Homeಮುಖಪುಟಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು.

- Advertisement -
- Advertisement -

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಮುಸ್ಲಿಮರ ಭಾವನೆಗಳನ್ನು ನೋಯಿಸಿದ ಆರೋಪದ ನಂತರ ಅಪರೂಪಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ. ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿಯಾದ ಸುದ್ದಿ ಪ್ರಸಾರ ಮಾಡಿ ಸಿಕ್ಕಿಬಿದ್ದ ನಂತರ ಅರ್ನಬ್‌ ಗೋಸ್ವಾಮಿಯ ಚಾನೆಲ್‌ನ ಅಸಾಧಾರಣ ಕ್ಷಮೆಯಾಚನೆಯು ಹೊರಬಿದ್ದಿದೆ.

ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪವನ್ನು ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿಯು ಕ್ಷಮೆಯಾಚಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಹಲವಾರು ಮುಸ್ಲಿಂ ಗುಂಪುಗಳು ರಿಪಬ್ಲಿಕ್‌ ಮತ್ತು ಸಿಎನ್‌ಎನ್-ನ್ಯೂಸ್ 18 ಚಾನೆಲ್‌‌ಗಳ ಸುಳ್ಳು ಸುದ್ದಿ ಹರಡುವ ಕೃತ್ಯವನ್ನು ಖಂಡಿಸಿ ಪತ್ರವೊಂದನ್ನು ಬರೆದಿದ್ದು, ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ. ಎಐಎಂಪಿಎಲ್‌ಬಿಯ ಪತ್ರದಲ್ಲಿ “ಸಿಎನ್‌ಎನ್-ನ್ಯೂಸ್ 18 ಚಾನೆಲ್‌ ಮುಸ್ಲಿಮರಿಗೆ ಪವಿತ್ರವಾದ ಮೂರು ತಾಣಗಳನ್ನು ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ‘ಭಯೋತ್ಪಾದಕ ಕಾರ್ಖಾನೆ’ಗೆ ಸಂಬಂಧಿಸಿವೆ ಎಂದು ತೋರಿಸುವ ಮೂಲಕ ಧರ್ಮನಿಂದನೆ ಮಾಡಿದ್ದನ್ನು ಖಂಡಿಸಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಕುರಿತು ಟ್ವಿಟ್ಟರ್‌ನಲ್ಲಿ “ಎಐಎಂಪಿಎಲ್‌ಬಿಯ ಉಪಾಧ್ಯಕ್ಷ ಎಂ.ಎಲ್.ಜಲಾಲುದ್ದೀನ್ ಉಮ್ರಿಯವರನ್ನು ರಿಪಬ್ಲಿಕ್‌ ಟಿವಿಯು ಭಯೋತ್ಪಾದಕನೆಂದು ಸುಳ್ಳು ಆರೋಪಿಸಿದ್ದಕ್ಕಾಗಿ ತೀವ್ರವಾಗಿ ಖಂಡಿಸುತ್ತೇವೆ. ಮೆಕ್ಕಾ, ಮದೀನಾ ಮತ್ತು ಕುಡ್ಸ್‌ನ ಕುರಿತು ಧರ್ಮನಿಂದನೆ ಮಾಡಿದ್ದಕ್ಕೆ CNNnews18 ನ ಕ್ರಮವನ್ನು ಖಂಡಿಸುತ್ತೇವೆ. ಈ ಕುರಿತು ಸಾರ್ವಜನಿಕವಾಗಿ ಎರಡು ಚಾನೆಲ್‌ಗಳು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ತನ್ನ ನಕಲಿ ವರದಿಯ ಸಂಭವನೀಯ ಪರಿಣಾಮಗಳನ್ನು ಅರಿತುಕೊಂಡ ರಿಪಬ್ಲಿಕ್ ಟಿವಿಯು ಮಿಂಚಿನ ವೇಗದಲ್ಲಿ ಸಾಗಿ ಮುಸ್ಲಿಮರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ಅಪರೂಪಕ್ಕೆ ಕ್ಷಮೆಯಾಚಿಸಿತು. ಅದರ ಟ್ವೀಟ್‌ನಲ್ಲಿ, “ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವನ್ನು ತಪ್ಪಾಗಿ ಪ್ರಸಾರ ಮಾಡಿದ್ದಕ್ಕಾಗಿ ಸ್ಪಷ್ಟೀಕರಣ ಮತ್ತು ಕ್ಷಮೆಯಾಚನೆಯನ್ನು ರಿಪಬ್ಲಿಕ್ ಟಿವಿಯಲ್ಲಿ ಸಂಜೆ 4:03 ಕ್ಕೆ ಪ್ರಸಾರ ಮಾಡಲಾಯಿತು. ಇದು ಅಜಾಗರೂಕ ದೋಷವಾಗಿದ್ದು, ಸಂಬಂಧಪಟ್ಟ ವೀಡಿಯೊದಲ್ಲಿ ಸೈಯದ್ ಜಲಾಲುದ್ದೀನ್ ಉಮ್ರಿ ಅವರ ಚಿತ್ರವು ನಮ್ಮ ತಪ್ಪಾಗಿ ಪ್ರಸಾರವಾಯಿತು ಮತ್ತು ತಕ್ಷಣ ಸರಿಪಡಿಸಲಾಗಿದೆ”

