಿಂದಲೀ ಬಂದವನು. ಜೊತೆಗೆ ಹಾಗೆಯೇ ಕದ್ದದ್ದು ನಿಜವೇ ಆದರೇ, ತನ್ನ ಗ್ರಾಮದಲ್ಲಿ ಜಮೀನನ್ನು ಕೆಲವೇ ಕೆಲವರು ಬೆರಳೆಣಿಕೆಯಷ್ಟು ಆಸ್ತಿ ಮಾಡಲೇ ಬೇಕಿತ್ತು. ಹೋಗಲೀ ಅವನದು ಜೀವನ ಬಾಳ್ವೇ ಐದು ಪೈಸೆಯಾದರು ಬದಲಾಗಲೇಬೇಕಿತ್ತು. ಜೊತೆಗೆ ಅಗಾಧವಾದ ಜ್ಞಾನವು ಚತುರತೆಯೂ ಮೋಸವು ಗೊತ್ತಿರಬೇಕಿತ್ತು. ಹೋಗಲೀ ಮನ ಮೋಹನ್ ಸಿಂಗ್ ರವರನ್ನು ಹೆದರಿಯಿರಬೇಕಿತ್ತು. ಆದರೇ, ಪ್ರಧಾನಿಗೇ ಗೌರವಿಸದ ಅಹಂ ಇರಬೇಕಾದರೇ ಅದರಲ್ಲಿ ಸತ್ಯ ನ್ಯಾಯ ಧರ್ಮ ನೀತಿ ನಿಯಮ ಇತ್ತು. ಅದಕ್ಕೆ ಮೊದಲು ಸ್ವಾಭಿಮಾನ ಸ್ವಂತಿಕೆಯೇ ತುಂಬಿದ್ದೇ ಕಂಡಿದ್ದೇವು.

    ಬರೆಯಲು ಬಹಳಷ್ಟು ಇದೇ ಸದ್ಯಕ್ಕೆ ಬೇಡ ನಿಲ್ಲಿಸುವೇ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...