Homeಮುಖಪುಟಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು.

- Advertisement -
- Advertisement -

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಮುಸ್ಲಿಮರ ಭಾವನೆಗಳನ್ನು ನೋಯಿಸಿದ ಆರೋಪದ ನಂತರ ಅಪರೂಪಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ. ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿಯಾದ ಸುದ್ದಿ ಪ್ರಸಾರ ಮಾಡಿ ಸಿಕ್ಕಿಬಿದ್ದ ನಂತರ ಅರ್ನಬ್‌ ಗೋಸ್ವಾಮಿಯ ಚಾನೆಲ್‌ನ ಅಸಾಧಾರಣ ಕ್ಷಮೆಯಾಚನೆಯು ಹೊರಬಿದ್ದಿದೆ.

ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪವನ್ನು ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿಯು ಕ್ಷಮೆಯಾಚಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಹಲವಾರು ಮುಸ್ಲಿಂ ಗುಂಪುಗಳು ರಿಪಬ್ಲಿಕ್‌ ಮತ್ತು ಸಿಎನ್‌ಎನ್-ನ್ಯೂಸ್ 18 ಚಾನೆಲ್‌‌ಗಳ ಸುಳ್ಳು ಸುದ್ದಿ ಹರಡುವ ಕೃತ್ಯವನ್ನು ಖಂಡಿಸಿ ಪತ್ರವೊಂದನ್ನು ಬರೆದಿದ್ದು, ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ. ಎಐಎಂಪಿಎಲ್‌ಬಿಯ ಪತ್ರದಲ್ಲಿ “ಸಿಎನ್‌ಎನ್-ನ್ಯೂಸ್ 18 ಚಾನೆಲ್‌ ಮುಸ್ಲಿಮರಿಗೆ ಪವಿತ್ರವಾದ ಮೂರು ತಾಣಗಳನ್ನು ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ‘ಭಯೋತ್ಪಾದಕ ಕಾರ್ಖಾನೆ’ಗೆ ಸಂಬಂಧಿಸಿವೆ ಎಂದು ತೋರಿಸುವ ಮೂಲಕ ಧರ್ಮನಿಂದನೆ ಮಾಡಿದ್ದನ್ನು ಖಂಡಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಕುರಿತು ಟ್ವಿಟ್ಟರ್‌ನಲ್ಲಿ “ಎಐಎಂಪಿಎಲ್‌ಬಿಯ ಉಪಾಧ್ಯಕ್ಷ ಎಂ.ಎಲ್.ಜಲಾಲುದ್ದೀನ್ ಉಮ್ರಿಯವರನ್ನು ರಿಪಬ್ಲಿಕ್‌ ಟಿವಿಯು ಭಯೋತ್ಪಾದಕನೆಂದು ಸುಳ್ಳು ಆರೋಪಿಸಿದ್ದಕ್ಕಾಗಿ ತೀವ್ರವಾಗಿ ಖಂಡಿಸುತ್ತೇವೆ. ಮೆಕ್ಕಾ, ಮದೀನಾ ಮತ್ತು ಕುಡ್ಸ್‌ನ ಕುರಿತು ಧರ್ಮನಿಂದನೆ ಮಾಡಿದ್ದಕ್ಕೆ CNNnews18 ನ ಕ್ರಮವನ್ನು ಖಂಡಿಸುತ್ತೇವೆ. ಈ ಕುರಿತು ಸಾರ್ವಜನಿಕವಾಗಿ ಎರಡು ಚಾನೆಲ್‌ಗಳು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು. ಅದರ ಟ್ವೀಟ್‌ನಲ್ಲಿ, “ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವನ್ನು ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸ್ಪಷ್ಟೀಕರಣ ಮತ್ತು ಕ್ಷಮೆಯಾಚನೆಯನ್ನು ರಿಪಬ್ಲಿಕ್ ಟಿವಿಯಲ್ಲಿ ಸಂಜೆ 4:03 ಕ್ಕೆ ಪ್ರಸಾರ ಮಾಡಲಾಯಿತು. ಇದು ಅಜಾಗರೂಕ ದೋಷವಾಗಿದ್ದು, ಸಂಬಂಧಪಟ್ಟ ವೀಡಿಯೊದಲ್ಲಿ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವು ನಮ್ಮ ತಪ್ಪಾಗಿ ಪ್ರಸಾರವಾಯಿತು ಮತ್ತು ತಕ್ಷಣ ಸರಿಪಡಿಸಲಾಗಿದೆ”

ಅದರ ನಂತರದ ಟ್ವೀಟ್‌ನಲ್ಲಿ, “ರಿಪಬ್ಲಿಕ್ ಟಿವಿ ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತದೆ” ಎಂದು ಬರೆದಿದೆ.