ಅದರ ನಂತರದ ಟ್ವೀಟ್‌ನಲ್ಲಿ, “ರಿಪಬ್ಲಿಕ್ ಟಿವಿ ಮೌಲಾನಾ ಸೈಯದ್ ಜಲಾಲುದ್ದೀನ್ ಉಮ್ರಿಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತದೆ” ಎಂದು ಬರೆದಿದೆ.

ರಿಪಬ್ಲಿಕ್ ಟಿವಿ ತನ್ನ ವೆಬ್‌ಸೈಟ್‌ನಿಂದ ವಿವಾದಾತ್ಮಕ ವೀಡಿಯೊವನ್ನು ತೆಗೆದುಹಾಕಿರುವಂತೆ ತೋರುತ್ತಿದೆ ಮತ್ತು ಕಾಶ್ಮೀರದ ಜಮಾತ್-ಇ-ಇಸ್ಲಾಮಿ ವಿರುದ್ಧ ಸರಕಾರದ ದಬ್ಬಾಳಿಕೆಯ ಕುರಿತಾದ ತನ್ನ ವರದಿಯನ್ನು ನವೀಕರಿಸಿದೆ. ಕಣಿವೆಯ ಜಮಾತೆ-ಇ-ಇಸ್ಲಾಮಿ ಭಾರತದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಸಿಎನ್ಎನ್-ನ್ಯೂಸ್ 18 ಚಾನೆಲ್‌ನ ಅವಾಂತರಗಳು

ಮತ್ತೊಂದೆಡೆ, ಮುಕೇಶ್ ಅಂಬಾನಿಯ ರಿಲಯನ್ಸ್ ಗ್ರೂಪ್ ಒಡೆತನದ ಚಾನೆಲ್ ಸಿಎನ್ಎನ್-ನ್ಯೂಸ್ 18 ಚಾನೆಲ್‌ ಇನ್ನಷ್ಟು ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಈ ಚಾನೆಲ್‌ ವಿಶ್ವದಾದ್ಯಂತ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಎಐಎಂಪಿಎಲ್‌ಬಿಯು ಆರೋಪಿಸಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ವ್ಯಕ್ತಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ಆಸ್ತಿ ವಿವರಗಳನ್ನು ಚಾನೆಲ್ ಶನಿವಾರ ತನ್ನ ಪ್ರಸಾರದಲ್ಲಿ ತಿಳಿಸಿದೆ. ಆಗ ಅದು ‘ಬಹವಾಲ್‌ಪುರದ ಜೆಎಂ ಭಯೋತ್ಪಾದಕ ಕಾರ್ಖಾನೆ’ ಎಂಬ ಮುಖ್ಯಾಂಶಗಳನ್ನು ಪ್ರಸಾರ ಮಾಡುತ್ತಿರುವಾಗ, ಮೆಕ್ಕಾದ ಬೃಹತ್‌ ಮಸೀದಿಯ ಫೋಟೋಗಳನ್ನು ತೋರಿಸಿದೆ. ಮದೀನಾದ ಮಸೀದಿ ಮತ್ತು ಅಲ್-ಅಕ್ಸಾವನ್ನು ಕೂಡ ಅಜರ್‌ನ ಭಯೋತ್ಪಾದಕ ಕಾರ್ಖಾನೆಯ ಭಾಗವೆಂದು ಪ್ರಸಾರ ಮಾಡಿದೆ. ಈ ಮಸೀದಿಗಳನ್ನು ವಿಶ್ವದಾದ್ಯಂತ ಮುಸ್ಲಿಮರಿಗೆ ಮೂರು ಅತ್ಯಂತ ಪವಿತ್ರ ತಾಣವೆಂದು ಪರಿಗಣಿಸಲಾಗಿದೆ.

