HomeಮುಖಪುಟTRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗಾಗಿ ಅರ್ನಾಬ್ ಗೋಸ್ವಾಮಿಗೆ ಅವರಿಗೆ ಯಾವುದೇ ವಿಶೇಷ ಅವಕಾಶಗಳನ್ನು ನೀಡುವುದು ಸಾಧ್ಯವಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಇಡೀ ದೇಶದ ಗಮನ ಸೆಳೆದಿರುವ ಟಿಆರ್‌ಪಿ ತಿರುಚಿದ ಪ್ರಕರಣದಲ್ಲಿ ಆಂಗ್ಲ ಸುದ್ದಿ ಮಾಧ್ಯಮವಾದ ರಿಪಬ್ಲಿಕ್‌ ಚಾನೆಲ್‌ನ ಸಂಪಾದಕ ಅರ್ನಾಬ್‌ ಗೋಸ್ವಾಮಿ ಇದೀಗ ಪೇಚಿಗೆ ಸಿಲುಕಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಂಬೆ ಹೈಕೋರ್ಟ್‌‌ಗೆ ಸ್ಪಷ್ಟನೆ ನೀಡಿರುವ ಮುಂಬೈ ಅಪರಾಧ ವಿಭಾಗದ ಪೊಲೀಸರು ವಿಚಾರಣೆ ಹಾಜರಾಗುವಂತೆ ಅರ್ನಾಬ್‌ ಗೋಸ್ವಾಮಿ ಅವರಿಗೆ ಸಮನ್ಸ್‌ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಹಿಂದೆ ರಿಪಬ್ಲಿಕ್ ಟಿವಿಯ ಸಿಇಓ ವಿಕಾಸ್ ಖಾಂಚಂದಾನಿ ಅವರನ್ನು ಸಹ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಈಗಾಗಲೇ ಅನೇಕರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ರಿಪಬ್ಲಿಕ್‌ ಟಿವಿ ಸಂಪಾದಕ 46 ವರ್ಷದ ಅರ್ನಾಬ್ ಗೋಸ್ವಾಮಿ ಸಹ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ತಮ್ಮನ್ನು ಪೊಲೀಸರು ಬಂಧಿಸದಂತೆ ಹಾಗೂ ಬಲವಂತದ ಯಾವುದೇ ಕ್ರಮಗಳನ್ನು ಜರುಗಿಸದಂತೆ ಆದೇಶಿಸಬೇಕು ಎಂದು ಒತ್ತಾಯಿಸಿ ಬಾಂಬೆ ಕೋರ್ಟ್‌‌ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಇಂದು ವಿಚಾರಣೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಈ ವೇಳೆ ಮುಂಬೈ ಪೊಲೀಸರ ಪರವಾಗಿ ಕೋರ್ಟ್‌‌ಗೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌, “ಟಿಆರ್‌ಪಿ ತಿರುಚಿದ ಹಗರಣದಲ್ಲಿ ಅರ್ನಾಬ್ ಗೋಸ್ವಾಮಿ ಅವರೂ ಸಹ ಪ್ರಮುಖ ಆರೋಪಿ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗಾಗಿ ಅರ್ನಾಬ್ ಗೋಸ್ವಾಮಿಗೆ ಅವರಿಗೆ ಯಾವುದೇ ವಿಶೇಷ ಅವಕಾಶಗಳನ್ನು ನೀಡುವುದು ಸಾಧ್ಯವಿಲ್ಲ. ಪೊಲೀಸರಿಗೆ ಅಗತ್ಯವಿದ್ದರೆ ಅವರನ್ನೂ ಸಹ ವಿಚಾರಣೆಗೆ ಒಳಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ. ಈ ಮೂಲಕ ಸಂಪಾದಕ ಅರ್ನಾಬ್ ಗೋಸ್ವಾಮಿ ಯಾವುದೇ ಸಂದರ್ಭದಲ್ಲಿ ಬಂಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೋರ್ಟ್‌ ವಿಚಾರಣೆ ವೇಳೆ ಅರ್ನಾಬ್ ಗೋಸ್ವಾಮಿ ಪರವಾಗಿ ಹಾಜರಾದ ಅವರ ಸಲಹೆಗಾರ ಹಾಗೂ ಹಿರಿಯ ವಕೀಲ ಹರೀಶ್‌ ಸಾಲ್ವೆ, “ಮುಂಬೈ ಪೊಲೀಸರು ಸಮನ್ಸ್‌ ಜಾರಿ ಮಾಡಿದರೆ ನಾವು ಅದನ್ನು ಗೌರವಿಸುತ್ತೇವೆ ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಿಪಬ್ಲಿಕ್
PC: Picuki

ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ಟಿಆರ್‌‌ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನೋಂದಾಯಿಸಿದ FIR ನ್ನು ರದ್ದುಪಡಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಮತ್ತು ಆರ್ ಭಾರತ್ ನ್ಯೂಸ್ ಚಾನೆಲ್‌ಗಳ ಮಾತೃಸಂಸ್ಥೆಯಾದ ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್‌ಎಸ್ ಶಿಂಧೆ ಮತ್ತು ಮಕರಂದ್ ಕಾರ್ನಿಕ್ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಟಿಆರ್‌ಪಿಗಳನ್ನು ಅಳೆಯುವ ಉದ್ದೇಶದಿಂದ ಅಳವಡಿಸಿದ ಬಾರೋಮೀಟರ್‌ಗಳನ್ನು ಇರಿಸಿದ ಮನೆಗಳಿಗೆ ಹಣ ನೀಡುವ ಮೂಲಕ ತಮ್ಮ ಚಾನೆಲ್‌ಗಳ ಟಿಆರ್‌ಪಿಯನ್ನು ಮೋಸದಿಂದ ಹೆಚ್ಚಿಸಿದ್ದಾರೆಂದು ಮುಂಬೈ ಅಪರಾಧ ವಿಭಾಗವು ಅಕ್ಟೋಬರ್ 7 ರಂದು ಕಂಡಿವಲಿ ಪೊಲೀಸ್‌ ಠಾಣೆಯಲ್ಲಿ FIR ನೋಂದಾಯಿಸಿತ್ತು.

ಮರುದಿನ ನಡೆದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಂಬೈ ಪೊಲೀಸ್ ಆಯುಕ್ತ (ಸಿಪಿ) ಪರಮ್ ಬಿರ್ ಸಿಂಗ್, ಬಂಧಿತ ಆರೋಪಿಗಳಲ್ಲಿ ಒಬ್ಬ ತಾನು ರಿಪಬ್ಲಿಕ್ ಟಿವಿಯಲ್ಲಿ ಕೆಲಸ ಮಾಡುತ್ತಿರುವುದಾಗಿಯು ಮತ್ತು ವಾಹಿನಿಯ ಟಿಆರ್‌ಪಿಗಳನ್ನು ತಿರುಚಲು ಮನೆಗಳಿಗೆ ಹಣ ಪಾವತಿ ಮಾಡುತ್ತಿರುವುದಾಗಿ ಬಹಿರಂಗಪಡಿಸಿದ್ದಾನೆ  ಎಂದು ಹೇಳಿದ್ದರು.


ಇದನ್ನೂ ಓದಿ: ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...