ರಿಪಬ್ಲಿಕ್ ಟಿವಿ ತನ್ನ ವೆಬ್‌ಸೈಟ್‌ನಿಂದ ವಿವಾದಾತ್ಮಕ ವೀಡಿಯೊವನ್ನು ತೆಗೆದುಹಾಕಿರುವಂತೆ ತೋರುತ್ತಿದೆ ಮತ್ತು ಕಾಶ್ಮೀರದ ಜಮಾತ್-ಇ-ಇಸ್ಲಾಮಿ ವಿರುದ್ಧ ಸರಕಾರದ ದಬ್ಬಾಳಿಕೆಯ ಕುರಿತಾದ ತನ್ನ ವರದಿಯನ್ನು ನವೀಕರಿಸಿದೆ. ಕಣಿವೆಯ ಜಮಾತೆ-ಇ-ಇಸ್ಲಾಮಿ ಭಾರತದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಸಿಎನ್ಎನ್-ನ್ಯೂಸ್ 18 ಚಾನೆಲ್‌ನ ಅವಾಂತರಗಳು

ಮತ್ತೊಂದೆಡೆ, ಮುಕೇಶ್ ಅಂಬಾನಿಯ ರಿಲಯನ್ಸ್ ಗ್ರೂಪ್ ಒಡೆತನದ ಚಾನೆಲ್ ಸಿಎನ್ಎನ್-ನ್ಯೂಸ್ 18 ಚಾನೆಲ್‌ ಇನ್ನಷ್ಟು ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಈ ಚಾನೆಲ್‌ ವಿಶ್ವದಾದ್ಯಂತ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಎಐಎಂಪಿಎಲ್‌ಬಿಯು ಆರೋಪಿಸಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ವ್ಯಕ್ತಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ಆಸ್ತಿ ವಿವರಗಳನ್ನು ಚಾನೆಲ್ ಶನಿವಾರ ತನ್ನ ಪ್ರಸಾರದಲ್ಲಿ ತಿಳಿಸಿದೆ. ಆಗ ಅದು ‘ಬಹವಾಲ್‌ಪುರದ ಜೆಎಂ ಭಯೋತ್ಪಾದಕ ಕಾರ್ಖಾನೆ’ ಎಂಬ ಮುಖ್ಯಾಂಶಗಳನ್ನು ಪ್ರಸಾರ ಮಾಡುತ್ತಿರುವಾಗ, ಮೆಕ್ಕಾದ ಬೃಹತ್‌ ಮಸೀದಿಯ ಫೋಟೋಗಳನ್ನು ತೋರಿಸಿದೆ. ಮದೀನಾದ ಮಸೀದಿ ಮತ್ತು ಅಲ್-ಅಕ್ಸಾವನ್ನು ಕೂಡ ಅಜರ್‌ನ ಭಯೋತ್ಪಾದಕ ಕಾರ್ಖಾನೆಯ ಭಾಗವೆಂದು ಪ್ರಸಾರ ಮಾಡಿದೆ. ಈ ಮಸೀದಿಗಳನ್ನು ವಿಶ್ವದಾದ್ಯಂತ ಮುಸ್ಲಿಮರಿಗೆ ಮೂರು ಅತ್ಯಂತ ಪವಿತ್ರ ತಾಣವೆಂದು ಪರಿಗಣಿಸಲಾಗಿದೆ.

ಎಐಎಂಪಿಎಲ್‌ಬಿಯ ಪತ್ರವು ಸಿಎನ್ಎನ್-ನ್ಯೂಸ್ 18 ರ ನ್ಯೂಸ್ ಫ್ಲ್ಯಾಷ್ ಅನ್ನು ಚೇಷ್ಟೆಯೆಂದು, ಇಸ್ಲಾಂ ಧರ್ಮವನ್ನು ಕೆಣಕಲು ಮತ್ತು ಮುಸ್ಲಿಮರನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದೆ. ಜಗತ್ತಿನಾದ್ಯಂತ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಂಬಲಾಗದಷ್ಟು ಕೋಮುಪ್ರಚೋದನೆಯ ಪ್ರಸಾರಕ್ಕಾಗಿ ಚಾನೆಲ್ ಇನ್ನೂ ಕ್ಷಮೆಯಾಚಿಸಿಲ್ಲ. ಇಸ್ಲಾಂ ಧರ್ಮದ ಮೂರು ಪವಿತ್ರ ತಾಣಗಳ ಚಿತ್ರಗಳನ್ನು ‘ಜೆಎಂ ಭಯೋತ್ಪಾದಕ ಅಂಶ’ ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡುವ ಮೂಲಕ, ಚಾನೆಲ್ ಮುಸ್ಲಿಮರನ್ನು ಭಯೋತ್ಪಾದನೆಯೊಂದಿಗೆ ಜೋಡಿಸಲು ಪ್ರಯತ್ನಿಸಿದೆ.