ಎಐಎಂಪಿಎಲ್‌ಬಿಯ ಪತ್ರವು ಸಿಎನ್ಎನ್-ನ್ಯೂಸ್ 18 ರ ನ್ಯೂಸ್ ಫ್ಲ್ಯಾಷ್ ಅನ್ನು ಚೇಷ್ಟೆಯೆಂದು, ಇಸ್ಲಾಂ ಧರ್ಮವನ್ನು ಕೆಣಕಲು ಮತ್ತು ಮುಸ್ಲಿಮರನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದೆ. ಜಗತ್ತಿನಾದ್ಯಂತ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಂಬಲಾಗದಷ್ಟು ಕೋಮುಪ್ರಚೋದನೆಯ ಪ್ರಸಾರಕ್ಕಾಗಿ ಚಾನೆಲ್ ಇನ್ನೂ ಕ್ಷಮೆಯಾಚಿಸಿಲ್ಲ. ಇಸ್ಲಾಂ ಧರ್ಮದ ಮೂರು ಪವಿತ್ರ ತಾಣಗಳ ಚಿತ್ರಗಳನ್ನು ‘ಜೆಎಂ ಭಯೋತ್ಪಾದಕ ಅಂಶ’ ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡುವ ಮೂಲಕ, ಚಾನೆಲ್ ಮುಸ್ಲಿಮರನ್ನು ಭಯೋತ್ಪಾದನೆಯೊಂದಿಗೆ ಜೋಡಿಸಲು ಪ್ರಯತ್ನಿಸಿದೆ.

ಒಟ್ಟಿನಲ್ಲಿ ಭಾರತದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಮುಸ್ಲಿಂ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ಸುಳ್ಳು ಸುದ್ದಿ ಹರಡುವಲ್ಲಿ ನಿರತವಾಗಿವೆ. ಆ ಮೂಲಕ ಪತ್ರಿಕೋದ್ಯಮದ ಮೂಲ ಆಶಯಗಳನ್ನು ಮಣ್ಣು ಮಾಡುತ್ತಿವೆ. ಆದರೆ ಇದರ ವಿರುದ್ಧ ದೂರು ನೀಡುವ, ಸುಳ್ಳುಗಳನ್ನು ಬಯಲು ಮಾಡುವ ಕೆಲಸವೂ ಕೂಡ ನಡೆಯುತ್ತಿರುವುದು ಆಶಾದಾಯಕ ಸಂಗತಿಯಾಗಿದೆ.