ಒಟ್ಟಿನಲ್ಲಿ ಭಾರತದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಮುಸ್ಲಿಂ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ಸುಳ್ಳು ಸುದ್ದಿ ಹರಡುವಲ್ಲಿ ನಿರತವಾಗಿವೆ. ಆ ಮೂಲಕ ಪತ್ರಿಕೋದ್ಯಮದ ಮೂಲ ಆಶಯಗಳನ್ನು ಮಣ್ಣು ಮಾಡುತ್ತಿವೆ. ಆದರೆ ಇದರ ವಿರುದ್ಧ ದೂರು ನೀಡುವ, ಸುಳ್ಳುಗಳನ್ನು ಬಯಲು ಮಾಡುವ ಕೆಲಸವೂ ಕೂಡ ನಡೆಯುತ್ತಿರುವುದು ಆಶಾದಾಯಕ ಸಂಗತಿಯಾಗಿದೆ.

ಕೃಪೆ: ಜನತಕಾರಿಪೋರ್ಟರ್‌

(ಈ ಲೇಖನ 2019ರ ಮಾರ್ಚ್‌ 3 ರಂದು ಜನತಕಾರಿಪೋರ್ಟರ್‌ನಲ್ಲಿ ಪ್ರಕಟವಾಗಿದ್ದು. ಮಾಧ್ಯಮಗಳು ಹೇಗೆ ಸುಳ್ಳು ಹಬ್ಬಿಸುತ್ತವೆ ಎಂಬುದಕ್ಕೆ ಉದಾಹರಣೆಯಾಗಿದ್ದರಿಂದ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ)


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾರತದ ದೇಶದಲ್ಲಿನ ಮಾಧ್ಯಮದ ಸೂ……ಮಕ್ಕಳು ಹೀಗೆ ಸುಮ್ಮನೆ ಸುಳ್ಳಿನ ಸುದ್ದಿ ಹರಡಿ ಭಾರತದ ದೇಶವನ್ನು ಛಿದ್ರ ಛಿದ್ರ ಛಿದ್ರವಾಗಿ ಮಾಡಿದರೆ……ಇದಕ್ಕೆ ಮೂಲ ಪುರುಷನೇ ನರೇಂದ್ರ ಮೋದಿ ಅವನು ಗೆಲ್ಲಲು ಮುಖ್ಯ ಕಾರಣ 2 ಜಿ ಸ್ಪ್ರೆಕ್ಟ್ರಂ ಅದು ನಮಗೆ ಮಹಾನಾಯಕ ಸುಳ್ಳು ಎಂದೂ ಅಂದೇ ಅದರ ಬಗ್ಗೆ ಲೇಖನವೇ ಬರೆದಿದ್ದೇ, ಒಬ್ಬ ಸಾಮಾನ್ಯ ದಲಿತ ನಾಯಕನು ಅಷ್ಟು ದೊಡ್ಡ ಹಗರಣವನ್ನು ಮಾಡಲು 1,76,000 ಲಕ್ಷ ಕೋಟಿ ರೂ ಹಗರಣವನ್ನು ಸಾಧ್ಯವಿಲ್ಲವೆಂದು, ಆ ಹಣವನ್ನು ಇಡಲೂ ಸಹ ದಾರಿ ಅರಿಯಲು ಸಾಧ್ಯವಿಲ್ಲವೆಂದು. ಜೊತೆಗೆ ಆತ ಹೊಸಬ ಬಡತನದಿಂದಲೀ ಕುಗ್ರಾಮದಿಂದಲೀ ಬಂದವನು. ಜೊತೆಗೆ ಹಾಗೆಯೇ ಕದ್ದದ್ದು ನಿಜವೇ ಆದರೇ, ತನ್ನ ಗ್ರಾಮದಲ್ಲಿ ಜಮೀನನ್ನು ಕೆಲವೇ ಕೆಲವರು ಬೆರಳೆಣಿಕೆಯಷ್ಟು ಆಸ್ತಿ ಮಾಡಲೇ ಬೇಕಿತ್ತು. ಹೋಗಲೀ ಅವನದು ಜೀವನ ಬಾಳ್ವೇ ಐದು ಪೈಸೆಯಾದರು ಬದಲಾಗಲೇಬೇಕಿತ್ತು. ಜೊತೆಗೆ ಅಗಾಧವಾದ ಜ್ಞಾನವು ಚತುರತೆಯೂ ಮೋಸವು ಗೊತ್ತಿರಬೇಕಿತ್ತು. ಹೋಗಲೀ ಮನ ಮೋಹನ್ ಸಿಂಗ್ ರವರನ್ನು ಹೆದರಿಯಿರಬೇಕಿತ್ತು. ಆದರೇ, ಪ್ರಧಾನಿಗೇ ಗೌರವಿಸದ ಅಹಂ ಇರಬೇಕಾದರೇ ಅದರಲ್ಲಿ ಸತ್ಯ ನ್ಯಾಯ ಧರ್ಮ ನೀತಿ ನಿಯಮ ಇತ್ತು. ಅದಕ್ಕೆ ಮೊದಲು ಸ್ವಾಭಿಮಾನ ಸ್ವಂತಿಕೆಯೇ ತುಂಬಿದ್ದೇ ಕಂಡಿದ್ದೇವು.

    ಬರೆಯಲು ಬಹಳಷ್ಟು ಇದೇ ಸದ್ಯಕ್ಕೆ ಬೇಡ ನಿಲ್ಲಿಸುವೇ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...