ಕೃಪೆ: ಜನತಕಾರಿಪೋರ್ಟರ್‌

(ಈ ಲೇಖನ 2019ರ ಮಾರ್ಚ್‌ 3 ರಂದು ಜನತಕಾರಿಪೋರ್ಟರ್‌ನಲ್ಲಿ ಪ್ರಕಟವಾಗಿದ್ದು. ಮಾಧ್ಯಮಗಳು ಹೇಗೆ ಸುಳ್ಳು ಹಬ್ಬಿಸುತ್ತವೆ ಎಂಬುದಕ್ಕೆ ಉದಾಹರಣೆಯಾಗಿದ್ದರಿಂದ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ)


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾರತದ ದೇಶದಲ್ಲಿನ ಮಾಧ್ಯಮದ ಸೂ……ಮಕ್ಕಳು ಹೀಗೆ ಸುಮ್ಮನೆ ಸುಳ್ಳಿನ ಸುದ್ದಿ ಹರಡಿ ಭಾರತದ ದೇಶವನ್ನು ಛಿದ್ರ ಛಿದ್ರ ಛಿದ್ರವಾಗಿ ಮಾಡಿದರೆ……ಇದಕ್ಕೆ ಮೂಲ ಪುರುಷನೇ ನರೇಂದ್ರ ಮೋದಿ ಅವನು ಗೆಲ್ಲಲು ಮುಖ್ಯ ಕಾರಣ 2 ಜಿ ಸ್ಪ್ರೆಕ್ಟ್ರಂ ಅದು ನಮಗೆ ಮಹಾನಾಯಕ ಸುಳ್ಳು ಎಂದೂ ಅಂದೇ ಅದರ ಬಗ್ಗೆ ಲೇಖನವೇ ಬರೆದಿದ್ದೇ, ಒಬ್ಬ ಸಾಮಾನ್ಯ ದಲಿತ ನಾಯಕನು ಅಷ್ಟು ದೊಡ್ಡ ಹಗರಣವನ್ನು ಮಾಡಲು 1,76,000 ಲಕ್ಷ ಕೋಟಿ ರೂ ಹಗರಣವನ್ನು ಸಾಧ್ಯವಿಲ್ಲವೆಂದು, ಆ ಹಣವನ್ನು ಇಡಲೂ ಸಹ ದಾರಿ ಅರಿಯಲು ಸಾಧ್ಯವಿಲ್ಲವೆಂದು. ಜೊತೆಗೆ ಆತ ಹೊಸಬ ಬಡತನದಿಂದಲೀ ಕುಗ್ರಾಮದಿಂದಲೀ ಬಂದವನು. ಜೊತೆಗೆ ಹಾಗೆಯೇ ಕದ್ದದ್ದು ನಿಜವೇ ಆದರೇ, ತನ್ನ ಗ್ರಾಮದಲ್ಲಿ ಜಮೀನನ್ನು ಕೆಲವೇ ಕೆಲವರು ಬೆರಳೆಣಿಕೆಯಷ್ಟು ಆಸ್ತಿ ಮಾಡಲೇ ಬೇಕಿತ್ತು. ಹೋಗಲೀ ಅವನದು ಜೀವನ ಬಾಳ್ವೇ ಐದು ಪೈಸೆಯಾದರು ಬದಲಾಗಲೇಬೇಕಿತ್ತು. ಜೊತೆಗೆ ಅಗಾಧವಾದ ಜ್ಞಾನವು ಚತುರತೆಯೂ ಮೋಸವು ಗೊತ್ತಿರಬೇಕಿತ್ತು. ಹೋಗಲೀ ಮನ ಮೋಹನ್ ಸಿಂಗ್ ರವರನ್ನು ಹೆದರಿಯಿರಬೇಕಿತ್ತು. ಆದರೇ, ಪ್ರಧಾನಿಗೇ ಗೌರವಿಸದ ಅಹಂ ಇರಬೇಕಾದರೇ ಅದರಲ್ಲಿ ಸತ್ಯ ನ್ಯಾಯ ಧರ್ಮ ನೀತಿ ನಿಯಮ ಇತ್ತು. ಅದಕ್ಕೆ ಮೊದಲು ಸ್ವಾಭಿಮಾನ ಸ್ವಂತಿಕೆಯೇ ತುಂಬಿದ್ದೇ ಕಂಡಿದ್ದೇವು.

    ಬರೆಯಲು ಬಹಳಷ್ಟು ಇದೇ ಸದ್ಯಕ್ಕೆ ಬೇಡ ನಿಲ್ಲಿಸುವೇ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...